- Thursday
- May 7th, 2026
ಕಲ್ಮಡ್ಕ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಬೆಂಗಳೂರಿನ (ಮಾಸ್ಟರ್ ಕ್ರಾಪ್ಟ್ಸ್ ) ಉದ್ಯಮಿ ಸತೀಶ್ ಎನ್.ಎಸ್. ಅವರು ಶಾಲೆಯ 62 ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಬ್ಯಾಗ್ ವಿತರಣೆ ಕಾರ್ಯಕ್ರಮ ಜು. 26 ರಂದು ಶಾಲೆಯಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಾಯಿನಾರಾಯಣ ಕೆ ವಹಿಸಿದ್ದರು. ಹಿ.ವಿ.ಸಂಘದ ನಿರ್ದೇಶಕರಾದ ಸುಬ್ರಾಯ ಓಣ್ಯಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಬ್ಯಾಗ್...
ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರು ಮತ್ತು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ಅಧ್ಯಕ್ಷರಾದ ಮಾಧವ ಬಿ ಕೆ, ಶಾಲಾ...
33 ಕೆವಿ ಸುಳ್ಯ ಲೈನ್ ನ ಮೇಲೆ ವಿವಿಧೆಡೆ ಮರ ಹಾಗೂ ಗೆಲ್ಲು ಬಿದ್ದ ಪರಿಣಾಮ ನಿನ್ನೆ ಸಂಜೆಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದು, ಕುಂಬ್ರ, ಅಮ್ಚಿನಡ್ಕ, ಆನೆಗುಂಡಿ ಸಮೀಪ ಬಿದ್ದಿರುವ ಮರ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇಂದು ಮಧ್ಯಾಹ್ನದ ವೇಳೆಗೆ ಪುತ್ತೂರು ಕಡೆಯಿಂದ ವಿದ್ಯುತ್ ಸರಬರಾಜು ಆಗುವ ನಿರೀಕ್ಷೆ ಇದೆ ಎಂದು ಮಾಹಿತಿ ಲಭ್ಯವಾಗಿದೆ....
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಸುಳ್ಯ ಶಾಖೆಯಲ್ಲಿ ಜು.26 ರಂದು “ಆಟಿದ ಕೂಟ” ನಡೆಯಿತು.ಆಟಿ ತಿಂಗಳು ಹಾಗೂ ನಾಗರ ಪಂಚಮಿಯ ಪ್ರಯುಕ್ತ ಜಿ.ಎಲ್ ಗ್ರಾಹಕರಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ಆಟಿಯ ತಿಂಡಿ-ತಿನಿಸುಗಳಾದ ಪತ್ರೋಡೆ, ಗೇನಸಾಲೆ ಹಾಗೂ ಕಷಾಯದ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು.
ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್.ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ...
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿನ ಕಲಾ ಸಂಘ ಮತ್ತು ವಿಜ್ಞಾನ ಸಂಘಗಳ ಆಶ್ರಯದಲ್ಲಿಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವದಲ್ಲಿ ನಿವೃತ ಸೈನಿಕರಾದ ಶ್ರೀ ಕೆ ಪಿ ಜಗದೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಗಿಲ್ ಯೋಧರ ತ್ಯಾಗ ಬಲಿದಾನಗಳನ್ನು ವಿದ್ಯಾರ್ಥಿಗಳು ಸದಾ ನೆನೆಯಬೇಕು ಮತ್ತು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಭಾರತೀಯ ಸೇನೆಗೆ ಸೇರಿ ಸೇವೆ ಸಲ್ಲಿಸಬೇಕೆಂದು...
ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲುಗುಂಡಿ ಸರಕಾರಿ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಶಿಕ್ಷಣ ತರಗತಿ ಕೊಠಡಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿ ವೇಲು ಉದ್ಘಾಟನೆ ಮಾಡಿ ಮಾತನಾಡಿ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಅವಕಾಶ ಕಲ್ಪಿಸಿರುವುದರಿಂದ ಬಡವರ ಮಕ್ಕಳಿಗೆ ಅನುಕೂಲವಾಗಿದೆ ಕಾರ್ಯಕ್ರಮ ಆರಂಭಿಸಿದ ಸಿದ್ದರಾಮಯ್ಯ ಸರಕಾರಕ್ಕೆ...
ನಡುಗಲ್ಲು-ಹರಿಹರ ರಸ್ತೆ ಮಧ್ಯದ ಕೊರಂಬಠ ಎಂಬಲ್ಲಿ ಬೃಹತ್ ಮರವೊಂದು ಬಳ್ಳಿಗಳ ಸಹಿತವಾಗಿ ಬಿದ್ದ ಪರಿಣಾಮ ವಾಹನ ಸಂಚಾರವು ಸುಮಾರು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ರಸ್ತೆಯನ್ನು ಪುನರ್ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜು.26 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ...
ಸುಳ್ಯ ಕಸಬಾ ಗ್ರಾಮದ ಕೊಯಿಂಗೋಡಿ ದಿ.ಭವಾನಿ ಪ್ರಸಾದ್ ರವರ ಪುತ್ರ ನಿತಿನ್ ಕೊಯಿಂಗೋಡಿ(35ವ) ಯವರು ಅಸೌಖ್ಯದಿಂದ ಜು.25 ರಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜು.25 ರಂದು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.ಮೃತರು ತಾಯಿ ಕವಿತಾ, ಪತ್ನಿ ಶಿಲ್ಪ, ಪುತ್ರ ಪ್ರಿಯಂಷು, ಸಹೋದರ, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
Loading posts...
All posts loaded
No more posts
