ಏ. 4: ಮೂಲೆಮಜಲು ದೋಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮ

ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮ ಬೈದರ್ಕಳ ನೇಮ ಏ.4 ಶುಕ್ರವಾರದಂದು ನಡೆಯಲಿದೆ. ಆ ದಿನ ಬೆಳಿಗ್ಗೆ 6.00ಕ್ಕೆ ಕೊಡಮಂತಾಯ ದೈವಕ್ಕೆ ನೇಮ, ಪೂ. 10.00ಕ್ಕೆ ಬ್ರಹ್ಮರ ಉತ್ಸವ,ಸಂಜೆ 4.00ಕ್ಕೆ ಬೈದರ್ಕಳ ಭಂಡಾರ ತೆಗೆಯುವುದು,ಸಂಜೆ 7.30ಕ್ಕೆ ಭಜನಾ ಕಾರ್ಯಕ್ರಮ,ರಾತ್ರಿ 9.00ಕ್ಕೆ ಅನ್ನ ಸಂತರ್ಪಣೆ,ರಾತ್ರಿ 10.00ಕ್ಕೆ ಬ್ರಹ್ಮ ಬೈದರ್ಕಳ...

ಮಾ.31 ; ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಿ. ಸೇವಾ ನಿವೃತ್ತಿ

ಪ್ರಸ್ತುತ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವಂತಹ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ಸೇವಾ ನಿವೃತ್ತಿ ಹೊಂದುತ್ತಿದ್ದು, ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಕಡ್ಯ ತರವಾಡು ರಾಘವ ರೇಂಜರ್ ಎಂದೇ ಖ್ಯಾತಿ ಹೊಂದಿದ್ದ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಳಿಕಳ ಶ್ರೀ ರಾಘವ ಗೌಡ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರರಾಗಿ 23...
Ad Widget

41ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.31ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 41 ನೇ ದಿನಕ್ಕೆ ಕಾಲಿರಿಸಿದೆ. ಮಾ.31ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯೋಗದಲ್ಲಿ ಅತೀ ಹೆಚ್ಚು ದಾಖಲೆ ಮಾಡಿ ಭಾರತ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಗೌರಿತಾ

1ಗಂಟೆ 10 ನಿಮಿಷ ಪದ್ಮಾಸನದಲ್ಲಿ ಇರುವ ಮೂಲಕ ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್, ಒಂದು ಗಂಟೆ 10 ನಿಮಿಷ 32 ಸೆಕೆಂಡುಗಳ ಕಾಲ ಪದ್ಮಾಸನದಲ್ಲಿ ಇರುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, 45 ನಿಮಿಷ 15 ಸೆಕೆಂಡು ಬದ್ಧಕೋನಾಸನದಲ್ಲಿ ಇರುವ ಮೂಲಕ ಕಲಾಂಸ್ ವರ್ಲ್ಡ್ ರೆಕಾರ್ಡ್ಸ್, 54 ನಿಮಿಷ 38 ಸೆಕೆಂಡು ಸೂಪ್ತವೀರಾಸನದಲ್ಲಿ ಇರುವ...

ಸುಳ್ಯ : ಮಹಿಳೆಗೆ ಹಲ್ಲೆ ಪ್ರಕರಣ – ನ.ಪಂ.ಸದಸ್ಯ ಶರೀಫ್ ಕಂಠಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮಿನು

ಸುಳ್ಯದಲ್ಲಿ ಸಂಚಲನ ಮೂಡಿಸಿದ್ದ ಮಹಿಳೆಗೆ ಹಲ್ಲೆ ಪ್ರಕರಣಲ್ಲಿ ಅರೋಪಿಯಾಗಿರುವ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮೀನು ನ್ಯಾಯಾಲಯ ಮಂಜೂರು ಮಾಡಿದೆ.ಶರೀಫ್ ಕಂಠಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಅತೀ ತುರ್ತಾಗಿ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆಗೆ ತೆಗೆದುಕೊಂಡ 5 ನೇ ಹೆಚ್ಚುವರಿ ನ್ಯಾಯಾಲಯವು...

ಮಡಪ್ಪಾಡಿ : ಮನೆ ಮೇಲೆ ಉರುಳಿದ ಸ್ಕಾರ್ಪಿಯೊ- ಅಪಾಯದಿಂದ ಪಾರು

ಮಡಪ್ಪಾಡಿ ಗುತ್ತಿಗಾರು ರಸ್ತೆಯ ಚಿರೆಕಲ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೊ ರವಿ ಎಂಬವರ  ಮನೆಯ ಮೇಲೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಸ್ಕಾರ್ಪಿಯೋ ನಿತ್ಯಾನಂದ ಮುಂಡೋಡಿ ಯವರದ್ದು ಎಂದು ತಿಳಿದುಬಂದಿದೆ. ವಾಹನದಲ್ಲಿದ್ದವರು ಹಾಗೂ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣದ ಅನಾವರಣ, ಜೇನು ಪೆಟ್ಟಿಗೆ ನಿರ್ವಹಣಾ ಸೇವೆಯ ಲೋಕಾರ್ಪಣೆ ಮತ್ತು ಜೇನು ಕೃಷಿಕರ ಸಮ್ಮಿಲನ

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣದ ಅನಾವರಣ, ಕೃಷಿಕರಿಗಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆಯ ಲೋಕಾರ್ಪಣೆ ಮತ್ತು ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ಜಿ. ಎಲ್. ರೋಟರಿ ಸಭಾಭವನದಲ್ಲಿ ಮಾ.29 ರಂದು ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಅಶೋಕ ಕುಮಾರ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜೇನು ಕೃಷಿಯ ಸಾಧಕರನ್ನು...

ಮಹಿಳೆಗೆ ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಸಂಘಟನೆಯವರಿಂದ ವೃತ್ತ ನಿರೀಕ್ಷರಿಗೆ ಮನವಿ: ಮಾ.30 ರ ಒಳಗೆ ಬಂಧಿಸದಿದ್ದರೇ ಠಾಣೆಯ ಎದುರು ಪ್ರತಿಭಟನೆಯ ಎಚ್ಚರಿಕೆ

ಸುಳ್ಯದ ನಾವೂರಿನ ಶ್ರೀಮತಿ ಚಂದ್ರಿಕಾ ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಯವರ ಮೇಲೆ ಮಾ.26 ರಂದು ಎಫ್.ಐ.ಆರ್ ದಾಖಲಾಗಿದ್ದು ಈ ತನಕ ಬಂಧಿಸದೇ ಇರುವುದನ್ನು ಖಂಡಿಸಿ ಶೀಘ್ರವಾಗಿ ಆತನನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಯವರು ಸುಳ್ಯದ ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಿದರು. ಮಾ.30...

ಸುಳ್ಯ ನ.ಪಂ. ಸದಸ್ಯ ಶರೀಫ್ ಕಂಠಿ ಯವರ ಮೇಲೆ ಸುಳ್ಳು ಆರೋಪ – ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ. ಖಂಡನೆ

ಸುಳ್ಯ ನಗರ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಶರೀಫ್ ಕಂಠಿಯವರ ಮೇಲೆ ಮಹಿಳೆಯ ಮೇಲೆ ಹಲ್ಲೆ ಎಂಬ ಸುಳ್ಳು ಆರೋಪವನ್ನು ಹೊರಿಸಿ ದೂರು ಕೊಟ್ಟಿರುವುದು ಖಂಡನೀಯ. ನಗರ ಪಂಚಾಯತ್ ಸದಸ್ಯನಾಗಿ ತಮ್ಮ ವಾರ್ಡಿನಲ್ಲಿ ಜಾತ್ಯತೀತವಾಗಿ ಅಬಿವೃದ್ದಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಒಬ್ಬ ಜನಪ್ರತಿನಿಧಿಯಾಗಿರುವ ಇವರ ಮೇಲೆ ಈ ರೀತಿಯ ಸುಳ್ಳು ಆರೋಪ ಮಾಡಿದ್ದು ಈ ಬಗ್ಗೆ...

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಅಜಿತ್ ರಾವ್ ಕಿಲಂಗೋಡಿ, ಉಪಾಧ್ಯಕ್ಷರಾಗಿ ಹರ್ಷ ಜೋಗಿಬೆಟ್ಟು

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ 3ನೇ ಅವಧಿಗೆ ನಿರ್ದೇಶಕರಾಗಿ ಆಯ್ಕೆಯಾದ ಅಜಿತ್ ರಾವ್ ಕಿಲಂಗೋಡಿ ಅಧ್ಯಕ್ಷರಾಗಿಯೂ, ಹರ್ಷ ಜೋಗಿಬೆಟ್ಟು ಉಪಾಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆ. 7ರಂದು ಚುನಾವಣೆ ನಡೆದಿದ್ದರೂ, ಕಾಂಗ್ರೆಸ್ ಕಡೆಯಿಂದ 200 ಮತ್ತು ಬಿಜೆಪಿ ಕಡೆಯಿಂದ 266 ಸದಸ್ಯರು ಕೋರ್ಟ್ ಮೂಲಕ ಮತದಾನದ ಹಕ್ಕನ್ನು ಪಡೆದುಕೊಂಡು ಬಂದು ಮತ ಚಲಾಯಿಸಿದ್ದರಿಂದ ವಿಜೇತ ಅಭ್ಯರ್ಥಿಗಳ...
Loading posts...

All posts loaded

No more posts

error: Content is protected !!