- Wednesday
- May 6th, 2026
ಸುಳ್ಯ ತಾಲೂಕು ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ಮಹಾಸಭೆ ಆಗಸ್ಟ್ 14 ರಂದು ಜರಗಿತು. ಸಂಘದ ಅಧ್ಯಕ್ಷರಾದ ಶರತ್ ಅಡ್ಯಡ್ಕ ಅರಂತೋಡು ಸಭೆಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಉದ್ಘಾಟನೆಯನ್ನು ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಕೆ ಜೆ ಕೊಡಿಯಾಲಬೈಲು ನೆರವೇರಿಸಿದರು. ತಾಲೂಕು ಆಂಬ್ಯುಲೆನ್ಸ್ ಚಾಲಕ ಮಾಲಕರನ್ನು ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯ...
ಅಜ್ಜಾವರ: ಮೇದಿನಡ್ಕದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಆಡಳಿತ ಸಮಿತಿ ಹಾಗೂ ಮುತ್ತುಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ 79 ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ಅಂಗನವಾಡಿ ಕೇಂದ್ರ ವಠಾರದಲ್ಲಿ ನಡೆಯಿತು. ಧ್ವಜಾರೋಹಣವನ್ನು ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ.ಅವಿನಾಶ್ ನೆರವೇರಿಸಿದರು ಈ ಸಂದರ್ಭದಲ್ಲಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ನಾಚಿ ಮುತ್ತು,...
ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಾಲ್ಕನೇ ವರ್ಷದ ಕೃಷ್ಣ-ರಾಧೆ-ಯಶೋಧೆ, ಶ್ರೀಕೃಷ್ಣ ವೇಷ ಸ್ಪರ್ಧೆ-2025 ಕಾರ್ಯಕ್ರಮ ಇಂದು ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ಲು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿ ಪರ ಕೃಷಿಕರಾದ ಶ್ರೀ ಪೂರ್ಣಚಂದ್ರ ತುಂಬತ್ತಾಜೆ ನೆರವೇರಿಸಿದರು.ಸ್ಪರ್ಧೆಯ ತೀರ್ಪುಗಾರರಾಗಿಶ್ರೀಮತಿ ರೇಣುಕಾ ಚೇತನ್ ಗೌಡ ಪಂಜ, ತರುಣ್ ನಾದೂರ್, ಕೀರ್ತನಾ ದೇವರಗದ್ದೆ ಸಹಕರಿಸಿದರು.ಸ್ಪರ್ಧಾ ವಿಜೇತರಿಗೆ ಹಾಗೂ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇದರ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಆ.18 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ...
ಕರುನಾಡ ಕಲ್ಪವೃಕ್ಷ ಫೌಂಡೇಷನ್(ರಿ)ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರನ್ನಾಗಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈ ಸಂಘಟನೆಯ ಬಗ್ಗೆ ತಿಳುವಳಿಕೆ ಮೂಡಿಸಿ ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಶ್ರಮಿಸಲಿದ್ದಾರೆ.
ನಾರ್ಣಕಜೆ ಹಾಗೂ ದೊಡ್ಡತೋಟದ ಮಧ್ಯೆ ಗುಂಡಿಅಂಗಡಿ ಬಳಿ ರಸ್ತೆ ಮರ ಬಿದ್ದು ಹಲವು ದಿನ ಕಳೆದರೂ ತೆರವುಗೊಳಿಸಿಲ್ಲ. ಹತ್ತು ದಿನಗಳ ಹಿಂದೆ ಬಸ್ ಬರುತ್ತಿದ್ದಾಗ ಈ ಮರ ಬಿದ್ದಿತ್ತು. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಈಗ ಒಂದು ಬದಿ ಮಾತ್ರ ವಾಹನ ಸಂಚರಿಸಲು ಅವಕಾಶವಿದ್ದು, ಎರಡು ಬದಿಯಿಂದ ವಾಹನ ಬಂದಾಗ ಅಪಾಯಕ್ಕೆ ಆಹ್ವಾನಿಸುತ್ತಿದ್ದು, ಇನ್ನೊಂದು ಅಪಘಾತಕ್ಕೆ ಕಾಯುವಂತಿದೆ....
ಸುಬ್ರಹ್ಮಣ್ಯ ಆಗಸ್ಟ್ 17 : ಆಗಸ್ಟ್ ತಿಂಗಳಲ್ಲಿ ಬಂದ ಸರಣಿ ರಜೆಯಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಅತ್ಯಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನದೊಂದಿಗೆ ಪ್ರಸಾದ ಸ್ವೀಕರಿಸಿದರು. ಜಿನುಗು ಮಳೆ ಸುರಿಯುತ್ತಿದ್ದರೂ ಕೂಡ ಮಳೆಯನ್ನು ಲೆಕ್ಕಿಸದೇ ಕ್ಷೇತ್ರದ ಭಕ್ತರು ಸರತಿ ಸಾಲಿನಲ್ಲಿ ರಥಬೀದಿಯಿಂದ ಹಾಗೂ ದೇವಳದ ಹೋರಾಂಗಣದಲ್ಲಿ ಸಾಗಿ ದೇವರ ದರ್ಶನ ಪಡೆದರು....
ಸುಬ್ರಹ್ಮಣ್ಯ ಶಾಖೆಯಲ್ಲಿ ಪವರ್ ಮ್ಯಾನ್ ಕರ್ತವ್ಯ ನಿರ್ವಹಿಸುತ್ತಿರುವ ಉಮೇಶ್ ಲಕ್ಷ್ಮಣ ಹಂಜಗಿ ಅವರು ಪುತ್ತೂರು ವಿಭಾಗದಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದಕ್ಕಾಗಿ “ಸೇವಾ ಮಿತ್ರ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ಆಡಳಿತ ಕಛೇರಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.(ವರದಿ : ಉಲ್ಲಾಸ್ ಕಜ್ಜೋಡಿ)
ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ವಿಮಲಾ ರಂಗಯ್ಯ ಧ್ವಜಾರೋಹಣವನ್ನು ನೆರವೇರಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಲಯನ್ಸ್ ಕ್ಲಬ್ ಸದಸ್ಯರಾದ ಲ| ಡಾ| ಶಿವಕುಮಾರ್ ಹೊಸೊಳಿಕೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು.ನಂತರ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್...
Loading posts...
All posts loaded
No more posts
