- Saturday
- July 11th, 2026
ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು...
ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್ ಕಲ್ಮಡ್ಕ ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಆಡಳಿತ ಸಮಿತಿಯ ಆಡಳಿತ ಹಸ್ತಾಂತರ ಪ್ರಕ್ರಿಯೆಯು ಮಾ.6 ರಂದು ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಅವರಿಗೆ ಲೆಕ್ಕಪತ್ರಗಳನ್ನು ನೀಡುವ ಮೂಲಕ ಗುತ್ತಿಗಾರು ಪಿಡಿಒರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸನತ್ ಮುಳುಗಾಡು, ಜಯಾನಂದ ಪಟ್ಟೆ, ಪುರುಷೋತ್ತಮ ಬದಿಯಡ್ಕ, ಉಷಾ ಮಲ್ಕಜೆ ಉಪಸ್ಥಿತರಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿರುವುದನ್ನು ನಾವು ಸ್ವಾಗತಿಸುತ್ತೇವೆ, ಸರಕಾರವನ್ನು ಅಭಿನಂದಿಸುತ್ತೇವೆ ಎಂದು ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಅಶೋಕ್ ಎಡಮಲೆ ತಿಳಿಸಿದರು. ಮಾ.7ರಂದು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು...
ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಲ್ಲಲ್ಲಿ ಅನಧಿಕೃತವಾಗಿ ಹಣ್ಣಿನ ಅಂಗಡಿಗಳನ್ನು ಮತ್ತು ಇತರೆ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ.ಗ್ರಾಹಕರು ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಳ್ಳುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ರಸ್ತೆಯಲ್ಲಿನ ವಾಹನ ನಿಲುಗಡೆಯಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯಿರುವುದರಿಂದ ಮಾರ್ಚ್, 15 ರೊಳಗೆ ಸಂಬಂಧಿಸಿದ ವ್ಯಾಪಾರಿಗಳು...
ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.15 ಶನಿವಾರ ಸಂಜೆ 5 ರಿಂದ ಲಯನ್ಸ್...
ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ನಗರ ಕಡಬ ತಾಲೂಕು ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಮಾರ್ಚ್ 09 ಕ್ಕೆ ಉದ್ಘಾಟನೆಗೊಂಡು ನಿತ್ಯ ತರಗತಿಯು ಬೆಳಿಗ್ಗೆ ಗಂಟೆ 5:00 ರಿಂದ 6:30ರತನಕ ಜರಗಲಿರುವುದು.ಮಧುಮೇಹ, ರಕ್ತದೊತ್ತಡ, ಬೊಜ್ಜಿನ ಸಮಸ್ಯೆ...
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ದಶ ಕಾರ್ಯಕ್ರಮಗಳ ಅಂಗವಾಗಿ ಮುಟ್ಟು ಗುಟ್ಟಲ್ಲ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಪ್ರಾಥಮಿಕ ವಿಭಾಗದಲ್ಲಿ ಮಾ.6 ರಂದು ನಡೆಯಿತು. ವಿಜಯಾ ಹೊಮಿಯೋ ಕ್ಲಿನಿಕ್...
ಮಹಿಳಾ ದಿನಾಚರಣೆ ಅಂಗವಾಗಿ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಸಿನಿಮಾ ಪ್ರಿಯರಿಗೆ ವಿಶೇಷ ಆಫರ್ ಪ್ರಕಟಿಸಿದ್ದು, ಮಾ.08 ರಂದು ಸಂಜೆ 4.15 ರ ಭಾವ ತೀರ ಯಾನ ಶೋ ವೀಕ್ಷಿಸಲು ಟಿಕೇಟ್ ದರ ಕೇವಲ ರೂ 99/- ಮಾತ್ರ ನಿಗದಿಪಡಿಸಿದೆ. ಮಾ.08 ರಂದು ಮಾತ್ರ ಸುವರ್ಣವಕಾಶವಿದ್ದು ಮಕ್ಕಳು,ಪುರುಷರು, ಮಹಿಳೆಯರು ಸೇರಿದಂತೆ ಎಲ್ಲರೂ ಸದುಪಯೋಗ ಪಡೆಯಬಹುದು. ಸುಳ್ಯದ...
ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಕ್ಕೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ತಿಳಿಸಿದ್ದಾರೆ. ಮಾ.7ರಂದು ಸುಳ್ಯ ಪ್ರೆಸ್ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,...
Loading posts...
All posts loaded
No more posts
