ಲ್ಯಾಂಪ್ಸ್ ಸೊಸೈಟಿಯಲ್ಲಿ 15 ವರ್ಷದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ – ಅವಿರೋಧ ಆಯ್ಕೆಯಲ್ಲಿ ಕಾಂಗ್ರೆಸ್ ಗೆ 3 ಹಾಗೂ ಬಿಜೆಪಿ ಗೆ 2 ಸ್ಥಾನ – ಚುನಾವಣೆ ನಡೆದ 4 ಕ್ಷೇತ್ರಗಳ ಪೈಕಿ ಬಿಜೆಪಿ & ಕಾಂಗ್ರೆಸ್ ಗೆ ತಲಾ ಎರಡು ಸ್ಥಾನ

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶದ ಸಹಕಾರ ಸಂಘ ( ಲ್ಯಾಂಪ್ಸ್) ಇದರ 9 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಮಾ.1 ರಂದು 4 ಸ್ಥಾನಗಳಿಗೆ ಚುನಾವಣೆ ನಡೆದು ‌ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಲಾ ಎರಡು ಸ್ಥಾನಗಳಲ್ಲಿ ವಿಜೇತರಾಗಿದ್ದಾರೆ. ಅವಿರೋಧ ಆಯ್ಕೆಯಾದ ಸ್ಥಾನಗಳ ಪೈಕಿ ಕಾಂಗ್ರೆಸ್...

ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾವಿಧಿ ಸ್ವೀಕಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಸ್ತುವಾರಿ ಪ್ರಾಂಶುಪಾಲ ಡಾ.ದಿನೇಶ್ ಕೆ ಅವರು ಜಗತ್ತಿನಲ್ಲಿರುವ ಮೌಡ್ಯತೆ ಹಾಗೂ ಅಂಧಕಾರವನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ವಾಣಿಜ್ಯಶಾಸ್ತ್ರ...
Ad Widget

ಅಡ್ತಲೆ : ಉಳ್ಳಾಕುಲು ಮತ್ತು ಮಲೆದೈವಗಳ ದೈವಸ್ಥಾನದ ಆಡಳಿತ ಸಮಿತಿ ರಚನೆ – ಅಧ್ಯಕ್ಷರಾಗಿ  ಸದಾನಂದ ಅಡ್ತಲೆ, ಕಾರ್ಯದರ್ಶಿಯಾಗಿ  ಪ್ರಸನ್ನ ಪಿಂಡಿಮನೆ

ಅಡ್ತಲೆ ಬೆದ್ರುಪಣೆ ಶ್ರೀ ಉಳ್ಳಾಕುಲು ಮತ್ತು ಮಲೆದೈವಗಳ ದೈವಸ್ಥಾನ ಇದರ ಆಡಳಿತ ಸಮಿತಿಯ ಸಭೆ ಮಾ.1ರಂದು ನಡೆಯಿತು.ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ   ಸದಾನಂದ ಅಡ್ತಲೆ ಹಾಗೂ ಕಾರ್ಯದರ್ಶಿಯಾಗಿ  ಪ್ರಸನ್ನ ಪಿಂಡಿಮನೆ ಇವರನ್ನು ಆಯ್ಕೆ ಮಾಡಲಾಯಿತು.‌ ಸದಸ್ಯರುಗಳಾಗಿ  ಶಿವಪ್ರಸಾದ್ ಮೇಲಡ್ತಲೆ, ಚಂದ್ರಶೇಖರ ಮೂರ್ಜೆ,  ಯತೀಶ್ ನೆಕ್ಕರೆ ಆಯ್ಕೆಯಾದರು.

ಅಡ್ತಲೆ ಉಳ್ಳಾಕುಲು ಹಾಗೂ ಮಲೆ ದೈವಸ್ಥಾನದಲ್ಲು ವಾರ್ಷಿಕ ಮಹಾಸಭೆ

ಅಡ್ತಲೆ ಉಳ್ಳಾಕುಲು ಹಾಗೂ ಮಲೆದೈವಗಳ ದೈವಸ್ಥಾನ ಅಡ್ತಲೆ ಬೆದ್ರುಪಣೆ ಇದರ ಆಡಳಿತ ಸಮಿತಿ ವಾರ್ಷಿಕ ಮಹಾ ಸಭೆ ಮಾ. 1ರಂದು ಸಮಿತಿಯ ಅಧ್ಯಕ್ಷರಾದ ಗಣೇಶ್ ಮಾಸ್ತರ್ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ದೈವಸ್ಥಾನ ವಠಾರದಲ್ಲಿ ನಡೆಯಿತು. ಈ ವರ್ಷದ ಉಳ್ಳಾಕುಲು ಮತ್ತು ಮಲೆ ದೈವಗಳ ನಡಾವಳಿಯನ್ನು ವರ್ಷಂಪ್ರತಿಯಂತೆ ಮಾರ್ಚ್ ತಿಂಗಳ 21ರಂದು ಕೂಡಿ ಮಾರ್ಚ್ ತಿಂಗಳ 22ನೇ...

ಅರೆಭಾಷೆ ಅಕಾಡೆಮಿ ವತಿಯಿಂದ ಬೊಳಿಯ ಅಜಿಲ ರವರ ತಂಡಕ್ಕೆ ವಾದ್ಯ ಪರಿಕರಗಳ ವಿತರಣೆ

ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ, ಕರ್ನಾಟಕ ಸರ್ಕಾರ ಇದರ ವತಿಯಿಂದ 2022-23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮವು ಫೆ.28 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡುವ ವಾದ್ಯ ಪರಿಕರಗಳನ್ನು ದೈವ ನರ್ತಕರಾದ ಕೊಲ್ಲಮೊಗ್ರು ಗ್ರಾಮದ...

ಮಾ.4 ರಂದು ಸುಬ್ರಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು, ಪುತ್ತೂರು ರೋಟರಿ ಕ್ಯಾಂಪುಕೋ ಬ್ಲಡ್ ಬ್ಯಾಂಕ್ ಸೆಂಟರ್, ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಿರಿಯ ವಿದ್ಯಾರ್ಥಿ ಸಂಘ ,ರೋವರ್ಸ್ ರೆಂಜರ್ಸ್ ಘಟಕ ,ಆಂತರಿಕ ಗುಣಮಟ್ಟ ವಿಭಾಗಇವುಗಳ ಜಂಟಿ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಾರ್ಚ್ 4ರಂದು ಕಾಲೇಜಿನಲ್ಲಿ ನಡೆಯಲಿರುವುದಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ದಿನೇಶ್ ಕೆ...

ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ – ಸ್ನೇಹ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಡಾ. ಮುರಲೀಮೋಹನ್ ಚೂಂತಾರು

"ಸುಂದರ ಪರಿಸರದ ಸ್ನೇಹಾಲಯ ನನ್ನ ಬಾಲ್ಯದ ನೆನಪುಗಳನ್ನು ಮರುಕಳಿಸಿತು. ಶಾಲೆಗಳು ಇಂದು ವ್ಯಾಪಾರೀಕರಣ ಆಗುವ ಕಾಲಘಟ್ಟದಲ್ಲಿ ಗುರುಕುಲ ಪದ್ಧತಿಯಲ್ಲಿ ಶಿಕ್ಷಣದ ಪಾವಿತ್ರ್ಯತೆ ಕಾಪಾಡಿಕೊಂಡು , ಸಂಸ್ಕಾರ ನೀಡುವ ಶಾಲೆ ಸ್ನೇಹ ಶಾಲೆ.ಶಾಲೆ ಎಂದರೆ ಸ್ನೇಹದಂತಿರಬೇಕು. ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ .ಇಂದಿನ ಕಲುಷಿತ ವಾತಾವರಣದಲ್ಲಿ ಸಂಸ್ಕಾರಯುತ ಸ್ನೇಹ ಶಾಲೆಯಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ನೀಡುವ ದೇಶಸೇವೆ...

ಸಂಪಾಜೆ : ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಾಹೀದ್ ನೆರವೇರಿಸಿದರು.  ಗಡಿಕಲ್ಲು ಅಂಗನವಾಡಿ ಕೇದ್ರಗಳಲ್ಲಿ ಹಾಗೂ ಕಲ್ಲುಗುಂಡಿ...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯವು ಶ್ರೀನಿವಾಸ್ ಯೂನಿವರ್ಸಿಟಿ ಪಾಂಡೇಶ್ವರ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ನಲ್ಲಿ ಕಾಲೇಜಿನ ತಂಡವು ಭಾಗವಹಿಸಿ ಸಮೂಹ ನೃತ್ಯ ಹಾಗೂ ಮುಖ ವರ್ಣಿಕೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಸಮೂಹ ನೃತ್ಯದಲ್ಲಿ ವಿಶ್ಮಿತಾ ಡಿ.ಬಿ. ಭಾರತಿ ಎಂ, ನಿಶಾ ಐ.ಕೆ, ಭವ್ಯ ಕೆ ಎನ್ ಶ್ರೇಯ,...

ಹೌಸ್ ಫುಲ್ ಪ್ರದರ್ಶನದೊಂದಿಗೆ ಎರಡನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ –  ಮಾ 01 ಮತ್ತು 02 ರಂದು ಶೋ ಲಭ್ಯ

ಯುವ ಸಂಗೀತ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ  ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನದೊಂದಿಗೆ ವಾರ ಪೂರೈಸಿದ್ದು, ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಮಾ.1 ಮತ್ತು 2 ರಂದು ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಮಾ.01 ರಂದು ಸಂಜೆ 4.45 ಕ್ಕೆ...
Loading posts...

All posts loaded

No more posts

error: Content is protected !!