ಅಂತರಾಷ್ಟ್ರೀಯ ಜಾದೂ ಮಾಸ್ಟರ್ ಜೂನಿಯರ್ ಶಂಕರ್ ಇಂದು ಪಂಜಕ್ಕೆ

ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ನಡೆಯುತ್ತಿರುವ  ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಜಾದುಗಾರ ಜೂನಿಯರ್ ಶಂಕರ್ ಆಗಮಿಸಿ ಮಕ್ಕಳಿಗೆ ಜಾದು ವಿಸ್ಮಯ ಲೋಕದ ಪರಿಚಯವನ್ನ ಮಾಡಿಕೊಡಲಿದ್ದಾರೆ.ಪ್ರತಿಭಾನ್ವಿತ ಕಲಾವಿದೆಯಾಗಿರುವ ಗುರುಪ್ರಿಯ ಕಾಮತ್ ನಾಳೆಯ ಶಿಬಿರದಲ್ಲಿ ಭಾಗವಹಿಸುವ ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿದ್ದು...

ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಇಂಪಾರ್ಟಂಟ್ ಎಫ್‌ಸಿ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ

ಇಂಪಾರ್ಟಂಟ್ ಎಫ್‌ಸಿ ಗುತ್ತಿಗಾರು ವತಿಯಿಂದ ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಮುಖ ಅತಿಥಿಯಾಗಿ ಆಗಮಿಸಿದ್ದ ಎಬಿವಿಪಿ ಸುಳ್ಯ ತಾಲ್ಲೂಕು ಸಂಚಾಲಕ ನಂದನ್ ಪವಿತ್ರಮಜಲು ಸ್ವಚ್ಛತೆ ಕಾರ್ಯದ ಸನ್ನಿವೇಶವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸ್ವಚ್ಛತೆಯ ಮಹತ್ವ ಮತ್ತು ಯುವಜನತೆಯ ಪಾತ್ರದ ಬಗ್ಗೆ ಪ್ರಭಾವಿ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಇಂಪಾರ್ಟಂಟ್ ಎಫ್‌ಸಿ ಕಾರ್ಯದರ್ಶಿ ಕಿರಣ್ ವಳಲಂಬೆ...
Ad Widget

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – ಅಂಬೇಡ್ಕರ್ ಇಲ್ಲದ ದೇಶವನ್ನು ಊಹಿಸಲು ಅಸಾಧ್ಯ – ಪ್ರೊ ಶಿವಾನಂದ ಜಿ.

ಭಾರತ ದೇಶಕ್ಕೆ ಸಂವಿಧಾನ ನೀಡಿ ದೇಶದ ಸಮಗ್ರ ಜನರ ಏಳಿಗೆಗೆ ಕಾರಣರಾದ ಡಾ ಭೀಮರಾವ್ ಅಂಬೇಡ್ಕರ್ ಸಮಾಜದ ಎಲ್ಲಾ ವರ್ಗದ ಜನರಿಗೆ ಪೂಜನೀಯರು. ಅವರನ್ನು ಕೆಲವೊಂದು ಸಮಾಜಕ್ಕೆ ಸೀಮಿತಗೊಳಿಸುವುದು ದುರಾದೃಷ್ಟ ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯಬೇಕು. ಅಂಬೇಡ್ಕರ್ ಇಲ್ಲದ ಸಮಾಜವನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಇತಿಹಾಸ...

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ.

135ನೇ ಜಯಂತಿ ನೂತನ ಅಂಬೇಡ್ಕರ್ ಭವನದಲ್ಲಿ ಆಗುವಂತಾಗಲಿ - ಶಾಸಕಿ ಮುರುಳ್ಯ. ಸುಳ್ಯ : ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಸೋಮವಾರ ಬಂಟರ ಭವನದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಭೆಯ ಅಧ್ಯಕ್ಷತೆಯನ್ನು...

ಗುತ್ತಿಗಾರು : ವಿದ್ಯುತ್ ಕಂಬಕ್ಕೆ ಗುದ್ದಿ ಬೊಲೆರೊ ಪಲ್ಟಿ

ಗುತ್ತಿಗಾರಿನ ಕಡ್ತಲ್ ಕಜೆ ಸಮೀಪ ಓವರ್ ಟೇಕ್ ಮಾಡಿ ಬರುತ್ತಿರುವ ಬಸ್ ಗೆ ಸೈಡ್ ಕೊಡುವ ಭರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ಐನೆಕಿದು ಕಡೆಯ ಬೊಲೆರೋ ಸುಳ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುತ್ತಿತ್ತು. ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಉಬರಡ್ಕ : ಮರ ಬಿದ್ದು ರಸ್ತೆ ಬಂದ್ – ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಇಂದು ಸಂಜೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತಾಲೂಕಿನ ವಿವಿಧೆಡೆ ಮರ ಬಿದ್ದು ಹಾನಿಯಾಗಿದೆ. ಉಬರಡ್ಕ ಕಂದಡ್ಕ ರಸ್ತೆಯಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಸ್ಥಳೀಯರ ಸಹಕಾರದಿಂದ ಮೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯ ಆರಂಭಿಸಿದ್ದಾರೆ.

ಸುಳ್ಯ : ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಡಾ| ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ  ಶಾಸಕರಾದ ಭಾಗೀರಥಿ ಮುರುಳ್ಯ,, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ...

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ನಾರ್ಣಕಜೆಯಲ್ಲಿ ಅಂಚೆ ಜನಸಂಪರ್ಕ ಕಾರ್ಯಕ್ರಮ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯಇದರ ಆಶ್ರಯದಲ್ಲಿಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ಸಹಕಾರದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂಅಪಘಾತ ವಿಮೆ ನೊಂದಣಿ ಶಿಬಿರ ಏಪ್ರಿಲ್ 13 ರಂದು ನಾರ್ಣಕಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ...

ಎ.14; ಅಂಬೆಡ್ಕರ್ ಜಯಂತಿ ಅಂಗವಾಗಿ ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ

ರೋಟರಿ ಕ್ಲಬ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸುಳ್ಯ ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್‌ವೀಲ್ ಕ್ಲಬ್ ಸುಳ್ಯ ಎನ್.ಎಸ್.ಎಸ್., ಎನ್.ಎಂ.ಸಿ. ಸುಳ್ಯ ರೋಟರ್ಯಾಕ್ಟ್ ಕ್ಲಬ್ ಆಫ್ ಸುಳ್ಯ ಯುನೈಟೆಡ್ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್, ಪುತ್ತೂರು ಯುವಜನ ಸಂಯುಕ್ತ ಮಂಡಳಿ, ಸುಳ್ಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಪುತ್ತೂರು ಇದರ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಮಯೂರಿ ಎಂ ಜಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Loading posts...

All posts loaded

No more posts

error: Content is protected !!