ಸುಶ್ಮಿತಾ ಎಂ.ಎ ಗಡಿ ಭದ್ರತಾ ಪಡೆಗೆ ಆಯ್ಕೆ

ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭದ್ರತಾ ಪಡೆಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.  ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಎಕ್ಸಾಮ್ ನಲ್ಲಿ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.ಇವರು ಅರಂತೋಡು ಗ್ರಾಮದ ಅಡ್ತಲೆ ದಿ.ನಾಗಪ್ಪ ಎಂ.ಎಂ ಮತ್ತು ಜಾನಕಿ ದಂಪತಿಗಳ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಡ್ತಲೆ,...

ಸುಳ್ಯ : ಕಾಫಿ ಬೆಳೆಗೆ ಪ್ರೋತ್ಸಾಹ ನೀಡುವ “ಕಾಪಿಕೊ” ಕಾರ್ಯಗಾರ ಉದ್ಘಾಟಿಸಿದ ಸಂಸದ ಬ್ರಿಜೇಶ್ ಚೌಟ

https://youtu.be/rLTT0umkzRc?si=J4QvNec2i5KJKm_0 ಅಡಿಕೆ ಬೆಳೆಗೆ ಹಳದಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಬೆಳೆಗೆ ಉತ್ತೇಜನ ನೀಡಲು "ಕಾಪಿಕೊ ಕಾರ್ಯಗಾರ" ಹಮ್ಮಿಕೊಳ್ಳಲಾಗಿದ್ದು, ಆ.25 ರಂದು ಸುಳ್ಯದ ಸಿಎ ಬ್ಯಾಂಕ್ ನ ಎ.ಎಸ್.ವಿಜಯಕುಮಾರ್ ಸಭಾಭವನದಲ್ಲಿ ಅಯೋಜನೆಗೊಂಡ ಕಾರ್ಯಕ್ರಮವು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್...
Ad Widget

ಮನೆಯ ಸುಂದರ ಕನಸುಗಳ ಸಾಕಾರಗೊಳಿಸಲು ಅಡ್ಕಾರ್ ಎಲೆಕ್ಟ್ರಾನಿಕ್ಸ್ ನಲ್ಲಿ ಸುವರ್ಣಾವಕಾಶ – ಆಗಸ್ಡ್ 25 ರಿಂದ ಸೆಪ್ಟೆಂಬರ್ 07 ರವರೆಗೆ ಅಡ್ಕಾರ್ ಮಹೋತ್ಸವ – ಬಂಪರ್ ಬಹುಮಾನ, ಸ್ಕ್ರಾಚ್ ಕಾರ್ಡ್, ವೀಕ್ಲಿ ಪ್ರೈಜ್ ಗೆಲ್ಲಲು ಇಂದೇ ಭೇಟಿ ಕೊಡಿ

ಸುಳ್ಯದಲ್ಲಿ ಕಳೆದ 29 ವರ್ಷಗಳಿದ ಜನರ ವಿಶ್ವಾಸಗಳಿದ ಪ್ರಸಿದ್ಧ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ 30 ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ಆಗಸ್ಟ್ 25 ರಿಂದ ಸೆಪ್ಟೆಂಬರ್ 7ರವರೆಗೆ ಅಡ್ಕಾರ್ ಮಹೋತ್ಸವ ಆರಂಭಗೊಂಡಿದೆ.ಬಂಪರ್ ಬಹುಮಾನ :ಅಡ್ಕಾರ್ ಮಹೋತ್ಸವದ ಅಂಗವಾಗಿ ಖರೀದಿಯ ಮೇಲೆ ಬಂಪರ್ ಬಹುಮಾನಗಳ ಯೋಜನೆ ರೂಪಿಸಲಾಗಿದ್ದು, ಪ್ರಥಮ ಬಹುಮಾನವಾಗಿ ಬೆಡ್ ರೂಂ...

ಕಾಫಿ ಕೃಷಿ ಉತ್ತೇಜಿಸಲು ಸಂಸದ ಬ್ರಿಜೇಶ್ ಚೌಟ ರ ನೇತೃತ್ವದಲ್ಲಿ ಒಂದು ವಿನೂತನ ಪ್ರಯತ್ನ – ಇಂದು (ಆ.25) ಕಾಪಿಕೊ (Kaapico) ಉದ್ಘಾಟನೆ ಮತ್ತು ಕಾರ್ಯಾಗಾರಕ್ಕೆ ಚಾಲನೆ – ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ವೆಂಕಟ್ ವಳಲಂಬೆ ಮನವಿ

ದಕ್ಷಿಣ ಕನ್ನಡದಲ್ಲಿ ಕಾಫಿ ಕೃಷಿ ಉತ್ತೇಜಿಸಲು ಸಂಸದ ಬ್ರಿಜೇಶ್ ಚೌಟ ರ ನೇತೃತ್ವದಲ್ಲಿ ಒಂದು ವಿನೂತನ ಪ್ರಯತ್ನ ಮಾಡಲಾಗಿದ್ದು ಇದರ ಅಂಗವಾಗಿ ಇಂದು ( ಆ.25) ಬೆಳಿಗ್ಗೆ 10 ಗಂಟೆಗೆ ಕಾಪಿಕೊ (Kaapico) ಉದ್ಘಾಟನೆ ಮತ್ತು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ ಈ ಸಂದರ್ಭದಲ್ಲಿ ಶಾಸಕಿ ಕು ಭಾಗೀರಥಿ ಮುರುಳ್ಯ, ಕಾಫಿ ಬೋರ್ಡ್ ಚಯರ್ ಮ್ಯಾನ್ ದಿನೇಶ್...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರವಾಗಿ ಮುಂದುವರಿದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಆಗಸ್ಟ್ 24 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನವರು ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನವರ ಸಹಯೋಗದೊಂದಿಗೆ ನಿರಂತರವಾಗಿ ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿದ್ದು, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ ಪಕ್ಕದ ಪರಿಸರದಲ್ಲಿ, ಮಾರ್ಗದ ಬದಿ,...

“ಅಮರ ಸುದ್ದಿ ವಿಶೇಷ ವರದಿ”

ಕೃಷಿ ತೋಟಗಳಿಗೆ ಆನೆ ಹಾಗೂ ಇತರೆ ಕಾಡುಪ್ರಾಣಿಗಳ ನಿರಂತರ ದಾಳಿಯಿಂದ ಕಂಗೆಟ್ಟಿರುವ ಸುಳ್ಯ ತಾಲೂಕಿನ ಕೃಷಿಕರು

ಒಂದೆಡೆ ಅಡಿಕೆಗೆ ಹಳದಿ ಎಲೆಚುಕ್ಕೆ ರೋಗವಾದರೆ ಇನ್ನೊಂದೆಡೆ ಕೃಷಿ ತೋಟಗಳಿಗೆ ಕಾಡುಪ್ರಾಣಿಗಳ ನಿರಂತರ ದಾಳಿ ; “ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ” ಎಂಬಂತಾಗಿದೆ ತಾಲೂಕಿನ ಕೃಷಿಕರ ಪರಿಸ್ಥಿತಿ

✍️ಉಲ್ಲಾಸ್ ಕಜ್ಜೋಡಿ

“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಲ್ಕುಂದ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯ

ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಕುಲ್ಕುಂದದ ರೇಂಜ್ ಫಾರೆಸ್ಟ್ ಆಫೀಸ್ ಮುಂಬಾಗದಲ್ಲಿರುವ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ವಿಮಲಾ ರಂಗಯ್ಯ ಎಂ.ಜೆ.ಎಫ್, ಕಾರ್ಯದರ್ಶಿ ಲ| ಗಾಯತ್ರಿ ಕೃಷ್ಣ, ಖಜಾಂಜಿ ಲ| ಭಾರತಿ ದಿನೇಶ್, ಪ್ರದೇಶ 8 ರ ಅಧ್ಯಕ್ಷರಾದ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಪಿ.ಎಂ.ಜೆ.ಎಫ್, ಡಿ.ಸಿ ಗ್ರಾಮೀಣ...

ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಗುತ್ತಿಗಾರು ಪ.ಪೂ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

ಮುಂಗಾರು ವಾಲಿಬಾಲ್ ಅಕಾಡೆಮಿ(ರಿ.) ಸುಳ್ಯ ಹಾಗೂ ಗ್ರಿನ್ ವ್ಯೂ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಒಂದನೇ ತರಗತಿಯಿಂದ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡ ಚಾಂಪಿಯನ್ ಆಗಿ ಹಾಗೂ ಬಾಲಕರ ತಂಡ ರನ್ನರ್ ಆಗಿ ಹೊರಹೊಮ್ಮಿದೆ.

ಉಬರಡ್ಕ ಸೊಸೈಟಿ ಮಹಾಸಭೆ : 162 ಕೋಟಿ ವ್ಯವಹಾರ – ರೂ. 79.24 ಲಕ್ಷ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಣೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಆ.24ರಂದು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಅಧ್ಯಕ್ಷತೆ ವಹಿಸಿ ಎಲ್ಲರನ್ನೂ ಸ್ವಾಗತಿಸಿ, ಸಂಘವೂ 162 ಕೋಟಿ ವ್ಯವಹಾರ ಹೊಂದಿದ್ದು, ರೂ. 79.24 ಲಕ್ಷ ಲಾಭ ಹೊಂದಿದೆ. ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು....

ಸುಳ್ಯ ತಾಲೂಕು‌ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ – ಸಾಧಕರಿಗೆ ಸನ್ಮಾನ – ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಆ. 24ರಂದು ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರ ಇವರ ಅಧ್ಯಕ್ಷತೆಯಲ್ಲಿ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ಗಿರಿದರ್ಶಿನಿಯಲ್ಲಿ ನಡೆಯಿತು. ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ್ ಹೊನ್ನೇಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ ವಾರ್ಷಿಕ ವರದಿ ವಾಚಿಸಿದರೆ,...
Loading posts...

All posts loaded

No more posts

error: Content is protected !!