ಕಲ್ಲಡ್ಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ದುರ್ಗಾಪರಮೇಶ್ವರಿ ಸೇವಾ ನಿವೃತ್ತಿ

ಮಂಡೆಕೋಲು ಗ್ರಾಮದ ಕಲ್ಲಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿರುವ ಶ್ರೀಮತಿ ದುರ್ಗಾಪರಮೇಶ್ವರಿಯವರು ಆ.31 ರಂದು ಸೇವೆಯಿಂದ ನಿವೃತ್ತರಾದರು.1996ರಲ್ಲಿ ಸ.ಹಿ.ಪ್ರಾ ಶಾಲೆ ಅಡ್ಪಂಗಾಯದಲ್ಲಿ ವೃತ್ತಿ ಸೇವೆ ಆರಂಭಿಸಿ, 2023ರಿಂದ ಸ.ಉ.ಹಿ.ಪ್ರಾ ಶಾಲೆ ಮಂಡೆಕೋಲಿಗೆ ವರ್ಗಾವಣೆಗೊಂಡರು. ಅಲ್ಲಿ ಹದಿಮೂರುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದರು. 2016ರಲ್ಲಿ ಸ.ಕಿ.ಪ್ರಾ.ಶಾಲೆ ಕಲ್ಲಡ್ಕಕ್ಕೆ ವರ್ಗಾವಣೆಗೊಂಡರು. 30 ವರ್ಷಗಳ ಸೇವೆಯ ಬಳಿಕ ಆ.31ರಂದು...

ನಿಟ್ಟೆ ಎನ್ ಎಮ್ ಎ ಎಮ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ವಿಭಾಗದ ವಿದ್ಯಾರ್ಥಿ ನಾಯಕನಾಗಿ ಅಪೇಕ್ಷ್ ಎಂಪಿ ಆಯ್ಕೆ

ನಿಟ್ಟೆ ಎನ್ ಎಂ ಎ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಅಪೇಕ್ಷ್ ಎಂ.ಪಿ. ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇವರು ಗುತ್ತಿಗಾರು ಗ್ರಾಮದ ಮಣಿಯಾನ ನಿವೃತ್ತ ಪಿಡಿಒ ಪುರುಷೋತ್ತಮ ಹಾಗೂ ಪೈಕ ಶಾಲಾ ಮುಖ್ಯಶಿಕ್ಷಕಿ ಸ್ನೇಹಲತಾ ದಂಪತಿಗಳ ಪುತ್ರ.
Ad Widget

ಕಂದ್ರಪ್ಪಾಡಿ : ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ದೇವಚಳ್ಳ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಗಸ್ಟ್ 31 ರಂದು ಕಂದ್ರಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ...

ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಹರಿಹರ ಪಳ್ಳತ್ತಡ್ಕ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ ರವರಿಗೆ ಸನ್ಮಾನ

ಆ.30 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ನಡುಗಲ್ಲು : ಮರಕತ ಶ್ರೀದುರ್ಗಾ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ವಿಜಯ ಕುಮಾರ್ ಚಾರ್ಮತ ; ಕಾರ್ಯದರ್ಶಿಯಾಗಿ ವಿಶ್ವನಾಥ ಕುತ್ಯಾಳ

ನಡುಗಲ್ಲು ಮರಕತ ಶ್ರೀದುರ್ಗಾ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಆ.27 ರಂದು ಸುಬ್ರಹ್ಮಣ್ಯ ಪಾಲ್ತಾಡು ರವರ ಮನೆಯಲ್ಲಿ ನಡೆಯಿತು.ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಚಾರ್ಮತ ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿಶ್ವನಾಥ ಕುತ್ಯಾಳ ರವರು ಆಯ್ಕೆಯಾದರು.(ವರದಿ : ಉಲ್ಲಾಸ್ ಕಜ್ಜೋಡಿ)

ಅಡ್ಕಾರು : ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ

ಮಾಣಿ ಮೈಸೂರು ಹೆದ್ದಾರಿಯ ಅಡ್ಕಾರು ಸಮೀಪ ಆ.30 ರಂದು ಲಾರಿ ಢಿಕ್ಕಿಯಾದ ಘಟನೆ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದು ವಿದ್ಯುತ್ ಕಂಬ ಮುರಿದ್ದು ಕಂಬ ಹಾಗೂ ಲಾರಿಗೆ ಹಾನಿಯಾಗಿದೆ.

ದುಗ್ಗಪ್ಪ ಗೌಡ ಪಾಂಡಿಪಾಲು ನಿಧನ

ಕಳಂಜ ಗ್ರಾಮದ ಪಾಂಡಿಪಾಲು ನಿವಾಸಿ ದುಗ್ಗಪ್ಪ ಗೌಡ ಪಾಂಡಿಪಾಲು ಬೈನ್ ಹೆಮರೇಜ್ ಆಗಿ ಆ.30 ರ ರಾತ್ರಿ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಬ್ರೈನ್ ಹೆಮರೇಜ್ ಗೆ ತುತ್ತಾದ ಅವರಿಗೆ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆ ಹಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರನ್ನು ಮನೆಗೆ...

ಸುಳ್ಯ : ಎನ್ ಎಸ್ ಎಸ್ ಸೇವಾ ಸಂಗಮದ  ವತಿಯಿಂದ ಮಂಡೆಕೋಲು ಗ್ರಂಥಾಲಯಕ್ಕೆ ಇನ್ವರ್ಟರ್ ಕೊಡುಗೆ

ಎನ್ ಎಸ್ ಎಸ್ ಸೇವಾ ಸಂಗಮ (ರಿ)ಸುಳ್ಯ ಇವರ ವತಿಯಿಂದ ಮಂಡೆಕೋಲು ಗ್ರಂಥಾಲಯಕ್ಕೆ ಇನ್ವರ್ಟರ್ ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸೇವಾ ಸಂಗಮದ ಎನ್ ಎಸ್ ಎಸ್ ಘಟಕದ ಸಂಘಟನಾ ಕಾರ್ಯದರ್ಶಿ ಸುಜಿತ್  ಮತ್ತು ಸದಸ್ಯರಾದ ಲಿಕಿತ್ ಕೆ. ವಿ., ಬಾನುಪ್ರಕಾಶ್ ಹಾಗೂ ಮಂಡೆಕೋಲು ಗ್ರಂಥಾಲಯ ಸಮಿತಿಯ ವಿದ್ಯಾರ್ಥಿ ಬಳಗದ ಅಭಿಷೇಕ್ ಕಣೆಮರಡ್ಕ ರವರು ಉಪಸ್ಥಿತರಿದ್ದರು      ...

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು, ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕಾರ್ಯನಿರ್ವಾಹಣಾಧಿಕಾರಿಗಳಾದ ತಿಮ್ಮಯ್ಯ ಪಿಂಡಿಮನೆ, ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿಯಾದ  ಜಯಾನಂದ ಜೆ ಇವರುಗಳು ಆ.30 ರಂದು ಮಂಗಳೂರಿನಲ್ಲಿ ನಡೆದ ಸಂಘದ 111ನೇ ವರ್ಷದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು...

ದ. ಕ ಸಂಪಾಜೆ ಸಹಕಾರಿ  ಸಂಘಕ್ಕೆ ಸತತ 12ನೇ ಬಾರಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2024-25 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ  ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂಎನ್ ರಾಜೇಂದ್ರ ಕುಮಾರ್ ರವರಿಂದ ಆ.30 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ  ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ವೀರೇಂದ್ರ...
Loading posts...

All posts loaded

No more posts

error: Content is protected !!