- Saturday
- May 9th, 2026
ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ಅಪಾಯ ಆಹ್ವಾನಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಆರಣ್ಯ ಇಲಾಖೆ ಅಪಾಯ ಅಹ್ವಾನಿಸುತ್ತಿದ್ದ ಮರವನ್ನು ತೆರಗೊಳಿಸಿದ್ದಾರೆ
ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕರಾದ ಕೆ.ಕೆ ವೆಂಕಟ್ರಮಣ ಕೊಪ್ಪಡ್ಕ ರವರು ಸೇವಾ ನಿವೃತ್ತಿಯನ್ನು ಹೊಂದಿದ್ದು, ಸುಧೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಕಲ್ಮಕಾರು ಗ್ರಾಮದ ಕೊಪ್ಪಡ್ಕ ದಿ| ಕುಶಾಲಪ್ಪ.ಕೆ.ಎಸ್ ಹಾಗೂ ದಿ| ಹೊನ್ನಮ್ಮ ದಂಪತಿಗಳ ಪುತ್ರ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ ಶಾಲೆ ಕಲ್ಮಕಾರು ಇಲ್ಲಿ ಪಡೆದಿದ್ದು, ಪ್ರೌಢಶಾಲಾ ಶಿಕ್ಷಣವನ್ನು...
ಸುಬ್ರಹ್ಮಣ್ಯ ಮೇ 30 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಛಾಯಾ ಮಾನಸ ಗಿಡಗಳನ್ನು ವಿತರಣೆ ಮಾಡಲಾಯಿತು. ಛಾಯಾ ಮಾನಸ ಪ್ಲಾಂಟ ಗಳನ್ನು ಮಾಡುವುದರಿಂದ ಇದರ ಪ್ರಾಮುಖ್ಯತೆ ಏನೆಂದರೆ ಇದರಲ್ಲಿ ಮ್ಯಾಗ್ನಿಷಿಯಮ್, ಕ್ಯಾಲ್ಸಿಯಂ ಹಾಗೂ ಕಬ್ಬಿನಾಂಶಗಳಿರುತ್ತವೆ. ಇದು ಡಯಾಬಿಟಿಸ್ ರೋಗಿಗಳಿಗೆ ಅತ್ಯುತ್ತಮವಾದ ಔಷಧ. ಅಲ್ಲದೆ ಇದರಲ್ಲಿ ರೋಗ ನಿರೋಧಕ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ,...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು(ಮೇ.30) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು(ಮೇ.30) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನಲೆಯಲ್ಲಿ ದು:ಖವನ್ನು ಸಹಿಸಿಕೊಳ್ಳಲಾಗದೆ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬಾಳಿಲದಿಂದ ವರದಿಯಾಗಿದೆ. ಬಾಳಿಲ ಬೊಮ್ಮಣಮಜಲು ಎಂಬಲ್ಲಿನ ನಿವಾಸಿ ಬಾಲಕೃಷ್ಣ ಎಂಬವರ ಆರು ತಿಂಗಳ ಪುತ್ರಿ ಕೆಲದಿನಗಳ ಹಿಂದೆ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿತ್ತು. ಇದರಿಂದ ನೊಂದ ಮಗುವಿನ ತಂದೆ ಬಾಲಕೃಷ್ಣರು ಮೇ. 28 ರಂದು ರಾತ್ರಿ ಮನೆ ಬಳಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ...
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯ...
Loading posts...
All posts loaded
No more posts
