- Monday
- July 13th, 2026
ಶಿಕ್ಷಣಕ್ಕೆ ಮಹತ್ವ ನೀಡಬೇಕಾದುದು ನಮ್ಮೆಲ್ಲರ ಕರ್ತವ್ಯ. ಶಾಲೆಗಳಿಗೆ ಸರಕಾರವೇ ಅನುದಾನ ನೀಡಲು ದುಸ್ತರವಾಗಿರುವ ಸಂದರ್ಭ ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ನೀಡಿದ ಕೊಡುಗೆ ಅಭಿನಂದನಾರ್ಹವಾದುದು. ಸುಳ್ಯಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳಶ ಪ್ರಾಯದಂತಿದೆ" ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ಸುಳ್ಯದ ಮಹತ್ಮಾಗಾಂಧಿ ಮಲ್ನಾಡು ವಿದ್ಯಾಸಂಸ್ಥೆಗೆ ಸುಳ್ಯದ...
ಗುತ್ತಿಗಾರು ಗ್ರಾಮದ ವಳಲಂಬೆ ಬದಿಯಡ್ಕ ಗಣಪಯ್ಯ ನಾಯ್ಕ ಸ್ವಗೃಹದಲ್ಲಿ ಜ.20 ರಂದು ಹೃದಯಾಘಾತದಿಂದ ನಿಧನರಾದರು. ಉತ್ತಮ ಕೃಷಿಕರಾಗಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಸೀತಮ್ಮ, ಮಕ್ಕಳಾದ ಲೋಕೇಶ್ವರಿ, ಭುವನೇಶ್ವರ, ಪುರುಷೋತ್ತಮ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ಆಮ್ಲೆಟ್ ವ್ಯಾಪಾರ ನಡೆಸುತ್ತಿರುವ ಕೇಶವ ಕಡೋಡಿ ಅವರ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ಬೀಗ ಒಡೆದು ನುಗ್ಗಿ ಜಾಲಾಡಿದ್ದಾರೆ. ಆದಿತ್ಯವಾರ ಸಂಜೆ ಅಂಗಡಿಗೆ ಬಂದಾಗ ವಿಷಯ ಗೊತ್ತಾಗಿದೆ. ಗೂಡಂಗಡಿಯ ಬಾಗಿಲು, ಬೀಗ ಒಡೆದು ಹಾನಿಯಾಗಿದ್ದು ಕಳ್ಳರು ಸ್ಥಳೀಯರೇ ಇರಬೇಕೆಂಬ ಅನುಮಾನ ಮೂಡುವಂತಾಗಿದೆ..
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ,...
ದೇವಚಳ್ಳ ಗ್ರಾಮದ ಮುಂಡೋಡಿ ಪದ್ಮಯ್ಯ ಗೌಡ ರವರ ಹಿರಿಯ ಮಗನಾದ ಮುಂಡೋಡಿ ಶಿವಾನಂದ ಗೌಡ ರವರು ಜ.19 ರಂದು ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 76 ವರ್ಷ ವಯಸ್ಸಾಗಿತ್ತು. 1984 ರಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ತಮ್ಮ ವೃತ್ತಿಯನ್ನು ಆರಂಭಿಸಿದ ಇವರು ಮೈಸೂರು, ಕಾರ್ಕಳ ಹಾಗೂ ಮಂಗಳೂರು ಕ್ಷೇತ್ರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ್ದು, ಇವರು ಕೆ.ಇ.ಬಿ ಯಲ್ಲಿ ಕಾನೂನು...
ಸುಳ್ಯ ಹಾಗೂ ಬೆಟ್ಟoಪಾಡಿ ನಡುವಿನ ರಸ್ತೆಯು ಹೊಂಡ ಕೊಂಡ ಗಳಿಂದ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಇದನ್ನು ಮನಗಂಡ ಸ್ಥಳೀಯ ಆಟೋ ಚಾಲಕರಾದ ಶೇರಾಜ್ ಕಲ್ಲುಗುಂಡಿ ಬೆಟ್ಟoಪಾಡಿ ಹಾಗೂ ಪಿಗ್ಮಿ ಕಲೆಕ್ಟರ್ ಮೂರ್ತಿ ಯವರು ಹೊಂಡಗಳನ್ನು ಮುಚ್ಚಿ ಸಂಚಾರಕ್ಕೆ ಸಹಕಾರ ನೀಡಿದರು
ಸುಬ್ರಹ್ಮಣ್ಯ ಜ.20: ಕರ್ನಾಟಕ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರಣ್ಣರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ...
ಸುಬ್ರಹ್ಮಣ್ಯ ಜ.19: “ನಮಗೆ ನಮ್ಮ ಜೀವನದಲ್ಲಿ ಎರಡು ಕಣ್ಣುಗಳು ಎಷ್ಟು ಮುಖ್ಯವೋ ಅಷ್ಟೇ ಅದನ್ನ ಕಾಪಾಡಿಕೊಂಡು ಬರುವುದು ಕೂಡ ಮುಖ್ಯ. ರೋಟರಿಯಂತಹ ಅಂತರಾಷ್ಟ್ರೀಯ ಸಂಸ್ಥೆ ಸಮಾಜದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಆರೋಗ್ಯದ ಕಡೆ ಹೆಚ್ಚು ಗಮನವಿಟ್ಟು ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ತಪಾಸಣಾ ಶಿಬಿರ ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು”...
Loading posts...
All posts loaded
No more posts
