ಹರಿಹರ ಪಳ್ಳತ್ತಡ್ಕ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೃಹತ್ ಪಂಜಿನ ಮೆರವಣಿಗೆ

ಪಾಕಿಸ್ತಾನ ತನ್ನ ನರಿ ಬುದ್ಧಿ ಬಿಟ್ಟು ಬದುಕಲು ಕಲಿಯದೇ ಇದ್ದರೆ ಏಟು ತಿನ್ನಲು ತಯಾರಾಗಬೇಕಾದೀತು : ಪದ್ಮಕುಮಾರ್ ಗುಂಡಡ್ಕ ಪಾಕಿಸ್ತಾನ ಮತ್ತೆ ಭಾರತವನ್ನು ಕೆಣಕುವ ದುಸ್ಸಾಹಸಕ್ಕೆ ಕೈಹಾಕಿ ತಪ್ಪು ಮಾಡಿದೆ : ಕುಸುಮಾಧರ ಎ.ಟಿ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ ಪಳ್ಳತ್ತಡ್ಕ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು...

ಗುತ್ತಿಗಾರು : ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಚಂದ್ರಾವತಿ ಕೆ ನಿವೃತ್ತಿ – ಬೀಳ್ಕೊಡುಗೆ

ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಚಂದ್ರಾವತಿ ಕೆ ಇವರು ಸುದೀರ್ಘ 36 ವರ್ಷ 10 ತಿಂಗಳು ಸೇವೆ ಸಲ್ಲಿಸಿ ಏಪ್ರಿಲ್ 30 ರಂದು ನಿವೃತ್ತಿ ಹೊಂದಿದ್ದು, ಬೀಳ್ಕೊಡುಗೆ ಸಮಾರಂಭ ನಡೆಯಿತು. ಗುತ್ತಿಗಾರು ಆರೋಗ್ಯ ಕೇಂದ್ರದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಡಾ. ತ್ರಿಮೂರ್ತಿ (ತಾಲೂಕು ಆರೋಗ್ಯಾಧಿಕಾರಿ) ವಹಿಸಿದ್ದರು. ವೇದಿಕೆಯಲ್ಲಿ...
Ad Widget

ಕರಿಮಣಿ ತಾಳಿ ಬಿದ್ದು ಹೋಗಿರುತ್ತದೆ

ಸುಳ್ಯದ ಕಟ್ಟೆಕಾರ್ ಹಾಗೂ ಕೆರೆಮೂಲೆ ರಸ್ತೆಯ ಆಸುಪಾಸಿನಲ್ಲಿ ಕರಿಮಣಿ ತಾಳಿ ಸರ ಬಿದ್ದು ಹೋಗಿರುತ್ತದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಲು ಮನವಿ ಮಾಡಿದ್ದಾರೆ. ಈ ನಂಬರ್ ಗೆ ಕರೆ ಮಾಡಿ 9632489204

ತೊಡಿಕಾನ ಮನೆಗೆ ತೆಂಗಿನ ಮರ ಬಿದ್ದು ಹಾನಿ

ತೊಡಿಕಾನ ಗ್ರಾಮದ ಬೊಳ್ಳೂರು ಪದ್ಮಯ್ಯ ರವರ ಮನೆಗೆ ಎ.29 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದ ಘಟನೆ ನಡೆದಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಪಕಾಸು ಹಾಗೂ ಹಂಚಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಗುತ್ತಿಗಾರಿನಲ್ಲಿ ಮೆ.05 ರಿಂದ ಚೆಸ್ ತರಬೇತಿ ಕಾರ್ಯಾಗಾರ ಆರಂಭ

ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಲವಲವಿಕೆ ಮತ್ತು ಚುರುಕುತನದ ಯಶಸ್ಸಿ, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪ್ರಯತ್ನದ ಕಲ್ಪನಯೊಂದಿಗೆ "ಚೆಸ್"ತರಬೇತಿಯನ್ನು ಚೆಸ್ ನುರಿತ ಶಿಕ್ಷಕರಿಂದ ಗುತ್ತಿಗಾರಿನ ಗ್ರಾಮ ಪಂಚಾಯತ್ ನ ಪ. ವರ್ಗದ ಸಭಾ ಭವನದಲ್ಲಿ ಮೆ. 5 ರಿಂದ ಪ್ರಾರಂಭವಾಗಲಿದೆ. ಬೆಳಿಗ್ಗೆ 9ರಿಂದ ಮದ್ಯಾಹ್ನ 1ರವರೆಗೆ ತರಬೇತಿ...

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ ಪ್ರಾಕೃತ ಸರ್ಟಿಫಿಕೇಟ್ ಮತ್ತು ಡಿಪ್ಲೋಮ ಕೋರ್ಸ್ ನ್ನು ಇತಿಹಾಸ ವಿಭಾಗದ ಮುಖ್ಯಸ್ಥರು ಡಾ ಪ್ರಸಾದ. ಎನ್ ಹಾಗೂ ಇತಿಹಾಸ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷವೂ ನಡೆಸಲಾಗುತ್ತದೆ. ಈ ಕೋರ್ಸಿಗೆ...

ಹರಿಹರ ಪಳ್ಳತ್ತಡ್ಕ : ಇಂದು(ಏ.30) ಸಂಜೆ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರಿಂದ ಹಿಂದೂ ಪರಿವಾರ ಸಂಘಟನೆಗಳು ಹರಿಹರ ಪಳ್ಳತ್ತಡ್ಕ ಇದರ ನೇತೃತ್ವದಲ್ಲಿ ಸಂಜೆ 6:00 ಗಂಟೆಗೆ ಹರಿಹರ ಪಳ್ಳತ್ತಡ್ಕದ ಮುಖ್ಯ ಪೇಟೆಯಲ್ಲಿ “ಬೃಹತ್ ಪಂಜಿನ ಮೆರವಣಿಗೆ ಹಾಗೂ ಶ್ರದ್ದಾಂಜಲಿ ಸಭೆ” ನಡೆಯಲಿದ್ದು, ಪಂಜಿನ...

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಬರ್ಬರ ಹತ್ಯೆ ಖಂಡನೀಯ. ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯ. ಜಾನಿ ಕೆ.ಪಿ.

ಮಂಗಳೂರಿನ ಕುಡುಪು ಬಳಿ ಯುವ ವಲಸೆ ಕಾರ್ಮಿಕನೊಬ್ಬನನ್ನು ಸುಮಾರು ಮೂವತ್ತು ಜನ ಯುವಕರ ತಂಡವೊಂದು ಅತ್ಯಂತ ಬರ್ಬರವಾಗಿ ಕಲ್ಲಿನಿಂದ ಜಜ್ಜಿ ಕೊಲೆಗೈದಿರುವುದು ಅತ್ಯಂತ ಖಂಡನೀಯ ಮತ್ತು ಜಿಲ್ಲೆಯ ಜನತೆ ಆತಂಕ ಪಡಬೇಕಾದ ವಿಷಯ .ಇದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ ಘಟನೆ .ಎಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರಾದ...

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಸಮಿತಿಯ ಸದಸ್ಯ ಕಾರ್ಯದರ್ಶಿ ರಾಜಣ್ಣ ಕಾರ್ಯಕಲಾಪ ನಡೆಸಿಕೊಟ್ಟರು.ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿಯ ಪ್ರಗತಿಯಬಗ್ಗೆ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಸ್ನಾತಕೋತರ ವಿಭಾಗದಲ್ಲಿ ರಾಜೀವ್ ಗಾಂಧಿ  ವಿಶ್ವವಿದ್ಯಾಲಯದಿಂದ ಮೂರು ರ‌್ಯಾಂಕ್

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರ‌್ಯಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ...
Loading posts...

All posts loaded

No more posts

error: Content is protected !!