ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ – ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಈ ಸಮಿತಿಯ ಸದಸ್ಯರ ಸಭೆ ಫೆ. 12 ರಂದು ದೇವಸ್ಥಾನದ ಸಭಾಭವನದಲ್ಲಿ ನಡೆದು ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು ಅವರು ಅವಿರೋಧವಾಗಿ ಆಯ್ಕೆಯಾದರು. ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರುಗಳಾದ ಶ್ರೀ ಕ್ಷೇತ್ರದ ಪ್ರದಾನ...

ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ (ರಿ) ಕಂದ್ರಪ್ಪಾಡಿ ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯಲ್ಲಿ ಸಾಮಾಜಿಕ ಕಳಕಳಿಯತ್ತ ಯುವ ಮನಸ್ಸುಗಳ ಚಿತ್ತ ಎಂಬ ಪರಿಕಲ್ಪನೆಯೊಂದಿಗೆ 2021ರಲ್ಲಿ ಅಸ್ತಿತ್ವಕ್ಕೆ ಬಂದ ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ (ರಿ) ಕಂದ್ರಪ್ಪಾಡಿ ಇದರ ಆಶ್ರಯದಲ್ಲಿ 4ನೇ ವರ್ಷದ 6 ತಂಡಗಳ  ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಫೆಬ್ರವರಿ 2 ರಂದು ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು...
Ad Widget

ಸುಳ್ಯ ತಾಲೂಕು ಕಛೇರಿ ಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ, ಭ್ರಷ್ಟಾಚಾರದ ನಿರ್ಮೂಲನೆ ಕುರಿತು ಲೋಕಾಯುಕ್ತ ಎಸ್ ಪಿ ಯಿಂದ ಅಧಿಕಾರಿಗಳಿಗೆ ನೀತಿ ಪಾಠ ಬೋಧನೆ.

ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆಯನ್ನು ಫೆ. 12 ರಂದು ಆಯೋಜಿಸಯಿತು. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ ಎ ನಟರಾಜ್, ಹಾಗೂ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಭಾಗವಹಿಸಿದ್ದರು. ಸಾರ್ವಜನಿಕ ದೂರು ಸ್ವೀಕಾರ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಸರಕಾರಿ...

ಲೋಕಾಯುಕ್ತ ಜನ ಸಂಪರ್ಕ ಸಭೆ

ನಗರ ಪಂಚಾಯತ್ ಶೆಡ್ಡ್ ಕಸ , ಜೀವ ನದಿ ಪಯಶ್ವಿನಿಯಲ್ಲಿ ಮೀನುಗಳು ಮಾರಣ ಹೋಮ,ಅರಮನೆಗಯ ಸೇತುವೆ , ಬಿಎಸ್ ಎನ್ ಎಲ್ ನೆಟ್ವರ್ಕ್‌ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ! ಸುಳ್ಯ ತಾಲೂಕು ಕಚೇರಿಯಲ್ಲಿ ಫೆ. 12 ರಂದು ನಡೆದ ಲೋಕಾಯುಕ್ತ ಜನ ಸಂಪರ್ಕ ಸಭೆಯು ಲೋಕಾಯುಕ್ತ ಎಸ್ ಪಿ ನಟರಾಜ್...

ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಲೋಕಾಯುಕ್ತ ಎಸ್ ಪಿ ಭೇಟಿ , ವಿಎ ಗಳ ಅಹವಾಲು ಸ್ವೀಕಾರ

ಸುಳ್ಯ: ಗ್ರಾಮ ಆಡಳಿತಾಧಿಕಾರಿಗಳ ರಾಜ್ಯಾದ್ಯಂತ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುತ್ತಿದ್ದು ಮೂರನೇ ದಿನವಾದ ಇಂದು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮ ಆಢಳಿತಾಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ಎಸ್ ಪಿ ನಟರಾಜ್ ಎಂ ಎ ಅಹವಾಲು ಸ್ವೀಕರಿಸಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಿದ್ದು ನಿಮ್ಮ ಅಹವಾಲುಗಳು...

ಬಾಳುಗೋಡು : ಶಿವಾಲ ಕಲ್ಲಡ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ

ಬಾಳುಗೋಡು ಗ್ರಾಮದ ಶಿವಾಲ-ಕಲ್ಲಡ್ಕ ರಸ್ತೆ 30ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.ಸಂದರ್ಭದಲ್ಲಿ ಪಕ್ಷದ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿ.ಪಂ. ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಅಧ್ಯಕ್ಷ ವಿಜಯ ಕುಮಾರ್ ಅಂಙಣ, ಪಕ್ಷದ ಪ್ರಮುಖರಾದ ಚಂದ್ರಹಾಸ ಶಿವಾಲ, ಸೋಮಶೇಖರ್ ಕಟ್ಟೆಮನೆ, ಮಾಧವ ಚಾಂತಾಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಾ.1 : ಸುಳ್ಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವ, ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಸಂಕ್ರಮಣ ಪೂಜೆ

ಸುಳ್ಯ ಕಸಬಾಮೂಲೆ ಜೂನಿಯರ್ ಕಾಲೇಜು ಬಳಿ ಸುಳ್ಯ ಶ್ರೀ ಸಂಚಾರಿ ಗುಳಿಗ ಸಾನ್ನಿಧ್ಯದಲ್ಲಿ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವವು ಮಾ.01 ರಂದು ನಡೆಯಲಿದ್ದು ಫೆ.12 ರಂದು ಸಂಕ್ರಮಣ ಪೂಜೆ ಮತ್ತು ಆಮಂತ್ರಣ ಪತ್ರ ಬಿಡುಗಡೆ ನಡೆಯಿತು.ಸಾರ್ವಜನಿಕ ಶ್ರೀ ಸಂಚಾರಿ ಗುಳಿಗ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಸಂಕಪ್ಪ ಗೌಡ ನೀರ್ಪಾಡಿ ಆಮಂತ್ರಣ ಪತ್ರಿಕೆ ಬಿಡುಗಡೆ...

ಕುಕ್ಕೆ ಕ್ಷೇತ್ರಕ್ಕೆ ಉಜ್ಜಯಿನಿ ನಾಥ ಸಂಪ್ರದಾಯದ ಸ್ವಾಮೀಜಿ ಭೇಟಿ.

ಸುಬ್ರಹ್ಮಣ್ಯ ಫೆ.11: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಖಿಲ ಭಾರತೀಯ ನಾಥ ಸಂಪ್ರದಾಯದ ಮಧ್ಯಪ್ರದೇಶದ ಉಜ್ಜಯಿನಿಯ ಶ್ರೀ ಶ್ರೀ ಶ್ರೀ 1008 ಮಹಾಂತ ಯೋಗಿ ಪೀರ್ ರಮನಾಥ್ ಜಿ ಮಹಾರಾಜ್ ಸ್ವಾಮೀಜಿಯವರು ದಕ್ಷಿಣ ಭಾರತದ ಪುಣ್ಯಕ್ಷೇತ್ರಗಳನ್ನು ಸಂದರ್ಶಿಸುತ ಇಂದು ಮಂಗಳವಾರ ಕುಕ್ಕೆ ಕ್ಷೇತ್ರಕ್ಕೆ ತಮ್ಮ ಅನುಯಾಯಿಗಳೊಂದಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿಯವರನ್ನು ಶ್ರೀ ದೇವಳದ...

ಮುಂದುವರಿದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಬೇಟಿ, ಸರಕಾರದ ಗಮನ ಸೆಳೆಯುವ ಭರವಸೆ. ಸುಳ್ಯ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು‌ ಗ್ರಾಮ ಆಡಳಿತಾಧಿಕಾರಿಗಳು ಕೈಗೊಂಡಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದ್ದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದ ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಸುಳ್ಯ ತಾಲೂಕು ಕಚೇರಿ ಎದುರು...

ಗ್ರಾಮ ಆಡಳಿತಾಧಿಕಾರಿಗಳ ಎರಡನೇ ಹಂತದ ಪ್ರತಿಭಟನೆ , ಮಿನಿ ವಿಧಾನಸೌದ ಖಾಲಿ ಖಾಲಿ !

ಸುಳ್ಯ: ಸುಳ್ಯ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ವ್ಯತ್ಯಯವಾಗುತ್ತಿದ್ದು ಮಿನಿ ವಿಧಾನಸೌದ ಖಾಲಿಖಾಲಿ ಹೊಡೆಯಲಾರಂಭಿಸಿದ್ದು ಜನರ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದೆ. ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ:22-09-2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ,...
Loading posts...

All posts loaded

No more posts

error: Content is protected !!