- Saturday
- May 9th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಿದ್ಯಾರ್ಥಿ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ದಿನಾಂಕ 13 ಮೇ 2025ರಂದು ನಡೆಸಲಾಯಿತು. ಈ ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಇವರು ತೆಂಗಿನ ಕಾಯಿ ಒಡೆಯುವುದರ ಮೂಲಕ ಚಾಲನೆಯನ್ನು ನೀಡಿದರು. ಒಟ್ಟು 10 ಪಂದ್ಯಾಟಗಳು...
ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 22 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ...
ಬೆಳ್ಳಾರೆ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ 2024 - 25 ನೇ ಸಾಲಿನ ವಾರ್ಷಿಕ ಸಭೆ ಮೇ. 13 ರಂದು ಬೆಳ್ಳಾರೆಯ ಸ್ನೇಹ ಸದನ ಸಭಾಂಗಣದಲ್ಲಿ ನಡೆಯಿತು. ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಮಣಿಯಾಣಿ ಪಡ್ಪು ಇವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ವಸಂತ ಗೌಡ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಐನೆಕಿದು ವಾರ್ಡ್ ನ ತೆರವಾದ ಒಂದು ಸ್ಥಾನ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಬಿಜೆಪಿಯ ಶ್ರೀಮತಿ ಮೋಹಿನಿ ಶ್ರೀಧರ ಅಂಙಣ ರವರು ಮೇ.14 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾಮಪತ್ರ ಸಲ್ಲಿಕೆ ಮಾಡಲು ನಿನ್ನೆ ಕೊನೆಯ ದಿನವಾಗಿದ್ದು, ಇತರೆ ಯಾವುದೇ ಪಕ್ಷಗಳು ಅಥವಾ ವ್ಯಕ್ತಿಗಳು ನಾಮಪತ್ರ ಸಲ್ಲಿಸದೇ ಇರುವ...
ದೇವಚಳ್ಳ ಗ್ರಾಮದ ತಳೂರು ನಿವಾಸಿ ತೀರ್ಥರಾಮ ಗೌಡ ಬಾಳೆತೋಟ ಅಲ್ಪ ಕಾಲದ ಅಸೌಖ್ಯದಿಂದ ಮೇ 13 ರಂದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಶಶಿಕಲಾ, ಪುತ್ರರಾರ ಯತಿನ್, ಕಾರ್ತಿಕ್, ದಿವಿನ್ ಹಾಗೂ ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ಶ್ರೀ ಪಿ. ಜಿ ಅಂಬೆಕಲ್ ರವರು ನಿವೃತ್ತ ಮುಖ್ಯಶಿಕ್ಷಕರಾಗಿದ್ದು, "ಇದು ಎಂಥಾ ಲೋಕವಯ್ಯಾ" ಅವರು ರಚಿಸಿದ ಐದನೇ ಕೃತಿ ಯಾಗಿದೆ. ಈ ಕಥಾ ಸಂಕಲನದಲ್ಲಿ ಒಟ್ಟು ಹದಿನೇಳು ಕಥೆಗಳಿವೆ. ಕಥಾ ಸಂಕಲನಕ್ಕೆ ಕೊಟ್ಟ ಶೀರ್ಷಿಕೆಯ ಕಥೆ ಈ ಸಂಕಲನದಲ್ಲಿ ಇಲ್ಲದಿದ್ದರೂ, ಈ ಎಲ್ಲ ಕಥೆಗಳ ಮೂಲಕ ಕಟ್ಟಿರುವ ಬದುಕಿನ ಬಿಂಬ ಈ ಶೀರ್ಷಿಕೆಗೆ ತಕ್ಕಂತೆ ಸೂಕ್ತ...
ಕಲ್ಮಡ್ಕ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಕಲ್ಮಡ್ಕ ಗ್ರಾಮ ಪಂಚಾಯತ್ ಸಹಭಾಗಿತ್ವ ವಾರ್ಷಿಕ ಕ್ರಿಯಾಯೋಜನೆ(GPDP) ತಯಾರಿಸುವ ಕುರಿತಾಗಿ ವಿಶೇಷ ಸಭೆಯನ್ನು ಮೇ. 13ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಿತು. ಸಹಭಾಗಿತ್ವ ವಾರ್ಷಿಕ(GPDP) ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ,...
ರೆನ್ಶಿ ಯೋಗ ಸಂಸ್ಥೆ ದುಬೈ ಯ.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ಚಿನ್ನದ ಪದಕ ಗಳಿಸಿರುತ್ತಾರೆ.ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೆಕಲ್ಲು ಸರಕಾರಿ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ನಡೆದ ಚೆಸ್ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಟ್ರಸ್ಟ್ ವತಿಯಿಂದ ನಡೆಯುವ ಕರಾಟೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಗುತ್ತಿಗಾರಿನ ಪ.ವರ್ಗದ ಸಭಾಭವನದಲ್ಲಿ ನಡೆಯಿತು. ಶ್ರೀಮತಿ ಮೀನಾಕ್ಷಿ ಉಮೇಶ್ ಮುಂಡೋಡಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಶ್ರೀಮತಿ ಪ್ರೀತಿ ನಿಶ್ಚಿತ್ ದೇವಶ್ಯ...
ಕರ್ನಾಟಕ ರಾಜ್ಯ ಕಾನೂನು ವಿವಿ ಮತ್ತು ಕೆವಿಜಿ ಕಾನೂನು ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಕೆವಿಜಿ ಕ್ರೀಡಾoಗಣ ದಲ್ಲಿ 2ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿ ಮಟ್ಟದ ಫುಟ್ಬಾಲ್ ಪಂದ್ಯಾಟ ಮುಕ್ತಾಯಗೊಂಡಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ...
Loading posts...
All posts loaded
No more posts
