ಸುಳ್ಯ : 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಕಾರ್ಯಕ್ರಮಕ್ಕೆ ಚಾಲನೆ

(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ.27 ರಿಂದ 31ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಪಿ.ಕೆ ಉಮೇಶ್, ಡಾ.ಕೆ.ವಿ ಚಿದಾನಂದ,...

ಪೆರಾಜೆ : ಸಿ.ಸಿ ಟಿವಿ ಹಾಗೂ ಟ್ರ್ಯಾಕ್ ಪ್ಯಾಂಟ್ ಬಿಡುಗಡೆ ಕಾರ್ಯಕ್ರಮ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆ ಶಾಲೆಗೆ ಹಿರಿಯ ವಿದ್ಯಾರ್ಥಿಗಳು ಸಿ.ಸಿ ಟಿವಿ ಹಾಗೂ ಟ್ರ್ಯಾಕ್ ಪ್ಯಾಂಟ್, ಟೀಶರ್ಟ್ ಕೊಡುಗೆ ನೀಡಿದರು.ಇದರ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಮಿತಾ.ಬಿ.ಜೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪೆರುಮುಂಡ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಪಿ.ಎನ್ ಅಬೂಬಕ್ಕರ್, ಹಿರಿಯ ವಿದ್ಯಾರ್ಥಿ...
Ad Widget

ವಳಲಂಬೆ ಗಣೇಶೋತ್ಸವಕ್ಕೆ ಚಾಲನೆ – ಗಣಪತಿ ಪ್ರತಿಷ್ಠೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 22 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಅಧ್ಯಕ್ಷ ಹರೀಶ್ಚಂದ್ರ ಕೇಪಳಕಜೆ, ಕಾರ್ಯದರ್ಶಿ ದಿಗಂತ್ ಕಡ್ತಲ್ ಕಜೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಗಣೇಶೋತ್ಸವ ಸಮಿತಿ...

ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲ ಗುಡ್ಡೆ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ವಿದ್ಯಾರ್ಥಿ ಯುಗನ್ ಜೆ...

ಮಡಪ್ಪಾಡಿ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಲಿದೆ.ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ ಹಾಗೂ 8...

ಗುತ್ತಿಗಾರು : ಬಿಜೆಪಿ ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ – “ಪಕ್ಷ ಸಂಘಟನೆ ಹಾಗೂ ಗ್ರಾಮದ ಅಭಿವೃದ್ಧಿಗೆ ಯುವಕರ ಸಹಕಾರ ಅಗತ್ಯ” – ಬಿ.ಕೆ.ಬೆಳ್ಯಪ್ಪ

ಗುತ್ತಿಗಾರು : ಬಿಜೆಪಿ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಗುತ್ತಿಗಾರು ಮತ್ತು ನಾಲ್ಕೂರು ಶಕ್ತಿ ಕೇಂದ್ರದ ಅಭ್ಯಾಸವರ್ಗವು ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಿತು.ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಕಾರ್ಯಕರ್ತ ಬಿ.ಕೆ.ಬೆಳ್ಯಪ್ಪ ಗೌಡ ದೀಪ ಪ್ರಜ್ವಲನೆಯೊಂದಿಗೆ ಭಾರತಮಾತೆ, ದೀನ್ ದಯಾಳ್ ಉಪಾಧ್ಯಾಯ ಮತ್ತು ಶ್ಯಾಂ ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ...

ಗುತ್ತಿಗಾರು :  ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಾಹಿತಿ ಕಾರ್ಯಗಾರ ಆ.26 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿಯವರು ದೀಪಪ್ರಜ್ವಲನೆ ಮಾಡಿ...

ಕಾಪಿಕೊ ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಟೀಕೆ ಬಿಜೆಪಿ ಆಕ್ರೋಶ –  ನಿಮ್ಮದೇ ಸರ್ಕಾರ ರಾಜ್ಯದಲ್ಲಿದ್ದು ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಏನು ಕ್ರಮ ಕೈಗೊಂಡಿದೆ ವೆಂಕಟ್ ವಳಲಂಬೆ ಪ್ರಶ್ನೆ

ಸುಳ್ಯದಲ್ಲಿ ನಿನ್ನೆ ಸಂಸದ ಕ್ಯಾ ಚೌಟರು ವಿಶೇಷ ಕಾಳಜಿ ಯಿಂದ ಕಾಫಿ ಬೆಳೆಯುವ ಬಗ್ಗೆ ತಾಲೂಕಿನ ಕೃಷಿಕರ ಹಿತದೃಷ್ಟಿಯಿಂದ ಕಾಫಿಕೊ ಕಾರ್ಯಕ್ರಮ ಅಯೋಜಿಸಿದ್ದೆವು ಆದರೆ ಇಂತಹ ರೈತಪರ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಎಂ ವಿ ವೆಂಕಪ್ಪ ಗೌಡರು ಕ್ಷುಲ್ಲಕ ಹೇಳಿಕೆ ನೀಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ...

ಅಡ್ಕಾರ್ ಮಹೋತ್ಸವ – ಸ್ಕ್ರಾಚ್ ಕಾರ್ಡಿನಲ್ಲಿ 5,000 ಗೆದ್ದ ಮುಂಜುನಾಥ ರೈ ಸೇವಾಜೆ

ಸುಳ್ಯದ ಪ್ರಸಿದ್ಧ ಗೃಹಪಯೋಗಿ ವಸ್ತುಗಳ ಮಳಿಗೆ 30ನೇ ವಸಂತಕ್ಕೆ ಕಾಲಿರಿಸಿ ಹಿನ್ಬೆಲೆಯಲ್ಲಿ ಗ್ರಾಹಕರ ಪ್ರತಿ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ. ಅಡ್ಕಾರ್ ಮಹೋತ್ಸವ ಆ.25 ರಂದು ಆರಂಭವಾಗಿದ್ದು, ಮೊದಲ ದಿನವೇ ಗ್ರಾಹಕರಾದ ಮುಂಜುನಾಥ ರೈ ಸೇವಾಜೆ ಸ್ಕ್ರಾಚ್ ಕಾರ್ಡ್ ನಲ್ಲಿ...

ಕಾಫಿಕೊ ಎಂಬ ರಂಗಿನ ಹೆಸರನ್ನಿಟ್ಟು ಅಡಿಕೆ ಬೆಳೆಗಾರರನ್ನು ಮರುಳು ಮಾಡುವುದಕ್ಕೆ ದ.ಕ ಸಂಸದರ ವಿನೂತನ ಪ್ರಯತ್ನ: ಎಂ.ವೆಂಕಪ್ಪ ಗೌಡ

ಕೇಂದ್ರದಲ್ಲಿ ಬಿ.ಜೆ.ಪಿ ಸರಕಾರ ಅಧಿಕಾರಕ್ಕೆ ಬಂದಾಗ ವರ್ಷಕ್ಕೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಳಿಕ ಈ ದೇಶದ ಯುವಕ ಯುವತಿಯರು ಉದ್ಯೋಗ ಕೇಳಿದಾಗ “ಪಕೋಡ ಬೇಜೋ" ಎಂಬ ಅಭಿಯಾನವನ್ನು ಬಿ.ಜೆ.ಪಿ ಪ್ರಾರಂಭಿಸಿ ಯುವಕ ಯುವತಿಯರ ಆಶೆಯನ್ನು ಕಮರಿಸಿದರು. ಇದೀಗ ಅಡಿಕೆ ಕೃಷಿಗೆ ಹಳದಿ ಹಾಗೂ ಇನ್ನಿತರ ರೋಗಗಳು ಬಾಧಿಸಲ್ಪಟ್ಟು ಅಡಿಕೆ...
Loading posts...

All posts loaded

No more posts

error: Content is protected !!