ಸರಕಾರಿ ಪ್ರೌಢಶಾಲೆ ಎಲಿಮಲೆಗೆ ಸ್ಮಾರ್ಟ್ ಟಿವಿ/ಬೋರ್ಡ್ ಕೊಡುಗೆ

ಐ ಜಿ ಡಿ ( ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್) ಸಂಸ್ಥೆಯ ಸಂಯೋಜನೆಯಲ್ಲಿ " ಐ ಟಿ ಸಿ ಆಶಿರ್ವಾದ್ ಸ್ಮಾರ್ಟ್ ಇಂಡಿಯಾ" ಸಹಭಾಗಿತ್ವದೊಂದಿಗೆ ಸರಕಾರಿ ಪ್ರೌಢ ಶಾಲೆಗೆ ದಿನಾಂಕ:20-02-2025 ನೇ ಗುರುವಾರರಂದು ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ...

ಫೆ. 22 ಮತ್ತು 23ರಂದು ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ರಂಗ ಚಟುವಟಿಕೆ ಕಾರ್ಯಾಗಾರ

ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆ, ಜೇಸಿಐ ಬೆಳ್ಳಾರೆ ಮತ್ತು ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಇವುಗಳ ಆಶ್ರಯದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಮೊಂಟೆಸ್ಸರಿ ಅಥವಾ ನರ್ಸರಿ ಶಿಕ್ಷಕಿಯರಿಗೆ ಎರಡು ದಿನಗಳ ರಂಗ ಚಟುವಟಿಕೆ ಕಾರ್ಯಾಗಾರ ಫೆ.22 ಮತ್ತು ಫೆ. 23 ರಂದು ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ...
Ad Widget

ಇಂದು ತೆರೆ ಕಾಣುತ್ತಿರುವ ಭಾವ ತೀರ ಯಾನ ಚಲನಚಿತ್ರಕ್ಕೆ ಕರಾವಳಿಯಾದ್ಯಂತ ವ್ಯಾಪಕ ಬೆಂಬಲ – ರಸ್ತೆಯುದ್ದಕ್ಕೂ ಬ್ಯಾನರ್ ಹಾಕಿ ಶುಭಕೋರಿದ ಅಭಿಮಾನಿಗಳು

ಕರಾವಳಿಯ ಯುವ ಪ್ರತಿಭೆ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಕಾಲಿರಿಸಿದ ಮಯೂರ ಅಂಬೆಕಲ್ಲು ಸಾಧನೆಯ ಇನ್ನೊಂದು ಮೆಟ್ಟಿಲೇರಿದ್ದಾರೆ. ನೂತನ ಸಿನಿಮಾ ನಿರ್ಮಾಣ ಮಾಡುವ ಮೂಲಕ ಕರಾವಳಿಯ ಮನಗೆದ್ದಿದ್ದಾರೆ.‌ ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿರುವ "ಭಾವ ತೀರ ಯಾನ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ನ ಯುವ ಕಲಾವಿದನಾಗಿ ಮಾಡಿ ಬರಲಿದ್ದಾರೆ. ಅವರೇ ಕತೆ,...

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ ನಾಯಕರಿಗೆ ಒಂದು ದಿನದ ನಾಯಕತ್ವ ತರಬೇತಿ ಶಿಬಿರ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ನಾಯಕರಿಗೆ ಒಂದು ದಿನದ "ಲೀಡ್ ಒನ್" ನಾಯಕತ್ವ ತರಬೇತಿ ಶಿಬಿರವು ಸುಳ್ಯದ ಗ್ರಾಂಡ್ ಪರಿವಾರ್ ಸಭಾಭವನದಲ್ಲಿ ನಡೆಯಿತು. ಬೆಳಿಗ್ಗೆ 9:30ಕ್ಕೆ ಸಭಾ ಕಾರ್ಯಕ್ರಮದೊಂದಿಗೆ ಆರಂಭವಾದ ಶಿಬಿರವು ಸಾಯಂಕಾಲ 6:00ವರೆಗೆ ನಡೆಯಿತು.ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯರಾದ ಅಬ್ದುಲ್ ಕಲಾಂ ರವರು ಪ್ರಸ್ತಾವಿಕವಾಗಿ ಮಾತನಾಡಿ ಮೆಲಸ್ಥರದ ನಾಯಕರ...

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ – ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ "ಬರವಣಿಗೆ ಮಾಧ್ಯಮ ಶಿಬಿರ"ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು....

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಆಯ್ಕೆಗೆ ತಾತ್ಕಾಲಿಕ ತಡೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಿಸಿ ಫೆ.15 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದರು.‌ ಆದರೇ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನಗೊಂಡ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ...

ಸುಳ್ಯ: ನೂತನ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಫೆ. 24 ರಂದು ಪದಗ್ರಹಣ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಫೆ.24 ರಂದು ಅ.2.30ಕ್ಕೆ ಲಯನ್ಸ್ ಸೇವಾ ಸರನದಲ್ಲಿ ನಡೆಯಲಿದೆ ಎಂದು ನೂತನ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪದಗ್ರಹಣ ಸಮಾರಂಭದಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್‌ ಕುಮಾ‌ರ್, ಮಾಜಿ ಸಚಿವ ರಮಾನಾಥ ರೈ ಕೆಪಿಸಿಸಿ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ಹಸಿರು ಕಾಣಿಕೆ ಸಮರ್ಪಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಅಂದರೆ ಇಂದಿನಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಕ್ಷೇತ್ರದ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕರಂಗಲ್ಲು ಹಾಗೂ ಐನೆಕಿದು ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಬಂದಂತಹ ಹಸಿರು ಕಾಣಿಕೆಯನ್ನು ಹರಿಹರ ಮುಖ್ಯ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಂದ ಕೆ ಎಸ್ ಎಸ್ ಕಾಲೇಜಿನಲ್ಲಿ ಕಾರ್ಡಿಯೋ ಪಲ್ಮನರಿ ಪುನರುಜ್ಜೀವನ ಕಾರ್ಯಾಗಾರ ; ಸಿ.ಪಿ.ಆರ್. ವ್ಯಕ್ತಿಯ ಜೀವ ಉಳಿಸಬಲ್ಲ ಜೀವ ರಕ್ಷಕ ತಂತ್ರ – ಡಾlಪವನ್ ಆರ್ ಸಾಗರ್

ರೋಟರಿ ಕ್ಲಬ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಯೂಥ್ ರೆಡ್ ಕ್ರಾಸ್ ಯೂನಿಟ್ ರೋವರ್ಸ್ ರೆಂಜರ್ಸ್ ಹಾಗೂ ಎನ್ ಎಸ್ ಎಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಾರ್ಡಿಯೋ ಪಲ್ಮನರಿ ಪುನರ್ಜೀವನ ಕಾರ್ಯಾಗಾರವು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಮಂಗಳೂರಿನ ಕೆಎಂಸಿ ಯಾ ತುರ್ತು ಚಿಕಿತ್ಸಾ ಘಟಕದ ಡಾ. ಪವನ್ ಆರ್ ಸಾಗರ್ ದೀಪ ಪ್ರಜ್ವಲದೊಂದಿಗೆ ಉದ್ಘಾಟಿಸಿ...
Loading posts...

All posts loaded

No more posts

error: Content is protected !!