ಕೊಲ್ಲಮೊಗ್ರು : ಏ.30 ರಿಂದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ಏ.30 ರಿಂದ ಮೇ.01 ರವರೆಗೆ ನಡೆಯಲಿದ್ದು, ಏ.30 ರಂದು ಭಂಢಾರ ಬರುವುದು ಹಾಗೂ ಮೇ.01 ರಂದು ನೇಮ ನಡಾವಳಿ ನಡೆಯಲಿದೆ. ಮದ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

ಆರಂತೋಡು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ನಿರಂತರ 71ನೇ ತಿಂಗಳ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಆರಂತೋಡು ಗ್ರಾಮ ಪಂಚಾಯತ್ ನ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛತಾ ಅಭಿಯಾನ ದ ಅಂಗವಾಗಿ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತೆಯ ನಿರಂತರ 71 ತಿಂಗಳ ಕಾರ್ಯಕ್ರಮ ಶ್ರೀ ದುರ್ಗಾಮಾತಾ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ದಿನಾಂಕ 27.4.2025ನೇ ಆದಿತ್ಯವಾರ ದಂದು ಬೆಳಿಗ್ಗೆ 7.30ರಿಂದ 9.30ರ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ದುರ್ಗಾ ಮಾತಾ ಸಂಜೀವಿನಿ ಒಕ್ಕೂಟದ ಸದಸ್ಯರಲ್ಲದೆ ಗ್ರಾಮ ಪಂಚಾಯತ್...
Ad Widget

ಕೆ.ಎಂ.ಎಫ್. ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಗೆಲುವು

ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.) ಚುನಾವಣೆ ಇಂದು ನಡೆದು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಜಯಗಳಿಸಿದ್ದಾರೆ. ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಸ್. ಬಿ.‌ಜಯರಾಮ ರೈ 190, ಭರತ್ ನೆಕ್ರಾಜೆ 173, ಚಂದ್ರಶೇಖರ ರಾವ್‌ 169, ಹೆಚ್ ಪ್ರಭಾಕರ್ 157, ಸವಿತಾ ಎಸ್ ಶೆಟ್ಟಿ ಮತ ಪಡೆದು...

ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದಲ್ಲಿ ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ಹರಿಹರ ಹಾಗೂ ಕೊಲ್ಲಮೊಗ್ರು ವಲಯದ ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಏ.22 ರಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ನಡೆಯಿತು.ಜಿಲ್ಲಾ ಕೇಂದ್ರ ಬ್ಯಾಂಕ್ ವಲಯ ಮೇಲ್ವಿಚಾರಕರಾದ ಮನೋಜ್ ಮಾಣಿಬೈಲು ರವರು ಸಮವಸ್ತ್ರ...

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್.ಎಸ್.ಎಸ್ ಘಟಕ ಮತ್ತು ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಜಂಟಿಯಾಗಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 25/04/2025 ರಂದು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ತ್ರಿಮೂರ್ತಿ ಅವರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಅವರು ಸಂಪನ್ಮೂಲ...

ಡಿಡಿ ಚಂದನ ವಾಹಿನಿಯ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗಿಯಾದ ನ್ಯಾಯವಾದಿ ಪ್ರಿಯಾ ಮಹೇಶ್

https://www.youtube.com/live/TatlfwxUDeY?si=Ln5wTQFSVBatZwgz ಡಿಡಿ ಚಂದನ ವಾಹಿನಿಯ ಹಲೋ ಗೆಳೆಯರೇ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಪುತ್ತೂರಿನ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿ ಹಾಗೂ ಸಂವಿದಾನ ನ್ಯಾಯ ಫೆಲೋಶಿಪ್ ಹಾಗೂ ನ್ಯಾಯಾ ಸಮಿತಿಯ ಪ್ಯಾನಲ್ ವಕೀಲಾರಾಗಿರುವ ಶ್ರೀಮತಿ ಪ್ರಿಯಾ ಮಹೇಶ್ ರವರು ಎ.24 ರಂದು ಭಾಗವಹಿಸಿದರು. ವೀಕ್ಷಕರಿಂದ ಬಂದ ಕರೆಗಳಿಗೆ ಉಚಿತ ಕಾನೂನು ಸೇವೆಗಳ ಕುರಿತು...

ಡಾ. ಆರ್. ಕೆ. ನಾಯರ್ ರವರಿಗೆ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿಯಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳರಿಂದ ಪ್ರಶಸ್ತಿ ಪ್ರಧಾನ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇಯ ದಿನದಂದು ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭವು ಎ.22 ರಂದು ಮಠದ ಸಭಾಭವನದಲ್ಲಿ ನಡೆಯಿತು. ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಸಚ್ಚಿದಾನಂದ ಭಾರತಿಶ್ರೀಪಾದಂಗಳವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರೀನ್ ಹೀರೋ ಆಫ್ ಇಂಡಿಯಾ...

ಪಹಲ್ಗಾಮ್ ಘಟನೆ ಕಲ್ಲುಗುಂಡಿ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ಕೃತ್ಯಕ್ಕೆ ಖಂಡನೆ

ಭಾರತದ ಹಚ್ಚ ಹಸಿರಿನ ತಾಣ ಕಾಶ್ಮೀರದ ಪಹಲ್ಗಾಮ್ ಬಳಿ ಉಗ್ರಗಾಮಿಗಳಿಂದ ಹುತಾತ್ಮರಾದ ಪ್ರವಾಸಿಗರಿಗೆ ಸಂತಾಪ ಸೂಚಿಸಿ ಮಾತಾನಾಡಿದ ಕಲ್ಲುಗುಂಡಿ ಜುಮಾ ಮಸೀದಿಯ ಧರ್ಮ ಗುರುಗಳಾದ ಬಹು ನಾಸಿರ್ ದಾರಿಮಿ ಇಸ್ಲಾಂ ಧರ್ಮ ಯಾವತ್ತೂ ಉಗ್ರ ವಾದವನ್ನು ಬೆಂಬಲಿಸುವುದಿಲ್ಲ, ಹಾಗು ಉಗ್ರಗಾಮಿಗಳನ್ನು ಬೆಂಬಲಿಸುವುದಿಲ್ಲ . ಹುತಾತ್ಮರಾದ ಎಲ್ಲರ ಕುಟುಂಬ ವರ್ಗಕ್ಕೆ ಸಹನೆ ತಾಳ್ಮೆ ಇರಲಿ ನಾವೆಲ್ಲರೂ ಭಾರತೀಯರು...

ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ

ಕುಕ್ಕೆಸುಬ್ರಹ್ಮಣ್ಯದ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಎ.25 ರಂದು ಕುಕ್ಕೆಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ನಿವೃತ್ತ ಅಧಿಕಾರಿ ಅಶೋಕ್ ಮೂಲೆಮಜಲು, ಉಪನ್ಯಾಸಕ ಪದ್ಮ ಕುಮಾರ್ ಗುಂಡಡ್ಕ ಘಟನೆ...

ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್

ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...
Loading posts...

All posts loaded

No more posts

error: Content is protected !!