ತಾಲೂಕು ಗೌಡ ಮಹಿಳಾ ಘಟಕದ ವರ್ಷ ಸಂಭ್ರಮ

ಸಾಂದೀಪ್ ಶಾಲೆಯ ಮಕ್ಕಳ ಜೊತೆ ವಿಶೇಷ ಕಾರ್ಯಕ್ರಮ‌

ಗೌಡರ ಯುವ ಸೇವಾ ಸಂಘ ಸುಳ್ಯ, ತಾಲೂಕು ಗೌಡ ಮಹಿಳಾ ಘಟಕ ಸುಳ್ಯ ಇದರ ಆಶ್ರಯದಲ್ಲಿ ಮಹಿಳಾ ಘಟಕದ "ವರ್ಷ ಸಂಭ್ರಮ" ಕಾರ್ಯಕ್ರಮ ಸಾಂದೀಪ್ ವಿಶೇಷ ಶಾಲೆಯಲ್ಲಿ ಜು.28 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ವಿನುತಾ ಪಾತಿಕಲ್ಲು ವಹಿಸಿದ್ದರು.  ಮುಖ್ಯ ಅತಿಥಿ ಡಾ.ಸಾಯಿಗೀತ ಜ್ಙಾನೇಶ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ...

ಐನೆಕಿದು : ಗಾಳಿ-ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರಗಳನ್ನು ತೆರವುಗೊಳಿಸಲು ಮೆಸ್ಕಾಂ ಇಲಾಖೆಯವರಿಗೆ ಸಹಕರಿಸಿದ ನಿಸರ್ಗ ಯುವಕ ಮಂಡಲದ ಸದಸ್ಯರು

ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಗೆ ಐನೆಕಿದು ಗ್ರಾಮದ ಗುಂಡಡ್ಕದಿಂದ ಮಲೆಯಾಳದವರೆಗೆ ಪೈಲಾಜೆ, ಐನೆಕಿದು, ಕೆರೆಕಾಡು ಹಾಗೂ ನವಗ್ರಾಮ ಸೇರಿದಂತೆ ಮುಂತಾದ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಇದ್ದ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿಬಿದ್ದು ಸುಮಾರು 10 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಅಲ್ಲದೇ ರಸ್ತೆಗೆ ಮರಗಳು ಉರುಳಿಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಸಂದರ್ಭದಲ್ಲಿ...
Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಮೂವರಿಗೆ ಪಿ.ಎಚ್.ಎಫ್ ಪದವಿ

ಸುಬ್ರಹ್ಮಣ್ಯ ಜುಲೈ 24 : ರೋಟರಿ ಅಂತರಾಷ್ಟ್ರೀಯ ಸಂಸ್ಥೆಯ ಸ್ಥಾಪಕರಾದ ಪೌಲ್  ಹ್ಯಾರಿಸ್ ಅವರ ಸವಿನೆನಪಿನಲ್ಲಿ ರೋಟರಿಯಲ್ಲಿ ಸಲ್ಲಿಸಿದ ಅತ್ಯುನ್ನತ ಸೇವೆಗಾಗಿ  ಕೊಡಮಾಡುವ  ಪದವಿ ಪೌಲ್ ಹ್ಯಾರಿಸ್ ಫೆಲೋಶಿಪ್(PHF) ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಶೇಖರ ನಾಯರ್, ಪೂರ್ವಾಧ್ಯಕ್ಷರಾದ ಮೈಲಪ್ಪ  ಸಂಕೇಶ ಹಾಗೂ ಕಾರ್ಯದರ್ಶಿ ಚಿದಾನಂದ ಕುಳ ಇವರಿಗೆ ಈ ಬಾರಿ...

ಕುಕ್ಕೆ : ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ನಿವೃತ್ತ ಯೋಧರಿಗೆ ಗೌರವಾರ್ಪಣೆ

ಸುಬ್ರಹ್ಮಣ್ಯ: ಜೆಸಿಐ ಕಡಬ ಕದಂಬ, ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಸೋಮವಾರ ನಡೆಯಿತು.ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ನಿವೃತ್ತ ಸುಭೇದಾರ್ ವಾಸುದೇವ ಗೌಡ ನಡ್ಕ ದಿಕ್ಸೂಚಿ ಭಾಷಣ...

ಮರ್ಕಂಜ : ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಸರ್ಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ ಪಠ್ಯಧಾರಿತ ಮೌಲ್ಯಾಂಕನ ಬುನಾದಿ ಸಾಮರ್ಥ್ಯ ಮತ್ತು ಸಂಖ್ಯಾಜ್ಞಾನ, ಸಚೇತನ ಕಾರ್ಯಕ್ರಮ ಹಾಗೂ ಮಾದಕ ವಸ್ತುಗಳ ಜಾಗೃತಿ ಮುಂತಾದ ವಿಷಯಗಳ ಕುರಿತು ಪೋಷಕರಿಗೆ ಮಾಹಿತಿ ನೀಡುವ ಸಲುವಾಗಿ ಜು.26 ರಂದು ಪೋಷಕರ ಸಭೆ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ವೀಣಾ.ಎಂ.ಟಿ, ಶಾಲಾಭಿವೃದ್ಧಿ...

ಕಡಬ ಪಟ್ಟಣ ಪಂಚಾಯತ್ ಚುನಾವಣೆ : ಎಸ್‌.ಡಿ.ಪಿ.ಐ ಅಭ್ಯರ್ಥಿಗಳು ಕಣಕ್ಕೆ

ಕಡಬ : ಜು.27 - ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌.ಡಿ.ಪಿ.ಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು  ಎಸ್‌.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ  ಕಲಾರದ ರಮಳಾನ್ ಸನ್ ರೈಸ್ ರವರ ಮನೆಯಲ್ಲಿ  ನಡೆಯಿತು.ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಸಮಿತಿಗೆ...

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ  ಕನಕದಾಸರ ಕುರಿತು "ಕನಕ ಕಾವ್ಯ ವೈಭವ" ಎಂಬ ಸಂಗೀತ-ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ-ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು  ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ...

ಚತ್ರಪ್ಪಾಡಿ – ಮರದ ಗೆಲ್ಲು ಬಿದ್ದು ಮಹಿಳೆ ಮೃತ್ಯು

ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಮರ ಮೃತಪಟ್ಟ ದಾರುಣ ಘಟನೆ ಜು.27 ರಂದು ನಡೆದಿದೆ.ದಿ.ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ ಮೃತ ದುರ್ದೈವಿ.ಅವರು ಮನೆ ಸಮೀಪವಿದಲ್ಲಿದ್ದಾಗ ಮರದ ಗೆಲ್ಲು ತುಂಡಾಗಿ ಬಿದ್ದು ಮರದಡಿಗೆ ಸಿಲುಕಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರು ಪುತ್ರ ವಸಂತ, ಪುತ್ರಿಯರಾದ ಮಮತಾ ಮತ್ತು ವನಿತಾರನ್ನು ಅಗಲಿದ್ದಾರೆ.

ಹೆಮ್ಮಾರಿ ಹೆಪಟೈಟಿಸ್

ವಿಶ್ವ ಹೆಪಟೈಟಿಸ್ ದಿನ – ಜುಲೈ 28

ಡಾ|| ಮುರಲೀ ಮೋಹನ್ ಚೂಂತಾರು

ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ...

ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ನೆಲಕ್ಕುರುಳಿದ 15 ಹೆಚ್.ಟಿ ಹಾಗೂ 5 ಎಲ್.ಟಿ ವಿದ್ಯುತ್ ಕಂಬಗಳು ; ಹಾನಿಗೊಳಗಾದ ಒಂದು ವಿದ್ಯುತ್ ಪರಿವರ್ತಕ

ಸಮರೋಪಾದಿಯಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಡೆಸುತ್ತಿರುವ ಮೆಸ್ಕಾಂ ಪವರ್ ಮ್ಯಾನ್ ಗಳು ಹಾಗೂ ಸಿಬ್ಬಂದಿಗಳು

(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಎರಡೂ ತಾಲೂಕುಗಳ ವಿವಿಧೆಡೆಗಳಲ್ಲಿ ಮರಗಳು ಬಿದ್ದು ಹಲವಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯಾಪಕ ವ್ಯತ್ಯಯ ಉಂಟಾಗಿದೆ.ಕಳೆದ ಶನಿವಾರ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ಮರಗಳು ಹಾಗೂ ಮರದ ಕೊಂಬೆಗಳು ಬಿದ್ದ ಪರಿಣಾಮವಾಗಿ ಸುಮಾರು 15 ಹೆಚ್.ಟಿ...
Loading posts...

All posts loaded

No more posts

error: Content is protected !!