- Saturday
- July 11th, 2026
ಸುಳ್ಯದ ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ ದಲ್ಲಿ ಮಾ.17 ರಂದು ಸೌಹಾರ್ದ ಇಫ್ತಾರ್ ಮೀಟ್ ನಡೆಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸುಳ್ಯ ನಗರ ಯೋಜನಾ ಸಮಿತಿ ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆಎಂಎಸ್...
ನವೋದಯ ಮತ್ತು ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕಳೆದ 18 ವರ್ಷಗಳಿಂದ ತರಬೇತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಬೇಸಿಗೆ ರಜೆಯ ನವೋದಯ ತರಬೇತಿ ಶಿಬಿರ ಏ.15 ರಿಂದ ಮೇ. 15ರವರೆಗೆ ನಡೆಯಲಿದೆ. ಒಂದು ತಿಂಗಳು ನಡೆಯುವ ಈ ತರಬೇತಿ ಶಿಬಿರದಲ್ಲಿ 4 ಅಥವಾ 5ನೇ ತರಗತಿಯಲ್ಲಿ ಓದುತ್ತಿರುವ...
ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡರವರು ಪಂಚಾಯತ್ ಅಧ್ಯಕ್ಷೆ ನಮಿತಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್...
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಲಿದ್ದು, ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಉಷಾ ಜಯರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃಷಿ ಮಾಹಿತಿ...
ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ. ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು ರಾತ್ರಿ ಬೆಂಗಳೂರಿಗೆ ವಿಮಾನ ಮೂಲಕ ಮೃತ ದೇಹ ತಲುಪಲಿದ್ದು,ನಾಳೆ (ಮಾ. 18) ರಂದು ಹುಟ್ಟೂರಿಗೆ ಮೃತ ದೇಹ ಬರಲಿದೆ. ಈಜಿಪ್ಟ್...
ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ. 16ರಂದು ಐನೆಕಿದು ಗ್ರಾಮದ ಗುಂಡಡ್ಕ ಬಳಿ ನಡೆದಿದೆ. ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಎಂಬವರು ಮೃತಪಟ್ಟ ವ್ಯಕ್ತಿ. ಜಗದೀಶರವರು ಸಂಜೆ ವೇಳೆ ಗುಂಡಡ್ಕ ಬಳಿ ಮೀನು ಹಿಡಿಯಲು ಹೊಳೆಗೆ ತೆರಳಿದ್ದಾಗ ನೀರಲ್ಲಿ ಮುಳುಗಿದ್ದು, ಅವರೊಂದಿಗಿದ್ದ ಮಕ್ಕಳು ಮನೆಯವರಿಗೆ ಬಂದು ಅಪ್ಪ ನೀರಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಸಮಾರಂಭ ದಲ್ಲಿ ಅಧಿಕಾರ ಸ್ವೀಕರಿಸಿದರುಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ದೇವಚಳ್ಳ ಗ್ರಾಮದ ಭಾವಮಿತ್ರ ದೇವರವರಿಗೆ ವೀಲ್ ಚಯರ್ ಹಾಗೂ ದೇವ ರಾಟೆ ಗೌರಮ್ಮ ಮತ್ತು ಮಡಪ್ಪಾಡಿ ಗ್ರಾಮದ ಸೀತಮ್ಮ ಕಾಯರ ರವರಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಗುತ್ತಿಗಾರು ವಲಯದ ಅಧ್ಯಕ್ಷರಾದ ಯೋಗೀಶ್ ದೇವ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಮಡಪ್ಪಾಡಿ...
ಅರ್ನಾಡಿಯಲ್ಲಿರುವ ಶಶಾಂಕ್ ರೈಸ್ ಮಿಲ್ ಮಾಲಕ ಅರ್ನಾಡಿ ಸದಾನಂದ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ರೈಸ್ ಮಿಲ್ ನಡೆಸುತ್ತಾ ಬಂದಿರುವ ಅವರು ಇತ್ತೀಚೆಗೆ ಬೆಂಗಳೂರಿನ ಮಗನ ಮನೆಯಲ್ಲಿ ನೆಲೆಸಿದ್ದರು. ಮೃತರು ಪತ್ನಿ ಶಂಕರಿ, ಪುತ್ರ ಶಶಾಂಕ್, ಪುತ್ರಿ ಪ್ರಿಯಾಂಕ, ಸೊಸೆ, ಅಳಿಯ,...
Loading posts...
All posts loaded
No more posts
