ದೇವಚಳ್ಳ : ಬೃಹತ್ ರಕ್ತದಾನ ಶಿಬಿರ – 108 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲು ಅವರಿಗೆ ಗೌರವಾರ್ಪಣೆ

ಗ್ರಾಮ ಪಂಚಾಯತ್ ದೇವಚಳ್ಳ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.), ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ,  ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿಗಳ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಸೆ.04 ರಂದು...

ಅಜ್ಜಾವರ : ತಾಲೂಕು ಮಟ್ಟದ ಮಕ್ಕಳ ಫುಟ್ ಬಾಲ್ ಪಂದ್ಯಾಟ

ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಅಜ್ಜಾವರ ಮತ್ತು  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ  ಅಜ್ಜಾವರ ಪ್ರೌಢಶಾಲಾ  ಮೈದಾನದಲ್ಲಿ ಸೆ.02 ರಂದು ನಡೆಯಿತು.ಇದರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ವಹಿಸಿದ್ದರು.ಕಾರ್ಯಕ್ರಮದ...
Ad Widget

ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ ನಡೆಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಭರತ್ ನೆರವೇರಿಸಿದರು.ಕಾರ್ಯಕ್ರಮದ...

ತಾ.ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ – ವಿದ್ಯಾ ಬೋಧಿನಿ ಎರಡು ವಿಭಾಗದಲ್ಲೂ ಪ್ರಥಮ

ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಉದ್ಘಾಟನೆ

ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಸೆ.3 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು   ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಶಿಕ್ಷಕ ಪ್ರವೀಣ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು, ಈ ಉದ್ಘಾಟನಾ ಸಮಾರಂಭದ...

ಕಲ್ಲುಗುಂಡಿ : ಟ್ಯಾಂಕರ್ ಹಾಗೂ ಕಾರು ಅಪಘಾತ ; ಮಹಿಳೆ ಮೃತ್ಯು

ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇತರರೂ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಕೈ ಬರಹದ ಮೂಲಕ ಪವಿತ್ರ ಕುರ್ ಆನ್ ಬರೆದು ಸಾಧನೆ ಮಾಡಿದ ಯುವತಿಗೆ ಸುಳ್ಯದ ಮುಖಂಡರಿಂದ ಅಭಿನಂದನೆ ; “ಸಮರ್ಪಣೆ, ತಾಳ್ಮೆ ಮತ್ತು ತ್ಯಾಗ ಸಾದನೆಯ ರಹದಾರಿ” – ಕೆ.ಎಂ ಮುಸ್ತಫ

ಪುತ್ತೂರಿನ ಬೈತಡ್ಕ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷ ಹಾಜಿ ಬಿ.ಪಿ ಇಸ್ಮಾಯಿಲ್ ರವರ ಪುತ್ರಿ ಫಾತಿಮತ್ ಸಜ್ ಲಾ ತನ್ನ ಕಾಲೇಜು ವಿದ್ಯಾಭ್ಯಾಸದ ಜತೆಗೆ ಪವಿತ್ರ ಕುರಾನ್ ಅನ್ನು ಕೈ ಬರಹದ ಮೂಲಕ ಬರೆದು ಅಪೂರ್ವ ಸಾಧನೆ ಮಾಡಿರುತ್ತಾರೆ ಇವರ ಸಾಧನೆಯನ್ನು ಗುರುತಿಸಿ ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರ ಮನೆಗೆ ತೆರಳಿ ಸನ್ಮಾನಿಸಿದರು.‌ಸನ್ಮಾನ...

ಮುಖ್ಯಮಂತ್ರಿಯ ದಿನಕ್ಕೊಂದು ಹೇಳಿಕೆ ಬಿಜೆಪಿ ಹಾಗೂ ಸಮಾಜ ಒಪ್ಪುವಂಥದಲ್ಲಾ – ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಬದಲು ಸತ್ಯಾಸತ್ಯತೆಯನ್ನು ಶೀಘ್ರವಾಗಿ ಜನರಿಗೆ ತಿಳಿಸಿ – ವೆಂಕಟ್ ವಳಲಂಬೆ

ಮುಖ್ಯಮoತ್ರಿ ಸಿದ್ದರಾಮಯ್ಯನವರೇ ನೀವು ಸ್ಪಷ್ಟಪಡಿಸಿ ಯಾರ ಪರ ಎಂದು. ನಾವು ಬಹಿರಂಗವಾಗಿ ಸಾವಿರಾರು ಭಕ್ತರ ಮುಂದೆ ಧರ್ಮಸ್ಥಳದಲ್ಲಿ ಬಹಿರಂಗ ಸಭೆಯಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಾಡುವ ನಿಮ್ಮ ಕಾಂಗ್ರೆಸ್ಸಿನ ಹಾಗೂ ಇದರ ಹಿಂದಿರುವ ನಿಮ್ಮ ಪ್ರೇರಣೆಯ ದುಷ್ಟ ಶಕ್ತಿಗಳ ನಿಜಬಣ್ಣವನ್ನು ಸಮಾಜಕ್ಕೂ ಸ್ಪಷ್ಟಪಡಿಸಿದೆ. ಕಾಂಗ್ರೆಸ್ಸು ಪದೇ ಪದೇ ಬಿಜೆಪಿಯ ಮೇಲೆ ಗೂಬೆ ಕೂರಿಸಿ ಜನರನ್ನು...

ಕಲ್ಚರ್ಪೆ ಸಿರಿಕುರಲ್ ನಗರದಲ್ಲಿ ಕಾಡಾನೆ ದಾಳಿ ಕೃಷಿ ನಾಶ

ಆಲೆಟ್ಟಿ ಗ್ರಾಮದ ಕಲ್ಚರ್ಪೆ ಸಿರಿಕುರಲ್ ನಗರದಲ್ಲಿ ನಿನ್ನೆ ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ಕೃಷಿ ನಾಶ ಹೊಂದಿದೆ. ಸಿರಿಕುರಲ್ ನಗರ ನಿವಾಸಿ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್ ರವರ ತೆಂಗಿನ ಮರಗಳು ಸೇರಿದಂತೆ ಸ್ಥಳೀಯ ನಿವಾಸಿಗಳ ಕೃಷಿ ಬೆಳೆಗಳು ಕಾಡಾನೆ ದಾಳಿಯಿಂದ ನಾಶವಾಗಿದೆ. ಅಪಾರ ನಷ್ಟ ಅನುಭವಿಸಿದ ಸ್ಥಳೀಯರು ಕಾಡಾನೆ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ ದೊರಕಿದ್ದು, ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ವಿತರಿಸಿದರು.ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ...
Loading posts...

All posts loaded

No more posts

error: Content is protected !!