- Wednesday
- May 6th, 2026
ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ದಯಾನಂದ ( ಪಿಜಕ್ಕಳ) , ಅಕ್ಷತಾ (ಕೋಡಿಂಬಾಳ),ಕುಸುಮಾ ( ಕೋಡಿಬೈಲು), ಗುಣವತಿ ರಘುರಾಮ್ (ದೊಡ್ಡಕೊಪ್ಪ), ಮೋಹನ (ಮಜ್ಹಾರು) ಗೆಲುವು ಸಾಧಿಸಿದ್ದರು. ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಶಾಸಕಿ ಭಾಗೀರಥಿ ಮುರುಳ್ಯ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲದ ಮಾಜಿ ಅಧ್ಯಕ್ಷ ಹರೀಶ್...
ಸುಳ್ಯ : ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತಾಲ್ಲೂಕು ಮಟ್ಟದ ಕಾಲೇಜು ವಿಭಾಗದ ಪುಟ್ಬಾಲ್ ಪಂದ್ಯಾಟದ ಉದ್ಘಾಟನೆ ಆ.20 ರಂದು ನಡೆಯಿತು. ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದಿರೆ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರ ಪಂಚಾಯತ್ ಸದಸ್ಯರಾದ ವೆಂಕಪ್ಪ ಗೌಡ, ಕೆ.ಪಿ.ಎಸ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ,...
ಸುಳ್ಯ : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ.19 ರಂದು ಸುಳ್ಯದಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ಮೊಸರುಕುಡಿಕೆ...
“ತರುಣರು ಸಂಘಟನೆಯ ಜವಾಬ್ದಾರಿಯನ್ನು ಹೊರಬೇಕಿದೆ, ಹಿಂದೂ ಸಮಾಜಕ್ಕೆ ನಾಲ್ಕು ಕಂಟಕವಿದೆ, ಸುಳ್ಯದ ಪ್ರತಿಯೊಂದು ಮನೆ ಮನೆಯೂ ಸಂಘಟನೆಯ ಭಾಗವಾಗಿದೆ” ಎಂದು ಯುವ ಬ್ರಿಗೇಡ್ ಸಂಚಾಲಕ, ಯುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅವರು ಸುಳ್ಯದಲ್ಲಿ ನಡೆದ ವಿ.ಹೆಚ್.ಪಿ ಸ್ಥಾಪನಾ ದಿನದ ಅಂಗವಾಗಿ ನಡೆದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. “ವಿಶ್ವ ಹಿಂದೂ ಪರಿಷತ್...
ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ “ದಿ.ರಾಜೀವ್ ಗಾಂಧಿಯವರ ಆದರ್ಶ ಮತ್ತು ದೂರದೃಷ್ಟಿಯ ಆಡಳಿತವನ್ನು ಇಂದು ನಾವು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ದೇಶದಲ್ಲಿ ಇಂದು ನಾವು ವೈಜ್ಞಾನಿಕವಾಗಿ...
ಸುಬ್ರಹ್ಮಣ್ಯ : “ಧಾರ್ಮಿಕ ಆಚರಣೆಗಳು ಯುವ ಜನಾಂಗವು ಸಂಘಟಿತರಾಗಲು ಬುನಾದಿಯಾಗುತ್ತದೆ. ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಸ್ಕಾರ ಮತ್ತು ಸಾಂಸ್ಕೃತಿಕ ವಿಚಾರಗಳನ್ನು ನಡೆಸಲು ಉತ್ಸಾಹ ತೋರಬೇಕು. ಆಧುನಿಕ ಯುಗದಲ್ಲಿ ಯುವ ಜನಾಂಗವು ಧಾರ್ಮಿಕ ಆಚರಣೆಗಳತ್ತ ಮನ ಮಾಡುತ್ತಿದ್ದಾರೆ ಅನ್ನುವುದು ನಮ್ಮ ಸಂಸ್ಕೃತಿಯ ಔನತ್ಯದ ಧ್ಯೋತಕವಾಗಿದೆ. ಪ್ರಾಚೀನ ಸಾಂಸ್ಕೃತಿಕ ವಿಚಾರಧಾರೆಗಳು ಚಿರಸ್ಥಾಯಾಗಿರಲು ಕೃಷ್ಣಲೀಲೋತ್ಸವವು ಸಹಕಾರಿ....
ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ದಾಳಿ ನಡೆಸಿ ಕೃಷಿ ಹಾಗೂ ವಾಹನಕ್ಕೆ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ ಬಾಳೆ ಗಿಡ ನಾಶ ಮಾಡಿದೆ. ತೋಟದ ದಾರಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೂ ಹಾನಿ ಮಾಡಿದೆ. ಪೂಂಬಾಡಿ...
ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಒಟ್ಟು 13 ವಾರ್ಡ್ ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.ಮತ ಎಣಿಕೆ ಕೇಂದ್ರದಲ್ಲಿ ನಡೆದ ಎಣಿಕೆ ಪ್ರಕ್ರಿಯೆಯು ಬಿಗಿ ಪೊಲೀಸ್ ಬಂದೋಬಸ್ ನಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿತು....
ತೌಹೀದ್ ಎಜುಕೇಶನಲ್ ಹಾಗೂ ಕಲ್ಚರಲ್ ಟ್ರಸ್ಟ್ ಸಂಪಾಜೆ ಇದರ ಅಧಿನದಲ್ಲಿ ಕಾರ್ಯನಿರ್ವಹಿಸುತ್ತಿವ ಮದ್ರಸತುಲ್ ಇಸ್ಲಾಹ್ ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ಆಗಸ್ಟ್ 19ರಂದು ಸಂಜೆ 5.30 ರಿಂದ ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಮಸೀದಿ ಸಂಪಾಜೆ ವಠಾರದಲ್ಲಿ ನಡೆಯಿತು ಶಾಝಿಲ್ ರವರ...
Loading posts...
All posts loaded
No more posts
