- Tuesday
- July 7th, 2026
ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಮೃತರು ಗೋಣಿಕೊಪ್ಪ ಮೂಲದವರು ಎಂದು ತಿಳಿದುಬಂದಿದೆ.
ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದ್ದು, ನಾಲ್ವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆ ರವರು ಜು.22 ರಂದು ನಾಪತ್ತೆಯಾಗಿದ್ದರು.ಘಟನೆಯ ಬಗ್ಗೆ ಅವರ ಪತ್ನಿ ಶ್ರೀಮತಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರು ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ...
ವಿವೇಕ ಜಾಗ್ರತ ಬಳಗ ಏನೆಕಲ್ಲು ಇದರ ವತಿಯಿಂದ ಜು.26 ಶನಿವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಆದಿಶಕ್ತಿ ಭಜನಾ ಮಂದಿರ ಏನೆಕಲ್ಲು ಇಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು, ಅದರೊಂದಿಗೆ ಸಾರ್ವಜನಿಕ ಆರೋಗ್ಯ ಇಲಾಖೆಯವರಿಂದ ಉಚಿತ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿವೇಕ ಜಾಗೃತ ಬಳಗ ತನ್ನ...
"ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಸಿದ್ಧತೆ, ಕಾಡು ಪ್ರಾಣಿಗಳಿಂದ ಕೃಷಿ ಹಾಗೂ ಜೀವಕ್ಕೆ ಹಾನಿ, ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಿಸಲು ನಿಷೇಧದ ಬಗ್ಗೆ, ಜಾಗದ ಫ್ಲೋಟಿಂಗ್ ಸಮಸ್ಯೆ, ರೈತರ ಉಳಿವಿಗಾಗಿ ಮತ್ತು ಗ್ರಾಮೀಣ ಪ್ರದೇಶದ ಜನರ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರನ್ನು ಜಾಗೃತಗೊಳಿಸಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ" ಎಂದು ಮಲೆನಾಡು ಜನ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ(ಜು.25) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು...
ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ.ಕೆ ಕುಚ್ಚಾಲ ಅವರಿಗೆ ಬೀಳ್ಕೊಡುಗೆ ಸಮಾರಂಭ ಇಂದು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ಶಿವರಾಮ.ಕೆ ಅವರನ್ನು ಅಭಿನಂದಿಸಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಜಿ.ಪಂ ಸದಸ್ಯರಾದ ಭರತ್ ಮುಂಡೋಡಿ ಮಾತನಾಡಿ ಅವರ ಕರ್ತವ್ಯ ನಿಷ್ಠೆಯನ್ನು ಸ್ಮರಿಸುತ್ತಾ "ನಿಷ್ಠೆಯಿಂದ ಕೆಲಸ...
ಕಡಬ ತಾಲೂಕು ಏನೆಕಲ್ಲು ಗ್ರಾಮದ ಪದ್ನಡ್ಕ ದಿ.ವಿಜಯಕುಮಾರ್ ಪೂಜಾರಿಯವರ ಪುತ್ರಿ ಅಶ್ವಿನಿ(25) ಅಸೌಖ್ಯದಿಂದ ಜು.21 ರಂದು ನಿಧನರಾದರು. ಅಶ್ವಿನಿ ಅವರಿಗೆ ಒಂದುವರೆ ವರ್ಷಗಳ ಹಿಂದಷ್ಟೇ ಕೊಡಿಂಬಾಳದ ರಂಜಿತ್ ಅವರೊಂದಿಗೆ ವಿವಾಹವಾಗಿತ್ತು. ಅನಾರೋಗ್ಯ ಎಂದು ಚಿಕಿತ್ಸೆಗೆ ಹೋದಾಗ ಬ್ಲಡ್ ಕ್ಯಾನ್ಸರ್ ಎಂದು ಗೊತ್ತಾಗಿ ಅವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ ರಂಜಿತ್, ತಾಯಿ...
ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ.ಇ.ಓ ವಿನಾಯಕ್ ಖರ್ಬಾರಿ ಯವರನ್ನು ಇಂದು ತಾಲೂಕು ಪಂಚಾಯತ್ ಕಚೇರಿಯಲ್ಲಿ ಭೇಟಿ ಮಾಡಿದ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ಕೆ.ಪಿ.ಸಿ.ಸಿ ಪ್ರಧಾನ...
ಆಟೋರಿಕ್ಷಾ ಚಾಲಕರ ಸಂಘ ಹರಿಹರಪಲ್ಲತ್ತಡ್ಕ ಇದರ ವತಿಯಿಂದ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು.ಸಂಘದ ಹಿರಿಯ ಸದಸ್ಯರಾದ ಪರಮೇಶ್ವರ ರಾಗಿಯಡ್ಕ ದೀಪ ಬೆಳಗಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಫಲಪುಷ್ಪ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಧು ಗೋಳ್ಯಾಡಿ, ಕಾರ್ಯದರ್ಶಿ ರಾಕೇಶ್ ಬೆಂಡೋಡಿ, ಕೋಶಾಧಿಕಾರಿ ಭರತ್ ಕೇಮಟಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
Loading posts...
All posts loaded
No more posts
