50 ಸಂಭ್ರಮಾಚರಣೆಯಲ್ಲಿ ‘ಭಾವ ತೀರ ಯಾನ’

ಸಿನಿಮಾ ನಮ್ಮನ್ನು ಹೊಸ ಜಗತ್ತಿಗೆ ಕರೆದೊಯ್ಯುವ, ಮನರಂಜನೆಯನ್ನು ಕೊಡುವ ಅಥವಾ ನಾವು ಟಾಕೀಸ್‌ಲ್ಲಿ ಕುಳಿತು ವೀಕ್ಷಿಸುವ, ದೂರದರ್ಶನದಲ್ಲಿ ವೀಕ್ಷಿಸುವ ಚಿತ್ರ ಅಂತ ಅಂದುಕೊಂಡಿದ್ದೇವೆ. ಆದರೆ ಸಿನಿಮಾ ಕೂಡ ಒಂದು ರೀತಿಯಲ್ಲಿ ನಮಗೆ ಶಿಕ್ಷಣ ಮಾಧ್ಯಮವಾಗಿದೆ ಎಂದರೆ ತಪ್ಪಾಗಲಾರದು. ಸಿನಿಮಾದಲ್ಲಿ ನಾವು ಕಾಣದ ದೇಶಗಳನ್ನು, ಅಲ್ಲಿಯ ವೈಶಿಷ್ಟ್ಯಗಳನ್ನು, ಅವರ ಸಂಸ್ಕೃತಿ -ಸಂಪ್ರದಾಯ, ಆಚಾರ-ವಿಚಾರಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ, ಅಂತೆಯೇ...

ಬಿಜೆಪಿಯ ಜನಾಕ್ರೋಶ ಯಾತ್ರೆ. ಸುಳ್ಳನ್ನು ಬಿತ್ತುವ ಕುತಂತ್ರದ ಭಾಗವಾಗಿದೆ- ಕೆ.ಪಿ.ಜಾನಿ

ಬೆಲೆಯೇರಿಕೆಯ ವಿರುದ್ದ ಮಾತನಾಡಲು ಒಂದು ಶೇಕಡವೂ ನೈತಿಕತೆ ಉಳಿಸಿಕೊಳ್ಳದ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಆಸನ್ನವಾಗಿರುವ ಚುನಾವಣೆಗಳಲ್ಲಿ ಜನರಿಂದ ಎದುರಿಸಬೇಕಾದ ನಿಜವಾದ ಜನಾಕ್ರೋಶಕ್ಕೆ ಹೆದರಿ ಸತ್ಯ ಮುಚ್ಚಿಡಲು ಮಾಡುತ್ತಿರುವ ಕುತಂತ್ರದ ಭಾಗವಾಗಿದೆ. ಜನ ಪ್ರಭುದ್ಧರಿದ್ದು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.ಬೆಲೆಯೇರಿಕೆ ಮೂಲಕಾರಣವಾದ ಡೀಸೆಲ್ ಪೆಟ್ರೋಲ್ ಮತ್ತು ಅಡುಗೆ ಅನಿಲದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕಡಿಮೆಯಾದಾಗಲೂ ತಮ್ಮ...
Ad Widget

ಮಂಡೆಕೋಲು : ಶಾಸಕಿ ಭಾಗೀರಥಿ ಮುರುಳ್ಯರಿಂದ ಸಂಜೀವಿನಿ ಕಟ್ಟಡ ಲೋಕಾರ್ಪಣೆ

ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡಿರುವ ಸಂಜೀವಿನಿ ಕಟ್ಟಡವನ್ನು ಏ.10 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು. ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು “ಸಂಜೀವಿನಿ ಸಂಘ ಅನ್ನುವಂತಹದ್ದು ಮಹಿಳೆಯರ ಧ್ಯೇಯೋದ್ದೇಶಕ್ಕಾಗಿ ಇರುವಂತಹದ್ದು, ಮುಂದಿನ ದಿನಗಳಲ್ಲಿ ಮಂಡೆಕೋಲು ಸಂಜೀವಿನಿ ಸಂಘವು ಒಳ್ಳೆಯ ಕೆಲಸಗಳನ್ನು ಮಾಡಿ ಪ್ರಧಾನಿ ಮೋದಿಯವರು ತಮ್ಮ ಮನ್-ಕಿ-ಬಾತ್...

ಡಾ. ಲೀಲಾಧರ್ ಡಿ. ವಿ. ಯವರಿಗೆ ಶಾರದಾಂಬಾ ಸೇವಾ ಸಮಿತಿಯ ವತಿಯಿಂದ ಅಭಿನಂದನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಯವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ನೇಮಕಾವಾದ ಹಿನ್ನೆಲೆಯಲ್ಲಿ ಏ.10 ರಂದು ಸುಳ್ಯ ಶ್ರೀ ಸಾರ್ವಜನಿಕ ಶಾರದಾಂಬ ಸೇವಾ ಸಮಿತಿಯ...

ಕಲ್ಮಕಾರು : ವಿಷ ಸೇವಿಸಿ ಆತ್ಮಹತ್ಯೆ

ಕಲ್ಮಕಾರು ಗ್ರಾಮದ ತಿರುಮಲೇಶ್ವರ ದಬ್ಬಡ್ಕ ಎಂಬುವವರು ವಿಷ ಸೇವಿಸಿ ಮೃತಪಟ್ಟ ಘಟನೆ ಏ.10 ರಂದು ನಡೆದಿದೆ ಎಂದು ತಿಳಿದುಬಂದಿದೆ. ಕೃಷಿಗಾಗಿ ತಂದಿದ್ದ ಕ್ರಿಮಿನಾಶಕವನ್ನು ಎರಡು ದಿನಗಳ ಹಿಂದೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಿರುಮಲೇಶ್ವರ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿಧನರಾದರು. ಮೃತರಿಗೆ 52 ವರ್ಷ...

ನಾಳೆ (ಏ.11) ಕೊಲ್ಲಮೊಗ್ರು- ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ಫಲಿತಾಂಶ ಘೋಷಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲಿತಾಂಶವು ನಾಳೆ(ಏ.11) ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.ಜ.19 ರಂದು ಸೊಸೈಟಿ ನೂತನ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿತ್ತು.ಇದೀಗ ಹೈಕೋರ್ಟ್ ಆದೇಶದಂತೆ ಡಿ.ಆರ್ ರವರು ಫಲಿತಾಂಶ ಘೋಷಣೆ ನಿಗದಿಪಡಿಸಿ ನೋಟೀಸ್ ಕಳಿಸಿರುವುದಾಗಿ ತಿಳಿದುಬಂದಿದೆ.

ಸುಳ್ಯ : ಏ.12 ರಂದು ಕೇಂದ್ರ ಸರಕಾರದ ವಿರುದ್ಧ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್-ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಬೆಲೆ ಏರಿಕೆ ವಿರುದ್ಧ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಏ.12 ರಂದು ಸಂಜೆ 4:00 ಗಂಟೆಗೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ...

ಸುಳ್ಯ ಪ್ರೆಸ್ ಕ್ಲಬ್ ಮಹಾಸಭೆ – ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರ.ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಈಶ್ವರ ವಾರಣಾಸಿ ಆಯ್ಕೆ

ಸುಳ್ಯ ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ‌ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಉಪಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಹಸೈನಾರ್...

ಮಂಗಳೂರು ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ – ಏ.12 ಕ್ಕೆ ಕೇಂದ್ರ ಸಚಿವರು ಮತ್ತು ಸಂಸದರಿಂದ ಚಾಲನೆ

ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿಯೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಯಾತ್ರಾರ್ಥಿಕರು ಅಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ರು,ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...

ಉಚಿತ ವೇದ-ಯೋಗ-ಕಲಾ ಶಿಕ್ಷಣದೊಂದಿಗೆ ‘ಅಂತರ್ ರಾಜ್ಯ ಮಟ್ಟದಲ್ಲಿ ಮಿಂಚುತ್ತಿರುವ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ (ರಿ.) ದ 35 ದಿನಗಳ ಬೇಸಿಗೆ ಶಿಬಿರ.

ಪುಟ್ಟ ಪುಟ್ಟ ಪುಟಾಣಿಗಳ ತೊದಲು ನುಡಿಗಳಲ್ಲಿ ವೇದಘೋಷಗಳು ಝೇಂಕರಿಸುವ ಮೂಲಕ ಸರಿಸುಮಾರು ಒಂದು ತಿಂಗಳ ಪರ್ಯಂತ ಇಲ್ಲಿನ ಪರಿಸರ ಪಾವನಗೊಳ್ಳುತ್ತದೆ. ಜೊತೆ ಜೊತೆಗೇ ಭಿನ್ನ ಭಿನ್ನ ಕಲಾಪ್ರಕಾರಗಳು ಅರಳಿ ಮೇಳೈಸಿ ಕಣ್ಸೆಳೆಯುತ್ತವೆ. ಯೋಗದ ಹಲವು ಆಸನಗಳನ್ನು ಅಳವಡಿಸಿಕೊಂಡ ಪುಟಾಣಿ ಯೋಗಪಟುಗಳು ದೇಹ ಮನಸ್ಸುಗಳನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳುವತ್ತ ಮನಮಾಡುತ್ತಾರೆ. ಹೌದು ಇಂತಹದ್ದೊoದು ಅಭೂತಪೂರ್ವ ದೃಶ್ಯಾವಳಿಗಳು ಕಂಡು ಬರುವುದು...
Loading posts...

All posts loaded

No more posts

error: Content is protected !!