ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:25-04-2026 ಶನಿವಾರ*01,🐏ಮೇಷ ರಾಶಿ🐏*📃,ಮನೆಯಲ್ಲಿ ಆತ್ಮೀಯರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನೆಯಲ್ಲಿ ಭಾಗವಹಿಸುತ್ತೀರಿ. ಕೈಗೆತ್ತಿಕೊಂಡ ಕಾರ್ಯಗಳು ಸುಸೂತ್ರವಾಗಿ ಪೂರ್ಣಗೊಳ್ಳುತ್ತವೆ. ಉದ್ಯಮಗಳು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ದೊರೆಯುತ್ತದೆ,ಗಮನಿಸಿ:- ಇಂದು ನೀವು ಹೊಸ ಬಟ್ಟೆ ಖರೀದಿಸಬಹುದು,ಪರಿಹಾರ:-ಗಣಪತಿ ದೇವರಿಗೆ ಗರಿಕೆಯನ್ನು...

ಸವೇರಪುರ ಶಾಲೆಗೆ ಶೇಕಡಾ 100 ಪಲಿತಾಂಶ

ಸಂಪಾಜೆ ಗ್ರಾಮದ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯು 2025-26 ನೇ ಸಾಲಿನ SSLC ಅಂತಿಮ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶದ ಸಾಧನೆ ಮಾಡಿದೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು. ಎಲ್ಲರೂ ತೇರ್ಗಡೆ ಹೊಂದಿರುತ್ತಾರೆ. 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 15 ವಿದ್ಯಾರ್ಥಿಗಳು ಪ್ರಥಮ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ. ರುತಿಕ್ ಬಿ....
Ad Widget

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆ ಶೇ.100% ಫಲಿತಾಂಶ ದಾಖಲಿಸಿದೆ. ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 27 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಅಮರಪಡ್ನೂರು ಗ್ರಾಮದ ಆನಂದ ಮೂಡೆಕಲ್ಲು ಮತ್ತು ನಳಿನಾಕ್ಷಿ ದಂಪತಿಯ ಪುತ್ರಿ ಅಹನ ಆನಂದ ಮೂಡೆಕಲ್ಲು(600), ಪೈಲಾರು ಮೂಕಮಲೆ ವಿಶ್ವನಾಥ ಮತ್ತು ಕೋಮಲಾಂಗಿ ದಂಪತಿಯ ಪುತ್ರ ಜಿತೇಶ್ ಎಂ(594),...

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಬೆಳ್ಳಾರೆ ಕೆ.ಪಿ.ಎಸ್ ಗೆ ಶೇ.100 ಫಲಿತಾಂಶ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಕೆ.ಪಿ.ಎಸ್ ಶೇ.100 ಫಲಿತಾಂಶ ದಾಖಲಿಸಿದೆ.148 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 148 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 33 ಮಂದಿ ಡಿಸ್ಟಿಂಕ್ಷನ್, 98 ಮಂದಿ ಪ್ರಥಮ ದರ್ಜೆ,13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ ಶಿಹಾಬ್(608) ಮೌಲ್ಯ.ಕೆ.(608) ಧನ್ವಿತ್.ಕೆ(606), ತನುಶಾ. ಕೆ.ಬಿ(605), ಫಾತಿಮತ್ ಶೈಮ(599), ಫಾತಿಮತ್ ಇಬ್ಝಾನ(595) ಅಂಕಗಳನ್ನು ಪಡೆದಿದ್ದಾರೆ.

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಡಿಸ್ಟಿಂಕ್ಷನ್ ಪಡೆದ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮನೀಷ್.ಕೆ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಮ್ಮಾಜೆ ಕಿನ್ನಿಗೋಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮನೀಷ್.ಕೆ 602 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ವಳಲಂಬೆ, ಕಡ್ತಲ್‌ಕಜೆ ಮನೆ(ಅಬಿರ) ಕೇಶವ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪುತ್ರ. (ವರದಿ : ಉಲ್ಲಾಸ್ ಕಜ್ಜೋಡಿ)

ಕರಾವಳಿ ಕಾಂಪ್ಲೆಕ್ಸ್ ನಲ್ಲಿ ಓನಿಕ್ಸ್ ಡ್ರೈ ಫ್ರೂಟ್ಸ್ & ನಟ್ಸ್ ಶುಭಾರಂಭ – ಡ್ರೈ ಫ್ರೂಟ್ಸ್ ಕಾಂಬೋ ಆಫರ್ ನಲ್ಲಿ ಲಭ್ಯ

ಸುಳ್ಯ ಮೆಗಾ ಶಾಪ್ ಬಳಿ ಕರಾವಳಿ ಕಾಂಪ್ಲೆಕ್ಸ್ ನಲ್ಲಿ ನವಾಜ್ ಬೆಳ್ಳಾರೆಯವರ ಮಾಲಕತ್ವದ ಓನಿಕ್ಸ್ ಡ್ರೈ ಫ್ರೂಟ್ಸ್ & ನಟ್ಸ್ ಶೋ ರೂಮ್ ಏ.23ರಂದು ಉದ್ಘಾಟನೆ ಗೊಂಡಿರುತ್ತದೆ. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಸುಳ್ಯ...

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಸುಳ್ಯ ಗ್ರೀನ್ ವ್ಯೂ ಶಾಲೆಗೆ ಶೇ.100 ಫಲಿತಾಂಶ

ಅನ್ಸಾರಿಯಾ ಎಜುಕೇಶನ್ ಸೆಂಟರ್ ಆಡಳಿತಕ್ಕೊಳಪಟ್ಟ ಸುಳ್ಯ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ 12 ಬಾರಿ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳ ಪೈಕಿ 10 ಡಿಸ್ಟಿಂಕ್ಷನ್, 14 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿರುವುದು ಈ ಬಾರಿಯ ವಿಶೇಷತೆ ಆಸಿಯ ಸನ 97%(607) ಅಂಕ ಗಳೊಂದಿಗೆ ಪ್ರಥಮ ಸ್ಥಾನಿಯಾದರೆ, ರಿಝ...

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ – 16 ಡಿಸ್ಟಿಂಕ್ಷನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 26 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಅಯಿಷತ್ ಇಹ್‌ಶಾನ-೬೦೨(ಕಲಂಬಿ ಪಲ್ಲತ್ತಾರು ಅಬ್ಬಾಸ್ ಮತ್ತು ರೆಹನತ್ ದೇಂಬಲೆ ಇವರ...

“ಜಾನುವಾರುಗಳಿಗೆ ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮ”ದ ಹಿನ್ನೆಲೆಯಲ್ಲಿ ಸುಳ್ಯದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸಾ ಸಮಯದಲ್ಲಿ ಬದಲಾವಣೆ

ಸುಳ್ಯ ತಾಲೂಕಿನಾದ್ಯಂತ ಏ.23 ರಿಂದ ಮೇ.22 ರವರೆಗೆ ಸುಮಾರು 30 ದಿನಗಳ ಕಾಲ “ಜಾನುವಾರುಗಳಿಗೆ ಕಾಲು-ಬಾಯಿ ರೋಗದ ಲಸಿಕಾ ಕಾರ್ಯಕ್ರಮ” ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಸುಳ್ಯದ ಪಶು ಆಸ್ಪತ್ರೆಯಲ್ಲಿ ನಾಯಿ, ಬೆಕ್ಕು ಸೇರಿದಂತೆ ಇತರೆ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮದ್ಯಾಹ್ನ 2:00 ಗಂಟೆಯಿಂದ...

ಇಂದಿನ(ಏಪ್ರಿಲ್ 24) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಮತ್ತು ರಬ್ಬರ್ ಧಾರಣೆಯಲ್ಲಿ ಮತ್ತೆ ಏರಿಕೆ..! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 24 ಏಪ್ರಿಲ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
Loading posts...

All posts loaded

No more posts

error: Content is protected !!