- Wednesday
- May 6th, 2026
ಬಿಜೆಪಿಯವರು ತಾವು ರೈತರ ರಕ್ಷಣೆಗೆ ಮುಂದಾಗಿದ್ದಾರೆ ಅಂತ ಹೇಳಿಕೆ ನೀಡುತ್ತಿದ್ದಾರೆ, ಕರ್ನಾಟಕದಲ್ಲಿ ಈ ತನಕದ ಬಿಜೆಪಿ ಆಡಳಿತದಲ್ಲಿ ರೈತರಿಗೆ ಏನು ಸಾಲ ಮನ್ನಾ ಮಾಡಿದ್ದೀರಾ? ಈ ಹಿಂದೆ ರೈತರ ಅಡಿಕೆ ಕೃಷಿ ಕೊಳೆ ರೋಗಕ್ಕೆ ತುತ್ತಾದ ಸಂದರ್ಭದಲ್ಲಿ ಎಕರೆ ಒಂದಕ್ಕೆ ರೂ 12,000/= ದಂತೆ ಪರಿಹಾರ ಕೊಟ್ಟಿದ್ದಾರಾ? ಸಹಕಾರಿ ಸಂಘದಲ್ಲಿ 0% ಗೆ ಸಾಲ ಕೊಟ್ಟಿದ್ದಾರಾ?...
ಸಾಂಸ್ಕೃತಿಕ ಸಂಘ ಹಳಗೇಟು ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ನಡೆಯುತ್ತಿದ್ದು, ಕೊನೆಯ ದಿನ ಇಂದು ಮಧ್ಯಾಹ್ನ ಮಹಾಪೂಜೆ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5:00 ರಿಂದ ನಾಸಿಕ್ ಬ್ಯಾಂಡ್ ನ ಅಬ್ಬರದೊಂದಿಗೆ ವೈಭವದ...
ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಶ್ರೀಮತಿ ತಾರಕಾಂತಿ ರವರು ಸ್ವಾಗತಿಸಿ, ...
ದಕ್ಷಿಣಕನ್ನಡ ಜಿಲ್ಲೆಗೆ ಅದರದೇ ಆದ ವಿಶೇಷತೆ ಇದೆ.ಜಿಲ್ಲೆಗೆ ಹೆಸರು ಸಂಸ್ಕಾರಯುತ ರೈತನ ಬೆವರಿನ ಮೂಲಕವೇ ಹೊರತು ಆಳುವವನಿಂದಲ್ಲ ಉಳುವವನಿಂದ ಎನ್ನುವ ಬಗ್ಗೆ ವೆಂಕಪ್ಪ ಗೌಡ್ರು ತಿಳಿದು ಪ್ರತಿಕ್ರಿಯೆ ನೀಡಬೇಕು.ಒಂದು ಪ್ರಸಿದ್ಧ ದೇವಳದ ಆಡಳಿತ ಮೊಕ್ತೇಸರರಾಗಿ ಧಾರ್ಮಿಕ ಕಾರ್ಯದ ಮುಖಾಂತರ ಹಿಂದೂ ಧರ್ಮದ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಓರ್ವ ಒಳ್ಳೆಯ ಧಾರ್ಮಿಕ ಕಾರ್ಯ ಮಾಡುತ್ತಾರೆಂದು ನಾನು ಬಯಸಿದ್ದೆ. ಆದರೆ...
ಸುಬ್ರಹ್ಮಣ್ಯ ಆಗಸ್ಟ್ 28 : ಕಡಬ ತಾಲೂಕು ಪಂಚಾಯತ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಯೋಗದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತ್ ಗಳ ವ್ಯಾಪ್ತಿಯಲ್ಲಿ “ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ” ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸ್ವಚ್ಛತಾ ಶ್ರಮದಾನದ ಪೂರ್ವಭಾವಿ ಸಭೆಯು ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು.ಸಭೆಯ ಆರಂಭದಲ್ಲಿಯೇ ಸಂಬಂಧಪಟ್ಟ ಎಲ್ಲಾ...
ಬೆಂಗಳೂರು ಆದಿತ್ಯ ಯೋಗ ಸೆಂಟರ್ ನವರು ನಡೆಸಿದ ಬಿ.ಕೆ.ಎಸ್ ಐಯ್ಯಂಗಾರ್ ಸ್ಮರಣಾರ್ಥ ರಾಷ್ಟ್ರ ಮಟ್ಟದ 9ನೇ ವರ್ಷದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಐವರ್ನಾಡಿನ ಮಿಥುನ ಅಶ್ವಥ್ ಜಬಳೆ ಅವರು 6ನೇ ಸ್ಥಾನ ಪಡೆದಿದ್ದಾರೆ.ಇವರು 32 ರಿಂದ 45 ವರ್ಷ ವಿಭಾಗದಲ್ಲಿ ಜು.12 ರಂದು ನಡೆದ ಆನ್ ಲೈನ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಸಿಬ್ಬಂದಿಯೊಬ್ಬರನ್ನು ಕರ್ತವ್ಯಲೋಪದ ಆಧಾರದಲ್ಲಿ ಮೂರು ತಿಂಗಳುಗಳ ಹಿಂದೆ ಅಮಾನತಿನಲ್ಲಿರಿಸಿದ್ದು, ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿರುವುದನ್ನು ಪ್ರಶ್ನಿಸಿ ಇಂದು ಆ.29 ರಂದು ಗ್ರಾಮಸ್ಥರು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.“ಅಮಾನತುಗೊಂಡ ಸಿಬ್ಬಂದಿಯ ಮೇಲೆ ಗ್ರಾಮ ಪಂಚಾಯತ್ ನ ಸ್ವತ್ತು ಕಳವು ಆರೋಪವಿದ್ದು, ಅದಲ್ಲದೇ ಗ್ರಾಮ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ಆ.29 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಲಿದೆ. ನಂತರ...
ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...
Loading posts...
All posts loaded
No more posts
