ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ಸಂಪನ್ನ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಜಾತ್ರೋತ್ಸವದ ಮೊದಲ ದಿನವಾದ ಫೆ.20 ಗುರುವಾರದಂದು ಬೆಳಿಗ್ಗೆ ಮೆರವಣಿಗೆಯ ಮೂಲಕ ಶ್ರೀ ದೇವರಿಗೆ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ,...

ಅರೆಭಾಷೆ ಕಾಮಿಡಿ ಸೀಸನ್ 1 ಆಡಿಶನ್ ಶೋ ದಲ್ಲಿ ಕೆ ಎಸ್ ಎಸ್ ಕಾಲೇಜು ತಂಡ ಆಯ್ಕೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, v4 ನ್ಯೂಸ್ ಮತ್ತು ಎಂ.ಬಿ ಫೌಂಡೇಶನ್ ಸಹಯೋಗದಲ್ಲಿ ನಡೆಸಿದ ಅರೆ ಭಾಷೆ ಕಾಮಿಡಿ ಸೀಸನ್ 1 ಆಡಿಶನ್ ಶೋ ದಲ್ಲಿ ಕೆ. ಎಸ್ .ಎಸ್ ಕಾಲೇಜಿನ ತಂಡ ಆಯ್ಕೆಯಾಗಿದೆ. ಸಂಸ್ಥೆಯ ಪ್ರಾಂಶುಪಾಲ ಡಾ ದಿನೇಶ ಪಿ.ಟಿ ಅವರ ಸಹಕಾರದೊಂದಿಗೆ ಕನ್ನಡ ವಿಭಾಗದ ಉಪನ್ಯಾಸಕಿ ಸುಮಿತ್ರ ಅವರ ಮಾರ್ಗದರ್ಶನದಲ್ಲಿ...
Ad Widget

ತಳೂರು: ಪೂಜಾರಿಮನೆ ಚಂದ್ರಶೇಖರ (ಪುಟ್ಟ) ನಿಧನ

ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಟಿ. ಪಿ. ಚಂದ್ರಶೇಖರ (ಪುಟ್ಟ) ಎಂಬವರು ಫೆ.21 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಚಂದ್ರಶೇಖರ ರವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಮನೆಯವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರು. ಅಲ್ಲಿಯೂ ಅವರಿಗೆ...

ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಕುಕ್ಕೆಶ್ರೀ ಸುಬ್ರಹ್ಮಣ್ಯ ಭೇಟಿ

ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಯವರು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು.ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತ್ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಜಯರಾಮ ರಾವ್,...

ಆನೆಗುಂಡಿ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿ ಬಳಿ ಕಾರೊಂದು ಢಿಕ್ಕಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು , ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ.

ಕಲ್ಮಕಾರು : ಶ್ರೀ ಕ್ಷೇ. ಧ. ಗ್ರಾ. ಯೋಜನೆ ವತಿಯಿಂದ ನಿರ್ಮಾಣಗೊಂಡ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದ ಕಿಲಾರ್ಕಜೆ ಎಂಬಲ್ಲಿ ವಾಸ ಮಾಡುತ್ತಿರುವ ರುಕ್ಮಯ್ಯ S/o ರಾಮಪ್ಪ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ...

ಸುಳ್ಯ ಪ್ರೆಸ್ ಕ್ಲಬ್ ಗೆ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಭೇಟಿ ಪ್ರೆಸ್ ಕ್ಲಬ್ ಗ್ರಂಥಾಲಯ ನಿರ್ಮಾಣಕ್ಕೆ ರೂ.5 ಲಕ್ಷ ನೆರವಿನ ಭರವಸೆ

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಅವರನ್ನು ಸುಳ್ಯ ಪ್ರೆಸ್ ಕ್ಲಬ್ಬಿಗೆ ಆಹ್ವಾನಿಸಿದ ಮೇರೆಗೆ ಅವರು ಪ್ರೆಸ್ ಕ್ಲಬ್ಬಿಗೆ ಭೇಟಿ ನೀಡಿದರು. ಅಲ್ಲಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತಲ್ಲದೆ ಪ್ರೆಸ್ ಕ್ಲಬ್ಬಿನ ವತಿಯಿಂದ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸುಸಜ್ಜಿತ ಗ್ರಂಥಾಲಯ ರಚನೆಯ ಯೋಜನೆಗೆ ನೆರವು ನೀಡುವಂತೆ...

ಪುತ್ತೂರು ; ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ಚಲನಚಿತ್ರದ ಪ್ರಥಮ ಶೋ ಉದ್ಘಾಟನೆ – ಹೌಸ್ ಫುಲ್ ಪ್ರದರ್ಶನ ಕಂಡ ಸಿನೇಮಾಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ

ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡಿದ್ದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು ಹೌಸ್ ಫುಲ್ ಪ್ರದರ್ಶನಗೊಂಡ ಸಿನೇಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ...

ಪರೀಕ್ಷೆ ಯೊಂದು ಹಬ್ಬ ಬನ್ನಿ ಸಂಭ್ರಮಿಸೋಣ ವಿಧ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಸುಳ್ಯ: ವಲಯ ೧೫ ರ ತರಬೇತಿ ವಿಭಾಗದ ತರಬೇತಿ ಕಾರ್ಯಕ್ರಮ ಪರೀಕ್ಷೆ ಯೊಂದು ಹಬ್ಬ ಬನ್ನಿ ಸಂಭ್ರಮಿಸೋಣ ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ,ಚೈತ್ರ ಯುವತಿ ಮಂಡಲ ಅಜ್ಜಾವರ , ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಕಾರದೊಂದಿಗೆ ಸರಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿ ನಡೆಯಿತು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ...

ಸುಳ್ಯದ ಗಾಯಕ ವಿಜಯ್ ಕುಮಾರ್ ರಿಗೆ ರಾಜ್ಯಮಟ್ಟದ ಸ್ವರ ಚೈತನ್ಯ ಪ್ರಶಸ್ತಿ

ಎ.ಬಿ. ಕ್ರಿಯೇಷನ್ಸ್ ನ ಹಾಡು ಹಕ್ಕಿಯ ಗೂಡು ನೇತಾಜಿ ರಂಗ ಮಂದಿರ ಬಿಳಗುಳ ಮೂಡಿಗೆರೆ ಚಿಕ್ಕಮಗಳೂರು ಇಲ್ಲಿ ಫೆ. 16 ರಂದು ನಡೆದ 50ನೇ ಸಂಚಿಕೆ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ  ಸಂಗೀತ ಕಲರವ ನಡೆಸಿ ಬಳಿಕ ರಾಜ್ಯಮಟ್ಟದ  ಸ್ವರ ಚೈತನ್ಯ ಪ್ರಶಸ್ತಿಯನ್ನು ಸುಳ್ಯದ ವಿಜಯ್ ಕುಮಾರ್ ಇವರು ಪಡೆದಿರುತ್ತಾರೆ ‌.  ಇವರು ಸುಳ್ಯದ ಟಿ...
Loading posts...

All posts loaded

No more posts

error: Content is protected !!