ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ  ಕನಕದಾಸರ ಕುರಿತು "ಕನಕ ಕಾವ್ಯ ವೈಭವ" ಎಂಬ ಸಂಗೀತ-ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ-ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು  ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ...

ಚತ್ರಪ್ಪಾಡಿ – ಮರದ ಗೆಲ್ಲು ಬಿದ್ದು ಮಹಿಳೆ ಮೃತ್ಯು

ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಮರ ಮೃತಪಟ್ಟ ದಾರುಣ ಘಟನೆ ಜು.27 ರಂದು ನಡೆದಿದೆ.ದಿ.ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ ಮೃತ ದುರ್ದೈವಿ.ಅವರು ಮನೆ ಸಮೀಪವಿದಲ್ಲಿದ್ದಾಗ ಮರದ ಗೆಲ್ಲು ತುಂಡಾಗಿ ಬಿದ್ದು ಮರದಡಿಗೆ ಸಿಲುಕಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರು ಪುತ್ರ ವಸಂತ, ಪುತ್ರಿಯರಾದ ಮಮತಾ ಮತ್ತು ವನಿತಾರನ್ನು ಅಗಲಿದ್ದಾರೆ.
Ad Widget

ಹೆಮ್ಮಾರಿ ಹೆಪಟೈಟಿಸ್

ವಿಶ್ವ ಹೆಪಟೈಟಿಸ್ ದಿನ – ಜುಲೈ 28

ಡಾ|| ಮುರಲೀ ಮೋಹನ್ ಚೂಂತಾರು

ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ...

ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ನೆಲಕ್ಕುರುಳಿದ 15 ಹೆಚ್.ಟಿ ಹಾಗೂ 5 ಎಲ್.ಟಿ ವಿದ್ಯುತ್ ಕಂಬಗಳು ; ಹಾನಿಗೊಳಗಾದ ಒಂದು ವಿದ್ಯುತ್ ಪರಿವರ್ತಕ

ಸಮರೋಪಾದಿಯಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಡೆಸುತ್ತಿರುವ ಮೆಸ್ಕಾಂ ಪವರ್ ಮ್ಯಾನ್ ಗಳು ಹಾಗೂ ಸಿಬ್ಬಂದಿಗಳು

(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಎರಡೂ ತಾಲೂಕುಗಳ ವಿವಿಧೆಡೆಗಳಲ್ಲಿ ಮರಗಳು ಬಿದ್ದು ಹಲವಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯಾಪಕ ವ್ಯತ್ಯಯ ಉಂಟಾಗಿದೆ.ಕಳೆದ ಶನಿವಾರ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ಮರಗಳು ಹಾಗೂ ಮರದ ಕೊಂಬೆಗಳು ಬಿದ್ದ ಪರಿಣಾಮವಾಗಿ ಸುಮಾರು 15 ಹೆಚ್.ಟಿ...

ಎರಡು ದಿನಗಳಿಂದ ಸುಳ್ಯ ತಾಲೂಕು ಕಗ್ಗತ್ತಲಲ್ಲಿ

ಈ ಪರಿಸ್ಥಿತಿಗೆ ಸುಳ್ಯದಲ್ಲಿ 35 ವರ್ಷಗಳಿಂದ ಶಾಸಕರಾಗಿ ಆಡಳಿತ ನಡೆಸುತ್ತಿರುವವರ ಇಚ್ಛಾಶಕ್ತಿ ಕೊರತೆ ಕಾರಣ

ಭವಾನಿಶಂಕರ್ ಕಲ್ಮಡ್ಕ ಆಕ್ರೋಶ

ಸುಳ್ಯದಲ್ಲಿ ನಿರಂತರ 3 ದಿನಗಳಿಂದ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ, ವಿದ್ಯುತ್ ಲೈನ್ ಗಳು ದರಾಶಾಹಿ ಯಾಗಿರುವುದು ಒಂದು ಕಾರಣ. ಇದನ್ನು ತುರ್ತು ದುರಸ್ಥಿ ಪಡಿಸಿ ಪರಿಣಾಮಕಾರಿಯಾಗಿ ಮರು ಸ್ಥಾಪಿಸಲು ಅಧಿಕಾರಿಗಳು, ಇರುವ ಕೆಲವೇ ಕೆಲವು ಲೈನ್ ಮ್ಯಾನ್ ಗಳು ಮತ್ತು ಗುತ್ತಿಗೆ ಸಿಬ್ಬಂದಿಗಳೊಂದಿಗೆ ಪ್ರಯತ್ನ ಪಡುತ್ತಿದ್ದಾರೆ. ಆದರೆ...

ಕಲ್ಲುಗುಂಡಿ : ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಕಲ್ಲುಗುಂಡಿ ಅಂಚೆ ಕಛೇರಿ ಬಳಿಯಲ್ಲಿ ಇಂದು ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ.ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ( KL 13 B 0808) ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ತಿಳಿದು ಬಂದಿದೆ.ಮೃತ...

ದೇವ : ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ದೇವ ಗೆಳೆಯರ ಬಳಗದ ವತಿಯಿಂದ ನಡೆಯಲಿರುವ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗ (ರಿ.) ದೇವ ಇದರ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾದಕ್ಷ ಯೋಗೀಶ ದೇವ, ಕಾರ್ಯದರ್ಶಿ ಜಯಂತ ದೇವ, ಉಪಾಧ್ಯಕ್ಷ ಚೇತನ ಪಡ್ಪು, ಕ್ರೀಡಾಕಾರ್ಯದರ್ಶಿ ರಕ್ಷಿತ್ ಕನ್ನಡಕಜೆ, ಸದಸ್ಯರಾದ ಪ್ರಶಾಂತ...

ಸಂಪಾಜೆ : ಎರಕಡುಪು ಸೇತುವೆ ರಸ್ತೆ  ಸಂಚಾರಕ್ಕೆ ಮುಕ್ತ – ಆರ್.ಟಿ.ಐ ಕಾರ್ಯಕರ್ತರ ಹೋರಾಟಕ್ಕೆ ಫಲ

ಸಂಪಾಜೆ ಗ್ರಾಮದ ಎರಕಡುಪು ಎಂಬಲ್ಲಿ ನಿರ್ಮಿಸಿದ ಸೇತುವೆಗೆ ಕಿಂಡಿ ಅಣೆಕಟ್ಟು ವಾಹನ ಸಂಚಾರಕ್ಕೆ ದುಸ್ತರವಾಗಿರುವ ಬಗ್ಗೆ ಸ್ಥಳೀಯ ನಿವಾಸಿ ಮತ್ತು ಸಾಮಾಜಿಕ ಕಾರ್ಯಕರ್ತರಾದ ಕೆ.ಸೀತಾರಾಮ ಗೌಡರವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಮಂಗಳೂರು ಇವರಿಂದ ಟೆಂಡರ್ ಪ್ರಕಾರ ರೂ.4 ಕೋಟಿಗಳಿಗೆ ಸೇತುವೆ ಕಂ.ಕಿಂಡಿ ಅಣೆಕಟ್ಟು ನಿರ್ಮಿಸಿದ ಬಗ್ಗೆ ಮಾಹಿತಿ ಹಕ್ಕಿನಡಿ ಪಡೆದ ವಿವರಗಳೊಂದಿಗೆ...

ಸುಳ್ಯ : ವಿದ್ಯುತ್ ನಿರಂತರ ಕಣ್ಣುಮುಚ್ಚಾಲೆ – ಮಧ್ಯಾಹ್ನ ಆಗಮಿಸಿದ 33 ಕೆ.ವಿ ವಿದ್ಯುತ್  ಲೈನ್ ಮತ್ತೆ ಫಾಲ್ಟ್

ಕಳೆದ ಮೂರು ದಿನಗಳಿಂದ ನಿರಂತರ ವಿದ್ಯುತ್ ಕಣ್ಣುಮುಚ್ಚಾಲೆ ಆಟದಂತಾಗಿದ್ದು, ನಿನ್ನೆ ಸಂಜೆ ಹೋದ ಕರೆಂಟ್ ಇಂದು ಮಧ್ಯಾಹ್ನ ಸುಳ್ಯಕ್ಕೆ ಆಗಮಿಸಿತ್ತು. ಇದೀಗ ಮತ್ತೆ ಇಂದು ಸಂಜೆ ಮತ್ತೆ 33 ಕೆ.ವಿ ಸುಳ್ಯ ಲೈನ್ ಕೈಕೊಟ್ಟಿದ್ದು,  ವಿದ್ಯುತ್ ಸರಬರಾಜು ಸ್ಥಗಿತವಾಗಿದೆ. ವಿದ್ಯುತ್ ವಿಳಂಬವಾಗುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.

ಜಾಲ್ಸೂರು : ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ಇದರ 26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದಲ್ಲಿ ಇಂದು ನಡೆಯಿತು. ಇದರ ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು  ಹಣ್ಣಿನ ಗಿಡವನ್ನು...
Loading posts...

All posts loaded

No more posts

error: Content is protected !!