- Thursday
- May 7th, 2026
ಬೆಳ್ಳಾರೆಯ ಮುಖ್ಯರಸ್ತೆಯಲ್ಲಿರುವ ಶಾಹಿನ್ ಮಾಲ್ ನಲ್ಲಿ ಶ್ರೀಮತಿ ಶಿಲ್ಪಾ ಪ್ರಶಾಂತ್ ಮತ್ತು ಕೆ.ಎಸ್ ಪ್ರಶಾಂತ್ ಕುಮಾರ್ ಮಾಲಕತ್ವದ ಚಿನ್ನ, ಬೆಳ್ಳಿ, ವಜ್ರ ಆಭರಣಗಳ ಮಳಿಗೆ ಶಿಲ್ಪಾ ಜ್ಯುವೆಲ್ಲರ್ಸ್ ಆ.8ರಂದು ಶುಭಾರಂಭಗೊಂಡಿತು. ಶಾಹಿನ್ ಮಾಲ್ ಮಾಲಕರಾದ ಎಸ್.ಎಂ ಅಬ್ದುಲ್ ಹಮೀದ್ ಹಾಜಿ ರಿಬ್ಬನ್ ಕತ್ತರಿಸಿ, ಪ್ರಶಾಂತ್ ಕುಮಾರ್ ರವರ ತಾಯಿ ಶ್ರೀಮತಿ ಸರೋಜಿನಿ ಸದಾಶಿವ ಆಚಾರ್ಯ ಕಡಬ...
ಸುಬ್ರಹ್ಮಣ್ಯ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಒಳಪಟ್ಟ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರವಾಗಿ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಸಹಸ್ರಾರು ಭಕ್ತರು ವೃತದಲ್ಲಿ ಭಾಗವಹಿಸಿ ಲಕ್ಷ್ಮಿ ಕೃಪೆಗೆ ಪಾತ್ರರಾದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶೃಂಗೇರಿ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆಯು ಪುರೋಹಿತ...
ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.08 ರಂದು ಹರಿಹರ ಪಳ್ಳತ್ತಡ್ಕ, ಬಾಳುಗೋಡು ಹಾಗೂ ಐನೆಕಿದು ಗ್ರಾಮಗಳ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿಶ್ವನಾಥ್ ಬಿಳಿಮಲೆ, ಕಾರ್ಯದರ್ಶಿ ಶ್ರೀಮತಿ ಮನೋರಮಾ, ಕೋಶಾಧಿಕಾರಿ ಶ್ರೀಮತಿ ವಿಜಯ ಕೂಜುಗೋಡು, ಗೌರವಾಧ್ಯಕ್ಷರಾದ...
ಮನುಷ್ಯ ತನ್ನ ಜೀವನದಲ್ಲಿ ಹೇಗೆ ತನ್ನ ಬದುಕನ್ನು ರೂಪಿಸಿಕೊಳ್ಳಬೇಕು ಎಂಬುವುದು ಒಬ್ಬ ಕವಿಹೃದಯವಿರುವ ವ್ಯಕ್ತಿಯಲ್ಲಿ ವಿಶಾಲವಾದ ಮನೋಸ್ಥೈರ್ಯ ಹಾಗೂ ಆಶಾವಾದವನ್ನು ಹುಟ್ಟುಹಾಕುತ್ತದೆ. ಬದುಕು ಮೂರು ದಿನದ ಸಂತೆಯಾದರೂ ನಗುನಗುತ್ತಾ ಕಳೆಯುವುದೇ ಒಂದು ಉತ್ಸಾಹ ತುಂಬಿದ ಬದುಕಿಗೆ ಪ್ರೇರಣೆ. ತಾನೂ ಬದುಕಿ ಇತರರನ್ನೂ ಜೀವನೋತ್ಸಾಹದ ಹಾದಿಯಲ್ಲಿ ಬೆಸೆಯುವುದು ಜೀವತುಂಬಿದ ಬದುಕು ಎನಿಸುವುದು. ಇಂತಹ ಬದುಕಿಗೆ ಸ್ಫೂರ್ತಿಯ ಚಿಲುಮೆ...
ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ| ಕುರುಂಜಿ ವೆಂಕಟ್ರಮಣ ಗೌಡರ 12ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.07ರಂದು ನಡೆಯಿತು. ಕಾಲೇಜಿನ ರಷಶಾಸ್ತ್ರ ಮತ್ತು ಭೈಷಜ್ಯ ಕಲ್ಪನದ ವಿಭಾಗ ಮುಖ್ಯಸ್ಥರೂ, ಕೆವಿಜಿ ಆಯುರ್ವೇದ ಫಾರ್ಮಸಿ...
ಸವಣೂರು : ಅಭ್ಯುದಯ ಯುವಕ ಮಂಡಲ(ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ "ಆಟಿದ ಕೂಟ-ಕೆಸರ್ಡ್ ಒಂಜಿ ದಿನ" ಕಾರ್ಯಕ್ರಮ ಆ.10ರಂದು ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು.ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್,...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು, ನೌಕರರು ಹಾಗೂ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರ ವತಿಯಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಸುಳ್ಯದ ಸಿ.ಎ ಬ್ಯಾಂಕ್ ನ...
ಸಂಪಾಜೆ ಗ್ರಾಮದ ಮುಂಡಡ್ಕ ಪಾಂಬರ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಪೂಜೆಯ ಮೂಲಕ ಶ್ರೀರಾಮ್ ಭಟ್ ಸಂಪಾಜೆ ನೇರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗದೀಶ್ ರೈ ಗುದ್ದಲಿ ಪೂಜೆ ನೇರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಮಾತನಾಡಿ "ಗ್ರಾಮದ...
ಈ ವರ್ಷ ಒಟ್ಟು 20 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ 2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 20 ವಿದ್ಯಾರ್ಥಿಗಳು ನವೋದಯ...
Loading posts...
All posts loaded
No more posts
