ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಕೃಷಿ ಸಲಕರಣೆ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಲಮೇಳ

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಕೃಷಿ ಸಲಕರಣೆ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಲಮೇಳ ಕಾರ್ಯಕ್ರಮವು ಯುವಕ ಮಂಡಲ ಮಡಪ್ಪಾಡಿ ಇದರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎನ್.ಟಿ. ಹೊನ್ನಪ್ಪ, ಕೃಷಿಕರು ಹಾಗೂ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ್ ಕುಮಾರ್ ಮುಳುಗಾಡು...

ಕುಮಾರಧಾರ ಸ್ನಾನ ಘಟ್ಟಕ್ಕೆ ಕಡಬ ತಹಶಿಲ್ದಾರ್ ಭೇಟಿ – ಪರಿಶೀಲನೆ

ಕುಕ್ಕೆ ಸುಬ್ರಹ್ಮಣದ ಕುಮಾರಧಾರ ಸ್ನಾನ ಘಟ್ಟಕ್ಕೆ ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮೇ.,27 ರಂದು ಭೇಟಿ ನೀಡಿದ್ದುವಿಪರೀತ ಮಳೆ ಬರುತ್ತಿರುವ ಕಾರಣ ಸ್ನಾನ ಘಟ್ಟ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ನಾನ ಘಟ್ಟ ಕ್ಕೆ ಭಕ್ತರು ಇಳಿಯದಂತೆ ತಹಶಿಲ್ದಾರ್ ಆದೇಶ ಮಾಡಿರುವುದಾಗಿ ವರದಿಯಾಗಿದೆ. ಹೊಸ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು ಅದರ...
Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ.30ರಿಂದ ಉಪಹಾರ ಪ್ರಸಾದದ ವ್ಯವಸ್ಥೆ ಆರಂಭ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಮದ್ಯಾಹ್ನ ಮತ್ತು ರಾತ್ರಿ ಅನ್ನದಾಸೋಹ ಭೋಜನ ಪ್ರಸಾದದ ವ್ಯವಸ್ಥೆ ಜಾರಿಯಲ್ಲಿದ್ದು, ಇದೀಗ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಿಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆಯನ್ನು ಮೇ.30 ರಂದು ಪೂರ್ವಾಹ್ನ 8:00 ಗಂಟೆಗೆ ವಿದ್ಯುಕ್ತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು...

ಸರ್ವ ಕ್ರೈಸ್ತ ಸಮುದಾಯ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿಗೆ ಹಾಗೂ ಉನ್ನತ ಧರ್ಜೆಯಲ್ಲಿ ಉತ್ತೀರ್ಣರಾದ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಿಗೆ ಸಂಪಾಜೆಯಲ್ಲಿ ಸನ್ಮಾನ ಕಾರ್ಯಕ್ರಮ

ಮೇ.25 ರಂದು ಸಂಪಾಜೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಮತ್ತು ಸಂಪಾಜೆ ವಲಯಕ್ಕೊಳಪಡುವ ಸರ್ವ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಾಗಿದ್ದು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಮತ್ತು ನಿವೃತ್ತ ಶಿಕ್ಷಕಿಗೆ ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಲಾಯಿತು .ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣವನ್ನು ಮಾಡಿದ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚಿನ...

ಸರ್ವ ಕ್ರೈಸ್ತ ಸಮುದಾಯ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿಗೆ ಹಾಗೂ ಉನ್ನತ ಧರ್ಜೆಯಲ್ಲಿ ಉತ್ತೀರ್ಣರಾದ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಿಗೆ ಸಂಪಾಜೆಯಲ್ಲಿ ಸನ್ಮಾನ ಕಾರ್ಯಕ್ರಮ

ಮೇ.25 ರಂದು ಸಂಪಾಜೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಮತ್ತು ಸಂಪಾಜೆ ವಲಯಕ್ಕೊಳಪಡುವ ಸರ್ವ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಾಗಿದ್ದು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಮತ್ತು ನಿವೃತ್ತ ಶಿಕ್ಷಕಿಗೆ ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಲಾಯಿತು . ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣವನ್ನು ಮಾಡಿದ ಸಂತ ಪ್ರಾನ್ಸಿಸ್ ಕ್ಸೇವಿಯರ್...

ಕಲ್ಲುಗುಂಡಿ : ವಿದ್ಯುತ್ ಶಾಕ್ – ಲೈನ್ ಮ್ಯಾನ್ ಗೆ ಗಂಭೀರ ಗಾಯ

ಕಲ್ಲುಗುಂಡಿ  ಕಡಪಾಲದ ಸಮೀಪ  ಕರೆಂಟ್ ಲೈನ್ ಸರಿ ಮಾಡುತ್ತಿದ್ದ ಸಂದರ್ಭದಲ್ಲಿ ಲೈನ್ ಮ್ಯಾನ್ ನವೀನ್ ಎಂಬವರಿಗೆ ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ. ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದ ನವೀನ್ ಅವರನ್ನು ಸ್ಥಳೀಯರು  ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅರಂತೋಡು : ಪ್ರಾಥಮಿಕ ಶಾಲಾ ಬಳಿ ರಸ್ತೆಗೆ ಬಾಗಿರುವ ಅಪಾಯಕಾರಿ ಮರ ತೆರವುಗೊಳಿಸಲು ಒತ್ತಾಯ

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ  ಬಳಿ ರಸ್ತೆಗೆ ಬಾಗಿ ಮರವೊಂದು ನಿಂತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ  ರಸ್ತೆಯಲ್ಲಿರುವ ಮರವನ್ನು ಅಪಾಯ ಸಂಭವಿಸುವ ಮೊದಲು ತೆರವುಗೊಳಿಸಲು ನಾಗರಿಕರು ಒತ್ತಾಯಿಸಿದ್ದಾರೆ.

ಮರುಪರೀಕ್ಷೆ ಬರೆದ ಗುತ್ತಿಗಾರು ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿ ಯಶಸ್ವಿ ಎರ್ದಡ್ಕಳಿಗೆ 21 ಹೆಚ್ಚುವರಿ ಅಂಕ

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಯಶಸ್ವಿ ಎರ್ದಡ್ಕ ಇವರು ಫಲಿತಾಂಶ ಉತ್ತಮಪಡಿಸುವ ಸಲುವಾಗಿ ಮರು ಪರೀಕ್ಷೆ ಬರೆದಿದ್ದು 21 ಅಂಕ ಹೆಚ್ಚುವರಿ ಪಡೆದುಕೊಂಡಿರುತ್ತಾರೆ. ಮರು ಪರೀಕ್ಷೆಯಲ್ಲಿ 522 ಡಿಸ್ಟಿಂಕ್ಷನ್ ಅಂಕ ಪಡೆದದಿರುತ್ತಾರೆ. ಇವರು ಮಾಧವ ಎರ್ದಡ್ಕ ಹಾಗೂ ರೂಪ ಎರ್ದಡ್ಕ ರವರ...

ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ನದಿ, ಜಲಪಾತಗಳ ಬಳಿ ಹುಚ್ಚಾಟ ಮಾಡದಿರಿ… ಒಂದು ಕ್ಷಣದ ಖುಷಿಗಾಗಿ ಅಮೂಲ್ಯವಾದ ಪ್ರಾಣವನ್ನು ಅಪಾಯಕ್ಕೆ ಒಡ್ಡದಿರಿ…

ಇದೀಗ ಮಳೆಗಾಲ ಪ್ರಾರಂಭವಾಗಿದ್ದು, ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಇನ್ನೇನು ಕೆಲವೇ ದಿನಗಳಲ್ಲಿ ನದಿ-ಜಲಪಾತ, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯಲು ಪ್ರಾರಂಭಿಸುತ್ತವೆ.ಮನುಷ್ಯ ಸೇರಿದಂತೆ ಪ್ರಾಣಿ-ಪಕ್ಷಿ, ಜೀವಸಂಕುಲದ ಉಳಿವಿಗೆ ಮಳೆ ಅತ್ಯಗತ್ಯ. ಆದರೆ ಮನುಷ್ಯರಾದ ನಾವುಗಳು ಇಂದು ನಮ್ಮ ಉಳಿವಿಗಾಗಿ ಸುರಿಯುತ್ತಿರುವ ಈ ಮಳೆಯಲ್ಲಿ ಹುಚ್ಚಾಟ ಮಾಡಿ ನಮ್ಮ ಪ್ರಾಣಕ್ಕೆ ನಾವೇ ಕುತ್ತು...

ಗೂನಡ್ಕ ಮರ ಬಿದ್ದು ಮನೆಗಳಿಗೆ ಹಾನಿ – ನೆರವಿಗೆ ಧಾವಿಸಿದ ಸಂಘ ಸಂಸ್ಥೆಗಳು – ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ತಂಡ ಭೇಟಿ

ಸಂಪಾಜೆ ಗ್ರಾಮದ ಗೂನಡ್ಕ ಉಮ್ಮರ್ ಹಾಜಿ ಯವರ ಬಾಡಿಗೆ ಮನೆ ಮೇಲೆ ಸಾಗುವಾನಿ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು, ಅದರಲ್ಲಿ ವಾಸವಿದ್ದ 3 ಕುಟುಂಬ ಅಪಾಯದಿಂದ ಪಾರಾಗಿದ್ದಾರೆ.ಮನೆಯಲ್ಲಿ ವಾಸವಿದ್ದ 2 ಮಕ್ಕಳು ಹಾಗೂ ತಾಯಿಯ ಮೇಲೆ ಸೀಟು ಬಿದ್ದು ಸಣ್ಣ ಪುಟ್ಟ ಹಾನಿಯಾಗಿದ್ದು ಸುಳ್ಯದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ತೆರಳಿದ್ದಾರೆ. ಅಲ್ಲದೆ 3 ಮನೆಗಳಲ್ಲಿ...
Loading posts...

All posts loaded

No more posts

error: Content is protected !!