ಪೆರಾಜೆ : ತೋಟಕ್ಕೆ ಆನೆ ದಾಳಿ – ಅಪಾರ ಕೃಷಿ ನಷ್ಟ

ಪೆರಾಜೆ ಗ್ರಾಮದ ಬಂಗಾರಕೋಡಿ ಪರಿಸರದಲ್ಲಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ನಷ್ಟ ಮಾಡಿರುವ ಘಟನೆ ವರದಿಯಾಗಿದೆ. ಬಂಗಾರಕೋಡಿ ಜಯರಾಮ ಎಂಬವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿರುವ ಕಾಡಾನೆಗಳು ಅಪಾರ ಪ್ರಮಾಣದ ಬಾಳೆಗಿಡಗಳು,ತೆಂಗು, ಅಡಿಕೆ ಗಿಡಗಳನ್ನು ನಾಶ ಮಾಡಿರುವ ಬಗ್ಗೆ ವರದಿಯಾಗಿದೆ.

ಕೊಯಿಲ ಗ್ರಾಮ ಪಂಚಾಯತ್ ನಿಂದ ಅರಂತೋಡಿಗೆ ಅಧ್ಯಯನ ಭೇಟಿ

ಕೊಯಿಲ ಗ್ರಾಮ ಪಂಚಾಯತ್ ನ ಆಡಳಿತ ಸಮಿತಿ, ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಸುಮಾರು 38 ಜನರ ತಂಡ ಅಧ್ಯಯನಕ್ಕಾಗಿ ಅರಂತೋಡು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದೆ. ಅಧ್ಯಯನ ತಂಡ  ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಗ್ರಾಮ ಪಂಚಾಯತ್ ನ ಸ್ವಚ್ಛತಾ ಘಟಕದ ಸ್ವಚ್ಛತಾ ಸಂಕೀರ್ಣ, ಅಮೃತ ಉದ್ಯಾನವನ, ಜಿಮ್ ಕೇಂದ್ರ,...
Ad Widget

ಡಾ. ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ – ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ

ಪ್ರಥಮ ಬಾರಿಗೆ ಕೊಡ ಮಾಡಿದ ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜನವರಿ 3 ಮತ್ತು 4 ರಂದು ನಡೆದ...

ಕುಂಬರ್ಚೋಡು : ಮೊಹಿಯದ್ದೀನ್ ಜುಮ್ಮಾ ಮಸೀದಿ ವಾರ್ಷಿಕ ಮಹಾಸಭೆ – ನೂತನ ಸಮಿತಿಯ ಅಧ್ಯಕ್ಷರಾಗಿ ಮಹಮ್ಮದ್ ಆಲಿ ಪೆರಾಜೆ, ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಅಕ್ಕರೆ

ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ ದಾರುಲ್ ಉಲೂಮ್ ಮದರಸದಲ್ಲಿ ಡಿ.27ರಂದು ನಡೆಯಿತು.ಮಸೀದಿಯ ಅಧ್ಯಕ್ಷರಾದ ಹನೀಫ್ ಹಾಜಿ ಕೆ ಎಂ ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಸ್ಥಳೀಯ ಮಸೀದಿ ಖತಿಬರಾದ ಅಶ್ರಫ್ ಮುಸ್ಲಿಯಾರ್ ದುವಾ ನೆರೆವೇರಿಸಿದರು.ವೇದಿಕೆಯಲ್ಲಿ ಸಲಹಾ ಸಮಿತಿಸದಸ್ಯರಾದ ಆಮು ಹಾಜಿ,,ಮದರಸ ಮುಹಲ್ಲಿಮ್ ರವೂಫ್ ಆಡೂರು ಉಪಸ್ಥಿತರಿದ್ದರು.ಪ್ರದಾನಕಾರ್ಯದರ್ಶಿಯಾದ ಅಬ್ದುಲ್ಖಾದರ್ ಅಕ್ಕರೆ ಕಳೆದ...

ಐವರ್ನಾಡು : ಮಾಸಿಕ ಸ್ವಚ್ಚತಾ ಕಾರ್ಯಕ್ರಮ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಪಂಚಾಯತ್ ವಠಾರದಿಂದ ಬೆಂಗಮಲೆವರೆಗೆ ನಡೆಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಹಾಗೂ ಪ್ರಾಥಮಿಕ ಕೃಷಿ ಪತ್ತಿನ...

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ನಿಂದ ಪಂಜ ಶಾಲೆಗೆ ಸೂಚನಾ ಫಲಕ ಕೊಡುಗೆ

ಸುಬ್ರಹ್ಮಣ್ಯ ಜ.4: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಬೋಧನೆ, ಸಮಯ ಪಾಲನೆ, ಸುತ್ತೋಲೆ ಹಾಗೂ ಪಠ್ಯೇತರ ಚಟುವಟಿಕೆಗಳ ಅನುಕೂಲಕ್ಕಾಗಿ ಸೂಚನಾ ಪಲಕವನ್ನು ಕೊಡುಗೆಯಾಗಿ ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬ್ ನ ಅಧ್ಯಕ್ಷರಾದ ಶ್ರುತಿ ಮಂಜುನಾಥ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಹಾಗೂ...

ಕುಕ್ಕೆ: ಕಿರುಷಷ್ಠಿ ದಿನದಂದು ಭಕ್ತರ ಸಂದಣಿ

ಸುಬ್ರಹ್ಮಣ್ಯ ಜ.5: ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ಕಿರುಷಷ್ಟಿ ಮಹೋತ್ಸವದ ಅಂಗವಾಗಿ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಳದ ಒಳಾಂಗಣ ಹೊರಾಂಗಣ ಹಾಗೂ ಕ್ಷೇತ್ರದ ಎಲ್ಲಾ ಕಡೆಗಳಲ್ಲಿಯೂ ಭಕ್ತ ಸಂದಣಿ ಹಾಗೂ ವಾಹನ ಸಂದಣಿ ಕಂಡು ಬಂತು. ಕುಕ್ಕೆಯಲ್ಲಿ ಚಂಪಾ ಷಷ್ಟಿ ವಾರ್ಷಿಕ ಜಾತ್ರೋತ್ಸವ ಕಳೆದು ಒಂದು ತಿಂಗಳ ನಂತರದ ಕಿರು ಷಷ್ಟಿಯಲ್ಲಿ ಕೂಡ ದೂರದೂರುಗಳಿಂದ ಭಕ್ತರು ಕ್ಷೇತ್ರಕ್ಕೆ...

ಸುಬ್ರಹ್ಮಣ್ಯ ರೋಟರಿ ವತಿಯಿಂದ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ ಹಾಗೂ ಸಾನಿಟರಿ ಪ್ಯಾಡ್ ವಿತರಣೆ

ಸುಬ್ರಹ್ಮಣ್ಯ ಜ.4: ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬೆಂಗಳೂರು ರೋಟರಿ ಜಿಲ್ಲೆ 3192ರ ಜಾಲಹಳ್ಳಿ ರೋಟರಿ ಕ್ಲಬ್ ಮೂಲಕ ಕುಮಾರಸ್ವಾಮಿ ವಿದ್ಯಾಲಯದ 400 ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಶಿಕ್ಷಣ ಮಾಹಿತಿ ಹಾಗೂ ಸಾನಿಟರಿ ಪ್ಯಾಡ್ ಗಳನ್ನ ವಿತರಣೆ ಮಾಡಲಾಯಿತು. ಬೆಂಗಳೂರು ಚಾಲಹಳ್ಳಿ ರೋಟರಿ ಕ್ಲಬ್ಬಿನ ಸಮುದಾಯ ವಿಭಾಗದ ನಿರ್ದೇಶಕಿ ರಮಣಿ ಉಪ್ಪಲ್ ಅವರು ವಿದ್ಯಾರ್ಥಿನಿಯರಿಗೆ ಹದಿಹರಯದ ಶಿಕ್ಷಣದ...

ಕಲ್ಮಕಾರು : ಬಿಜೆಪಿ ಸೇರ್ಪಡೆಗೊಂಡ ಸುಬ್ರಹ್ಮಣ್ಯ ಕೊಪ್ಪಡ್ಕ

ಕಲ್ಮಕಾರು ಗ್ರಾಮದ ಕೊಪ್ಪಡ್ಕ ಸುಬ್ರಹ್ಮಣ್ಯ ಕೊಪ್ಪಡ್ಕ ಮತ್ತು ಮೇನಕ ಸುಬ್ರಹ್ಮಣ್ಯ ಇವರು ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಬದ್ದವಾಗಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನವೀನ್ ಮುಳುಗಾಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ ಇವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.

ವೆಂಕಟರಮಣ ಸೊಸೈಟಿ ವತಿಯಿಂದ ಪಿ.ಸಿ.ಜಯರಾಮ ಮತ್ತು ಚಂದ್ರಾ ಕೋಲ್ಟಾರ್ ರವರಿಗೆ ಗೌರವಾರ್ಪಣೆ

ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪಿ.ಸಿ.ಜಯರಾಮ ಹಾಗೂ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾದ ಹಾಲಿ ನಿರ್ದೇಶಕ ಚಂದ್ರಾ ಕೋಲ್ಟಾರ್ ರವರಿಗೆ ಸಂಘದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಜಾಕೆ...
Loading posts...

All posts loaded

No more posts

error: Content is protected !!