ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ

ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾ ಪಾತ್ರ ರವರು ರಾಯಚೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಮುಂದಿನ ಆದೇಶದ ವರೆಗೆ ರಾಯಚೂರು ನಗರ ಪಾಲಿಕೆಯ ಆಯುಕ್ತರಾಗಿ ಸರಕಾರ ಇವರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಇವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ ವ್ಯಾಪ್ತಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ಸಮಯದಲ್ಲಿ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದರು.ಕುಕ್ಕೆ ಸುಬ್ರಹ್ಮಣ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದರು.

ಪಂಜ: ಸರಕಾರಿ ಹಿರಿಯ ಪ್ರಾಥಮಿಕ ನಾಗತೀರ್ಥದಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕ್ರೀಡಾಕೂಟ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥದಲ್ಲಿ ಪ್ರಜಾಪ್ರಭುತ್ವ‌ ದಿನದ ಅಂಗವಾಗಿ ಕ್ರೀಡಾಕೂಟವನ್ನು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇದರ ಅಧ್ಯಕ್ಷರಾದ ಹಿತೇಶ್ ಪಂಜದಬೈಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC ಅಧ್ಯಕ್ಷರಾದ ಮಧುಚಂದ್ರ ವಹಿಸಿದರು.ಪಂಜ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ್ ಕಕ್ಯಾನ, ಮುಖ್ಯಶಿಕ್ಷಕಿ...
Ad Widget

ವರ್ಣರಂಜಿತ ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ದೇವಚಳ್ಳ ಶಾಲಾ ಶತಮಾನೋತ್ಸವ, ಗಣ್ಯರಿಂದ ನೂತನ ಕಾಮಗಾರಿಗಳ ಉದ್ಘಾಟನೆ : ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ – ಬ್ರಿಜೇಶ್ ಚೌಟ

ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದು ದ.ಕ.ಸಂಸದ ಬ್ರಿಜೇಶ್ ಚೌಟ ಹೇಳಿದರು.ಅವರು ದೇವಚಳ್ಳ ಗ್ರಾಮದ ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು.‌ ಸರಕಾರಿ ಶಾಲೆಗಳನ್ನು ಉಳಿಸುವದೇ ಸವಾಲಿನ ಕೆಲಸ.‌ ಇಂತಹ ಸಂದರ್ಭದಲ್ಲಿ ಶತಮಾನೋತ್ಸವ ಆಚರಿಸುತ್ತಿರುವುದು ವಿಶೇಷ , ಕೇಂದ್ರ ಸರಕಾರದ...

ಸುಳ್ಯ ಬೆಟ್ಟಂಪಾಡಿ ಆಶ್ರಯ ಕಾಲೋನಿಯಲ್ಲಿ ಮಣ್ಣು ಮಿಶ್ರಿತ ಕಲುಷಿತ ನೀರು

ಸುಳ್ಯ ನಗರ ವ್ಯಾಪ್ತಿ ಯಲ್ಲಿರುವ ಬೆಟ್ಟಂಪಾಡಿ ಆಶ್ರಯ ಕಾಲೋನಿಯಲ್ಲಿ ನೀರಿನ ಟ್ಯಾಂಕ್ ಸ್ವಚ್ಛ ಮಾಡದೆ ಮನೆಗಳಲ್ಲಿ ಹಲವು ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು ಇಲ್ಲಿನ ನಾಗರೀಕರಿಗೆ ಬಹಳ ತೊಂದರೆಯಾಗಿದ್ದು ಸ್ಥಳೀಯರು ತಿಳಿಸಿದಂತೆ ಅಡುಗೆಗೆ ಬಳಸಲು, ಸ್ನಾನ ಮಾಡಲು, ಬಟ್ಟೆ ತೊಳೆಯಲು, ಶಾಲೆಗೆ ಹೋಗುವ ಮಕ್ಕಳ ಸಮವಸ್ತ್ರ ಇನ್ನಿತರ ದೈನಂದಿನ ನಿತ್ಯೋಪಯೋಗಿ ಕೆಲಸಗಳಿಗೆ ಸಮಸ್ಯೆಯಾಗಿದ್ದು...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ಷಯ ರೋಗದ ಕುರಿತು ಮಾಹಿತಿ ಕಾರ್ಯಗಾರ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ. 24 ರಂದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ , ಸ್ವಸ್ಥ ವೃತ್ತ ಮತ್ತು ಕಾಯಚಿಕಿತ್ಸಾ ವಿಭಾಗದ ಸಹಭಾಗಿತ್ವದಲ್ಲಿ ಕ್ಷಯ ರೋಗದ...

ಸಹಕಾರಿ ಸಂಘದ ಸದಸ್ಯ ಫಲಾನುಭವಿಗಳಿಗೆ ತಾಲೂಕಿನ ಆಸ್ಪತ್ರೆಗಳಲ್ಲಿ ಯಶಸ್ವಿನಿ ಸೌಲಭ್ಯ ದೊರೆಯುವಂತೆ ಮಾಡಲು ಶಾಸಕರು ಹಾಗೂ ಸಂಸದರಿಗೆ ಮನವಿ

ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆ. ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ...

ಜೇಸಿಐ ಸುಳ್ಯ ಸಿಟಿ ಘಟಕದ ಪದಗ್ರಹಣ

ಜೇಸಿಐ ಸುಳ್ಯ ಸಿಟಿ ಘಟಕದ ಪದ ಪ್ರಧಾನ ಸಮಾರಂಭ 2025. ಉಡುಪಿ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು ಸಮಾರಂಭದಲ್ಲಿ ಜೆಸಿಐ ಸಿಟಿ ಘಟಕದ ಅಧ್ಯಕ್ಷ ಜೇಸಿ ವಿಷ್ಣು ಪ್ರಕಾಶ್ ನಾರ್ಕೋಡು ರವರು ಜೆ ಸಿ ಹೇಮಂತ್ ಸಂಪಾಜೆ ರವರಿಗೆ ಅಧಿಕಾರ ಹಸ್ತಾಂತರಿಸಿದರು ‌.ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ನೇಹ ವಿದ್ಯಾಸಂಸ್ಥೆ, ಸಂಚಾಲಕರಾದ ಡಾ. ಚಂದ್ರಶೇಖರ್ ದಾಮ್ಲೆ ,...

ಸುಳ್ಯ : ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ,  ಉಪಾಧ್ಯಕ್ಷರಾಗಿ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್

ಸುಳ್ಯ ಭೂ ಅಭಿವೃದ್ಧಿ (LD) ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ ಜಾಲ್ಸೂರು ಹಾಗೂ ಉಪಾಧ್ಯಕ್ಷರಾಗಿ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾದರು. ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ವಿನಯಕುಮಾರ್ ಕಂದಡ್ಕ, ಕುಸಮಾಧರ ಎ.ಟಿ., ಸುವರ್ಣಿನಿ ಎಸ್., ಸೋಮನಾಥ...

ನಡುಗಲ್ಲು : ಬೆಂಗಳೂರಿನ ಸಂಸ್ಥೆ ಶಾಲೆಗೆ ನೀಡಿದ ಸೌಲಭ್ಯಗಳ ಉದ್ಘಾಟನೆ – ಸನ್ಮಾನ

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಧೀರೇನ್ ಪರಮಲೆ ಇವರ ಸಹಕಾರದೊಂದಿಗೆ ರತನ್ ರೈ, ಸೀನಿಯರ್ ಹೆಚ್. ಆರ್. ಮ್ಯಾನೇಜರ್ " ಶರ್ವಿನ್ ವಿಲಿಯಂ "ವಾಲ್ಸ್ಪರ್ ಇಂಡಿಯಾ ಕೋಟಿಂಗ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ & ಸುರೇಶ್ ರಾಬರ್ಟ್ ಅಧ್ಯಕ್ಷರು ರೋಟರಿ. ಜೆ. ಪಿ. ನಗರ ಬೆಂಗಳೂರು ಇವರ ಯೋಜನೆ 2024-25 ರನ್ವಯ ನೀಡಿದ ಕಂಪ್ಯೂಟರ್ 3,...

ಸಂಸದ ಕ್ಯಾ| ಬ್ರಿಜೇಶ್ ಚೌಟ ಇಂದು ಸುಳ್ಯಕ್ಕೆ ಭೇಟಿ – ಅಪರಾಹ್ನ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದಲ್ಲಿ ಪಾಲ್ಗೊಂಡು ಬಳಿಕ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ...
Loading posts...

All posts loaded

No more posts

error: Content is protected !!