- Saturday
- June 20th, 2026
ಕಡಬ ತಾಲೂಕಿನ ಬಲ್ಯ ಎಂಬಲ್ಲಿ ನೂತನವಾಗಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಆಟೋ ರಿಕ್ಷಾ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಲ್ಯ ಬೂತ್ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಪಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈಮನವಳಿಕೆ, ಬಿಜೆಪಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣ ಎಮ್.ಅರ್, ಶ್ರೀ...
ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್...
ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು, ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್ ನೇಮಕಾತಿಯ ಫಲಿತಾಂಶ ಸಾಕ್ಷಿಯಾಗಿದೆ. ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿಯ ಫಲವಾಗಿ ಅಕಾಡೆಮಿಯ 5 ವಿದ್ಯಾರ್ಥಿಗಳು...
ದಿನಾಂಕ : 03 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಸುಬ್ರಹ್ಮಣ್ಯ ಜೂನ್ 02 : ದಕ್ಷಿಣ ಭಾರತದ ಹೆಸರಾಂತ ಪುಣ್ಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿನಿತ್ಯ ಭಕ್ತರ ಸಂದಣಿ ಇರುತ್ತದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ 80% ಭಕ್ತರು ಆದಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಆದಿ ನಾಗನ ದರ್ಶನ ಪಡೆದು ತೀರ್ಥಪ್ರಸಾದ ಸ್ವೀಕರಿಸಿ ಧನ್ಯರಾಗುತ್ತಾರೆ. ಕುಕ್ಕೆ ಕ್ಷೇತ್ರದ ಮಹತ್ತರ ಸೇವೆಯಾದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:03-06-2026 ಬುಧವಾರ*01,ಮೇಷರಾಶಿ*,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:-ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ನವಗ್ರಹ ಮಂತ್ರ ಜಪಿಸಿ, *02,ವೃಷಭರಾಶಿ*,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ...
ಸವೇರಪುರ ಶಾಲೆಯಲ್ಲಿ ಜ್ಞಾನ ದೇಗುಲಕ್ಕೆ ಮರಳಿ ಬರುವ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕಾರ್ಯಕ್ರಮ ನಡೆಯಿತು. ಶಾಲೆಯ ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮ ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಆಕರ್ಷಕ ವಾದ್ಯಘೋಷಗಳ ಮೆರವಣಿಗೆಯೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ಶಾಲೆಗೆ ಸ್ವಾಗತಿಸಲಾಯಿತು. ವಾದ್ಯಗಳ ನಿನಾದ ವಿದ್ಯಾರ್ಥಿಗಳಲ್ಲಿ ಹೊಸ...
ಸುಳ್ಯ: ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿಯ ೨೦೨೬-೨೭ನೇ ಸಾಲಿನ ಅಧ್ಯಕ್ಷರಾಗಿ ಜಾಕೆ ಸದಾನಂದ, ಸಂಚಾಲಕರಾಗಿ ಸದಾನಂದ ಮಾವಜಿ ಪುನರಾಯ್ಕೆಯಾದರು.ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಅಧ್ಯಕ್ಷ ಜಾಕೆ ಸದಾನಂದ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.ಖಜಾಂಜಿಯಾಗಿ ಶ್ರೀನಿವಾಸ ಭಟ್ ಡಿ., ಉಪಾಧ್ಯಕ್ಷರಾಗಿ ರಾಮಚಂದ್ರ ಬುಡ್ಲೆಗುತ್ತು, ಜತೆಕಾರ್ಯದರ್ಶಿಯಾಗಿ ಜಯರಾಮ ರೈ...
ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಪೋಡಿಯಮ್(ಸ್ಪೀಚ್ ಸ್ಟ್ಯಾಂಡ್) ಅನ್ನು ಶಾಲಾ ಪ್ರಾರಂಭೋತ್ಸವದ ದಿನ ಸೋಮವಾರದಂದು ಹಸ್ತಾಂತರಿಸಲಾಯಿತು. ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಎ ತಿಲಕ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ನ ನಿರ್ದೇಶಕಿ ಗಾಯತ್ರಿ ತಿಲಕ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ಸಹಕಾರಿಗಳಾದ ಜಾಕೆ...
ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಕರಂಗಲ್ಲುವಿನ ಡಾ. ಪುರುಷೋತ್ತಮ.ಕೆ.ವಿ ರವರು ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು, ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆ ಇವರಿಗೆ ಪದೋನ್ನತಿ ನೀಡಿರುತ್ತದೆ. ಪ್ರಸ್ತುತ ಕಳೆದ ಆರು ವರ್ಷಗಳಿಂದ ಕಿನ್ನಿಗೋಳಿಯ ಐಕಳ ಪೋಂಪೈ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕಳೆದ 30 ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿದ್ದು, ಇದೀಗ ಪ್ರೊಫೆಸರ್ ಹುದ್ದೆಗೆ ಪದೋನ್ನತಿ...
Loading posts...
All posts loaded
No more posts
