ಸುಬ್ರಹ್ಮಣ್ಯ: ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಶೀಲಾ ಗಣೇಶ್ ಆಯ್ಕೆ

ಸುಬ್ರಹ್ಮಣ್ಯ : ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಸುಬ್ರಹ್ಮಣ್ಯ ಇದರ 2025ನೇ ಸಾಲಿನ ನೂತನ ಅಧ್ಯಕ್ಷರಾಗಿ ಶೀಲಾ ಗಣೇಶ್ ಆಯ್ಕೆಯಾಗಿದ್ದಾರೆ.  ಕಾರ್ಯದರ್ಶಿಯಾಗಿ ಸುಭಾಷಿಣಿ ಶಿವರಾಮ್ ಮತ್ತು ಕೋಶಾಧಿಕಾರಿಯಾಗಿ ತ್ರಿವೇಣಿ ದಾಮ್ಲೆ ನೇಮಕಗೊಂಡಿದ್ದಾರೆ. 2024ನೇ ಸಾಲಿನ ಸಮಿತಿ ಅಧ್ಯಕ್ಷೆ ಪೂಜಾ ಕಲ್ಲೂರಾಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾರದಾ...

ಪ್ರವೀಣ್ ಬೆಳ್ಳಾರೆ ಅವರಿಗೆ ಗೋಪಾಲ್ಸ್ ರಾಷ್ಟ್ರಮಟ್ಟದ ಪ್ರಶಸ್ತಿ

ಸ್ಥಳೀಯ ದೇಸಿ ಹಸುಗಳು ಮತ್ತು ಗೋಪಾಲಕ ಸಮುದಾಯಕ್ಕೆ ಬೆಂಬಲವಾಗಿ ಸ್ಥಾನೀಯ ದೇಶಿ ಹಸುಗಳನ್ನು ಸಾಕುವವರು ಮತ್ತು ಸಂರಕ್ಷಕರಿಗೆ ಗೋಪಾಲ್ಸ್ ಸಂಸ್ಥೆಯವರು ನೀಡುವ ರಾಷ್ಟ್ರಮಟ್ಟದ ಗೋಪಾಲ್ಸ್ ಪ್ರಶಸ್ತಿಯನ್ನು ಪ್ರವೀಣ್ ಬೆಳ್ಳಾರೆ ಅವರಿಗೆ ಬೆಂಗಳೂರಿನ ಮಲ್ಲೇಶ್ವರಂ ಚೌಡಯ್ಯ ಸ್ಮಾರಕ ಭವನ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳ ತಲಾ ಇಬ್ಬರು...
Ad Widget

ಸುಳ್ಯ : ಗೌಡ ಯುವ ಸೇವಾ ಸಂಘ ಹಾಗೂ ವಿವಿಧ ಘಟಕಗಳ ಆಶ್ರಯದಲ್ಲಿ ಆಟಿಯ ಸಂಭ್ರಮ ಕಾರ್ಯಕ್ರಮ ; ವಿವಿಧ ಸಾಧಕರಿಗೆ ಸನ್ಮಾನ

ಸುಳ್ಯ : ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ ಮತ್ತು ತರುಣ ಘಟಕ ಇವರ ಸಹಯೋಗದೊಂದಿಗೆ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ, ತರುಣ ಘಟಕಗಳ ನೇತೃತ್ವದಲ್ಲಿ 13ನೇ ವರ್ಷದ ಆಟಿಯ ಸಂಭ್ರಮ ಆಗಸ್ಟ್ 3 ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ನಲ್ಲಿ ನಡೆಯಿತು.ಸಮಾರಂಭ ಅಧ್ಯಕ್ಷತೆಯನ್ನು ಗೌಡರ ಯುವ ಸೇವಾ ಸಂಘದ...

ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ಜಯಪ್ರಕಾಶ್ ಅನಾರೋಗ್ಯದಿಂದ ನಿಧನ

ಕನಕಮಜಲು ಗ್ರಾಮದ ಪಲ್ಲತ್ತಡ್ಕ ದಿ. ಶಿವರಾಮ ಗೌಡರ ಪುತ್ರ ಕೆ.ವಿ.ಜಿ .ಪಾಲಿಟೆಕ್ನಿಕ್ ಉದ್ಯೋಗಿ ಜಯಪ್ರಕಾಶ್ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕೆಲ ಸಮಯದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರು ತಾಯಿ ದೇವಕಿ, ಪತ್ನಿ ಶರತ್ ಕುಮಾರಿ ( ಪ್ರಮೀಳಾ), ಪುತ್ರ ಧನ್ವಿತ್, ಪುತ್ರಿ ತನ್ವಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಶ್ರೀ ಕೃಷ್ಣ ದೇವರ ತುಳು ಭಕ್ತಿಗೀತೆ “ಲೇ ಲೇ ಲೇಲೆಗಾ ಹಾಡು” ಅಧಿಕೃತವಾಗಿ ಬಿಡುಗಡೆ

ಭಕ್ತಿಗೀತೆಗಳ ಲೋಕಕ್ಕೆ ಮತ್ತೊಂದು ಭಕ್ತಿಯ ಮಧುರ ಗೀತೆ ಇಂದು ಸೇರ್ಪಡೆಯಾಗಿದೆ. ಫೆ.02ರಂದು ಮಂಗಳೂರಿನ ಶ್ರೀ ನವದುರ್ಗಾ ಮಂತ್ರಾಮೂರ್ತಿ ಕ್ಷೇತ್ರದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯೋಗೀಶ್ ಭಟ್ ಚಿಂತನೆಯಲ್ಲಿ ಬಿಡುಗಡೆಗೊಳಿಸಿದರು. ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ತಿಪದ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಬಹರೇನ್ ನಿಂದ ಆಗಮಿಸಿದ ನವೀನ್ ಮಾವಜಿ ಹಾಗೂ ಹನುಮಾನ್ ಭಟ್, ರಾಜೇಂದ್ರ ಮಂಗಳೂರು, ಪ್ರಗತ್ ಪುತ್ತೂರು...

ಆ.10 ; ಅರೆಭಾಷೆ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಅಕಾಡೆಮಿ ಹಾಗೂ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಸಹಯೋಗದೊಂದಿಗೆ “ಅರೆಭಾಷೆ ಜಂಬರ ಆಟಿ ಕೂಟ”

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಅಕಾಡೆಮಿ ಹಾಗೂ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಸಹಯೋಗದೊಂದಿಗೆ " ಅರೆಭಾಷೆ ಜಂಬರ ಆಟಿ ಕೂಟ " ಆಗಸ್ಟ್ 10 ರಂದು ಅಡ್ಕಾರ್ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿ ಪರ ಕೃಷಿಕ ಗಂಗಾಧರ ಅಡ್ಕಾರ್ ಅವರು ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಜಾಲ್ಸೂರು ಗ್ರಾಮ ಪಂಚಾಯಿತಿ...

ಕುಶಾಲನಗರ : ಕಾರು ಬೈಕ್ ಭೀಕರ ಅಪಘಾತ ; ಪೆರುವಾಜೆಯ ಯುವಕ ಮೃತ್ಯು

ಕುಶಾಲನಗರದ ಆನೆಕಾಡು ಸಮೀಪ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್‌ ಸವಾರ ಪೆರುವಾಜೆಯ ಕಾರ್ತಿಕ್ ಭಟ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಅವಿವಾಹಿತರಾಗಿದ್ದ ಅವರು ಮೈಸೂರಿನ ಇನ್ಫೋಸಿಸ್ ಉದ್ಯೋಗಿಯಾಗಿದ್ದು, ಅರ್ನಾಡಿ ವಿಷ್ಣು ಭಟ್ ರವರ ಪುತ್ರ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್...

ಅರಂತೋಡು : ಸಂಜೀವಿನಿ ಮಾಸಿಕ ಸಂತೆ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲ್ಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಅರಂತೋಡು ಮತ್ತು ದುರ್ಗಾಮಾತಾ ಸಂಜೀವಿನಿ ಒಕ್ಕೂಟ ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ  ಸಂಜೀವಿನಿ ಮಾಸಿಕ ಸಂತೆ ನಡೆಯಿತು. ಸಭಾ...

ಆಗಸ್ಟ್ 7 ರಂದು ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

ಸುಬ್ರಹ್ಮಣ್ಯ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪ ವಿಭಾಗ ಮಟ್ಟದ ಜನಸಂಪರ್ಕ ಸಭೆಯು ಆಗಸ್ಟ್ 07 ಗುರುವಾರದಂದು ಸುಬ್ರಹ್ಮಣ್ಯ ಉಪ ವಿಭಾಗ ಕಚೇರಿಯಲ್ಲಿ ಜರಗಲಿರುವುದು. ಮಂಗಳೂರು ಮೆಸ್ಕಾಂ ಕಾರ್ಪೊರೇಟ್ ಕಚೇರಿಯ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ಅವರು ಅಧ್ಯಕ್ಷತೆ ವಹಿಸಲಿರುವರು.ಗ್ರಾಹಕರು ತಮ್ಮ ಕುಂದು ಕೊರತೆಗಳನ್ನು ದೂರವಾಣಿ ಕರೆ ಸಂಖ್ಯೆ(08257-200699) ಮೂಲಕ ಸಲ್ಲಿಸಬಹುದೆಂದು...

ಶಿವರಾಮ ಗೌಡ ಎಣ್ಣೆಮಜಲು ನಿಧನ

ಬಳ್ಪ ಗ್ರಾಮದ ಶಿವರಾಮ ಗೌಡ ಎಣ್ಣೆಮಜಲು ಆ.02 ರಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಲೀಲಾವತಿ, ಪುತ್ರ ಪುನಿತ್, ಪುತ್ರಿಯರಾದ ಶ್ರೀಮತಿ ವಾಣಿ, ಶ್ರೀಮತಿ ವೀಣಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!