ತೀರ್ಥರಾಮ ಗೌಡ ಬಾಳೆತೋಟ ನಿಧನ

ದೇವಚಳ್ಳ ಗ್ರಾಮದ ತಳೂರು ನಿವಾಸಿ ತೀರ್ಥರಾಮ ಗೌಡ ಬಾಳೆತೋಟ ಅಲ್ಪ ಕಾಲದ ಅಸೌಖ್ಯದಿಂದ ಮೇ 13 ರಂದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಶಶಿಕಲಾ, ಪುತ್ರರಾರ ಯತಿನ್, ಕಾರ್ತಿಕ್, ದಿವಿನ್ ಹಾಗೂ ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಕಥಾ ಸಂಕಲನ “ಇದು ಎಂಥಾ ಲೋಕವಯ್ಯಾ” ಅವಲೋಕನ- ವಿಮಲಾರುಣ ಪಡ್ಡoಬೈಲು

ಶ್ರೀ ಪಿ. ಜಿ ಅಂಬೆಕಲ್ ರವರು ನಿವೃತ್ತ ಮುಖ್ಯಶಿಕ್ಷಕರಾಗಿದ್ದು, "ಇದು ಎಂಥಾ ಲೋಕವಯ್ಯಾ" ಅವರು ರಚಿಸಿದ ಐದನೇ ಕೃತಿ ಯಾಗಿದೆ. ಈ ಕಥಾ ಸಂಕಲನದಲ್ಲಿ ಒಟ್ಟು ಹದಿನೇಳು ಕಥೆಗಳಿವೆ. ಕಥಾ ಸಂಕಲನಕ್ಕೆ ಕೊಟ್ಟ ಶೀರ್ಷಿಕೆಯ ಕಥೆ ಈ ಸಂಕಲನದಲ್ಲಿ ಇಲ್ಲದಿದ್ದರೂ, ಈ ಎಲ್ಲ ಕಥೆಗಳ ಮೂಲಕ ಕಟ್ಟಿರುವ ಬದುಕಿನ ಬಿಂಬ ಈ ಶೀರ್ಷಿಕೆಗೆ ತಕ್ಕಂತೆ ಸೂಕ್ತ...
Ad Widget

ಕಲ್ಮಡ್ಕ : ವಾರ್ಷಿಕ ಕ್ರಿಯಾಯೋಜನೆ ಕುರಿತು ವಿಶೇಷ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಕಲ್ಮಡ್ಕ ಗ್ರಾಮ ಪಂಚಾಯತ್ ಸಹಭಾಗಿತ್ವ ವಾರ್ಷಿಕ ಕ್ರಿಯಾಯೋಜನೆ(GPDP) ತಯಾರಿಸುವ ಕುರಿತಾಗಿ ವಿಶೇಷ ಸಭೆಯನ್ನು ಮೇ. 13ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಿತು. ಸಹಭಾಗಿತ್ವ ವಾರ್ಷಿಕ(GPDP) ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ,...

ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಅಕ್ಷಯ ಬಾಬ್ಲುಬೆಟ್ಟು

ರೆನ್ಶಿ ಯೋಗ ಸಂಸ್ಥೆ ದುಬೈ ಯ.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ಚಿನ್ನದ ಪದಕ ಗಳಿಸಿರುತ್ತಾರೆ.ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೆಕಲ್ಲು ಸರಕಾರಿ...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಕರಾಟೆ ತರಬೇತಿ ಉದ್ಘಾಟನೆ ; ಚೆಸ್ ತರಬೇತಿ ಸಮಾರೋಪ, ದೇಶದ ಸೈನ್ಯದ ಯಶಸ್ಸಿಗೆ ಪ್ರಾರ್ಥನೆ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ನಡೆದ ಚೆಸ್ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಟ್ರಸ್ಟ್ ವತಿಯಿಂದ ನಡೆಯುವ ಕರಾಟೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಗುತ್ತಿಗಾರಿನ ಪ.ವರ್ಗದ ಸಭಾಭವನದಲ್ಲಿ ನಡೆಯಿತು. ಶ್ರೀಮತಿ ಮೀನಾಕ್ಷಿ ಉಮೇಶ್ ಮುಂಡೋಡಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಶ್ರೀಮತಿ ಪ್ರೀತಿ ನಿಶ್ಚಿತ್ ದೇವಶ್ಯ...

ಕೆವಿಜಿ ಕಾನೂನು ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಫುಟ್ಬಾಲ್ ಪಂದ್ಯಾಟ ಸಮಾರೋಪ ;  ಕ್ರೀಡೆ ನಮಗೆ ಬದುಕುವ ಕಲೆಯನ್ನು ತಿಳಿಸಿಕೊಡುತ್ತದೆ – ಪ್ರವೀಣ್ ಶೆಟ್ಟಿ

ಕರ್ನಾಟಕ ರಾಜ್ಯ ಕಾನೂನು ವಿವಿ ಮತ್ತು ಕೆವಿಜಿ ಕಾನೂನು ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಕೆವಿಜಿ ಕ್ರೀಡಾoಗಣ ದಲ್ಲಿ 2ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿ ಮಟ್ಟದ ಫುಟ್ಬಾಲ್ ಪಂದ್ಯಾಟ ಮುಕ್ತಾಯಗೊಂಡಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ...

ಪ್ರಮೋದ್ ಕುಮಾರ್ ರೈ ಬೆಳ್ಳಾರೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ...

ಸೇವಾಜೆ : ಸೇತುವೆ ಕಾಮಗಾರಿ ಮುಂದೂಡಿಕೆ – ಮಳೆಗಾಲದ ಬಳಿಕ ಕಾಮಗಾಗಿ ನಡೆಸಲು ತೀರ್ಮಾನ

ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇವಾಜೆ ಬಳಿ ಶಿಥಿಲಗೊಂಡಿದ್ದ ಸೇತುವೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರ ಶಿಪಾರಸ್ಸಿನಂತೆ ನೂತನ ಸೇತುವೆ ನಿರ್ಮಾಣದ ಕಾಮಗಾರಿ ಮೇ.15 ರಿಂದ ನಡೆಸುವುದೆಂದು ಈ ಹಿಂದೆ ತೀರ್ಮಾನವಾಗಿತ್ತು. ಇದೀಗ ಮಳೆ ಪ್ರಾರಂಭ ಹಿನ್ನೆಲೆ ಹಾಗೂ ಸಾರ್ವಜನಿಕರ ತೊಂದರೆಯಾಗುವುದನ್ನು ಪರಿಗಣಿಸಿ ಮಳೆಗಾಲ ಕಳೆದ ನಂತರ ಕಾಮಗಾರಿ ಮಾಡಲು ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಹಾಗೂ...

ರಾಜ್ಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಚಾರಣ ಶಿಬಿರದ ಸಮಾರೋಪ ಸಮಾರಂಭ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇವರುಗಳ ಸಹಭಾಗಿತ್ವದಲ್ಲಿ ನಡೆದ ರಾಜ್ಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಚಾರಣ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಾಧವ ಬಿ.ಕೆ...

ಮೇ18- ‘ಶ್ರೀ ಕೇಶವ ಸ್ಮೃತಿ’ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಮಾಪನ ಸಮಾರಂಭ

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ 25ನೇ ವರ್ಷದ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾರೋಪ ಸಮಾರಂಭ ಮತ್ತು ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.18ರಂದು ಅಪರಾಹ್ನ3ರಿಂದ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ...
Loading posts...

All posts loaded

No more posts

error: Content is protected !!