ಚಂಡಮಾರುತ ಹಿನ್ನೆಲೆ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ...

ಚಂಡಮಾರುತ ಹಿನ್ನೆಲೆ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ...
Ad Widget

ಫೆಂಗಲ್ ಚಂಡಮಾರುತದ ಪ್ರಭಾವ – ಸುಳ್ಯದಲ್ಲೂ ಮಳೆ

ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಸುಳ್ಯದಲ್ಲಿ ಕಳೆದ ರಾತ್ರಿಯಿಂದ ಮಳೆ ಆರಂಭವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕಾಲಿಕ ಮಳೆಯಿಂದ ಕೃಷಿಕರನ್ನು ಕಂಗಾಲಾಗುವಂತೆ ಮಾಡಿದೆ.

ಕವನ : ವಿದ್ಯಾರ್ಥಿ ಜೀವನ…

ಶಾಲಾ-ಕಾಲೇಜು ದಿನಗಳದು ಮುಗಿದು ಹೋಗಿದೆ ಇಂದು, ವರ್ಷಗಳ ಕಾಲ ಜೊತೆಗಿದ್ದ ಬಂಧ ದೂರ ಸಾಗುತ್ತಿದೆ ಇಂದು…ಸ್ವಾರ್ಥವಿಲ್ಲದೇ ಪ್ರೀತಿ ತೋರಿದ ಸ್ನೇಹವದು ಸೂತ್ರ ತಪ್ಪಿದೆ ಇಂದು, ಒಲ್ಲದ ಮನಸ್ಸಿನಿಂದಲೇ ದೂರವಾಗುತ್ತಿದೆ ಇಂದು…ವರ್ಷಗಳ ಕಾಲ ಜೊತೆಯಾಗಿ ಸಾಗಿದ ಈ ಪಯಣ ದಾರಿ ಬದಲಿಸುತ್ತಿದೆ ಇಂದು, ಇನ್ನು ಅವರವರ ಬದುಕಿನ ದಾರಿಯ ಹುಡುಕಿ ಎಲ್ಲರೂ ಸಾಗುವರು ಮುಂದು…ಬದುಕಿನ ಬಗ್ಗೆ ಚಿಂತೆಯಿಲ್ಲದೇ...

ಲಕ್ಷ ಹಣತೆ ದೀಪಗಳ ನಡುವೆ ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ ದೀಪಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ಭಕ್ತಿ-ಸಡಗರದಿಂದ ನಡೆಯಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು.ಶ್ರೀ ದೇವಳದ ಅರ್ಚಕರು ಉತ್ಸವದ ವಿದಿ ವಿಧಾನ ನೆರವೇರಿಸಿದರು. ರಥಬೀದಿಯಿಂದ...

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರಯೋಗಾಲಯ ವೀಕ್ಷಣೆ,ಮಾಹಿತಿ ಸಂಗ್ರಹಣೆ

ಸುಬ್ರಹ್ಮಣ್ಯ ಡಿ1: ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಕಡಬ ಸುಳ್ಯ ಮತ್ತು ಪುತ್ತೂರು ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಿ, ತಾವೇ ಸ್ವತಃ ಪ್ರಯೋಗಗಳನ್ನು ಕೈಗೊಳ್ಳಲು ಅನುಕೂಲ ಹೊಂದಿದ್ದು ನೂತನ ಆವಿಷ್ಕಾರಗಳನ್ನು ಮಾಡಲು ಪ್ರೆರೇಪಿಸುವ ವಿಶಿಷ್ಟ ಪ್ರಯೋಗಾಲಯ ದ ವೀಕ್ಷಣೆ ಹಾಗೂ ಮಾಹಿತಿ ಸಂಗ್ರಹಣೆಯನ್ನುಶನಿವಾರ ಏನೆಕಲ್ಲು ಪ್ರೌಢಶಾಲಾ 8ನೇ ತರಗತಿಯ ವಿದ್ಯಾರ್ಥಿಗಳು ಪಡಕೊಂಡರು....

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಾನಡ್ಕ ಶಾಲೆಗೆ ಪ್ರಿಂಟರ್ ಕೊಡುಗೆ

ಸುಬ್ರಹ್ಮಣ್ಯ ಡಿ.1 :ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಏನೆಕಲ್ಲು ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಪ್ರಿಂಟರ್ ನ್ನು ಶುಕ್ರವಾರ ಕೊಡುಗೆಯಾಗಿ ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಶಾಲಾ ಮೇಲುಸ್ತುವಾರಿ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ...

ಪೈಚಾರು ಹೊಟೇಲ್ ನಲ್ಲಿ ಕಳ್ಳತನ : ಆರೋಪಿಯನ್ನು ಶೀಘ್ರ ಪತ್ತೆ ಹಚ್ಚುವಂತೆ ಸ್ಥಳೀಯರಿಂದ ಪೊಲೀಸರಿಗೆ ಮನವಿ

ಪೈಚಾರು ಹೊಟೇಲ್ ಕಳ್ಳತನ ದ ಆರೋಪಿಯನ್ನು ಶೀಘ್ರವಾಗಿ ಕಂಡು ಹಿಡಿದು ಕಾನೂನು ಕ್ರಮ ಕೈ ಗೊಳ್ಳುವಂತೆ ಡಿ. 1 ರಂದು ಸಂಜೆ ಪೈಚಾರ್ ಆರ್ ಬಿ ಬಶೀರ್ ನೇತೃತ್ವ ದಲ್ಲಿ ಸ್ಥಳೀಯ ಸುಮಾರು 15ಕ್ಕೂ ಹೆಚ್ಚು ಮಂದಿ ಸುಳ್ಯ ಠಾಣೆಗೆ ಬಂದು ಮನವಿ ನೀಡಿದರು ಸ್ಥಳೀಯರ ಮನವಿ ಹಾಗೂ ಹೊಟೇಲ್ ಮಾಲಕ ಕರೀಂ ರವರು ನೀಡಿದ...

ಸುಳ್ಯದಲ್ಲಿ ನೆಲೆಸಿದ್ದ ದಾವಣಗೆರೆ ಮೂಲದ ಮಹಿಳೆ ನಾಪತ್ತೆ – ಪತಿಯಿಂದ ದೂರು

ಸುಳ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ಕೆ.ಎಂ. ವಿಕ್ರಮ್ ಎಂಬವರು ನೆಲೆಸಿ, ಕೂಲಿ ಮಾಡಿಕೊಂಡಿದ್ದು, ನ.7 ರಂದು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದ ಮಂಗಳ ಯಾನೆ ಕಾವ್ಯ ಎಂಬಾಕೆಯನ್ನು ವಿವಾಹವಾಗಿದ್ದರು. ನ.20 ರಂದು ಈಕೆ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುತ್ತೇನೆ ಎಂದು ಹೋದವರು ನಾಪತ್ತೆಯಾಗಿದ್ದಾಳೆ ಎಂದು ಸುಳ್ಯ ಪೋಲೀಸರಿಗೆ  ಪತಿ ವಿಕ್ರಮ್ ದೂರಿನಲ್ಲಿ ತಿಳಿಸಿದ್ದಾರೆ. ಈಕೆ...

ಸುಳ್ಯದಲ್ಲಿ ದಿನ ನಿತ್ಯ ಕಳ್ಳತನ , ತರಕಾರಿ ಅಂಗಡಿಗೆ ನುಗ್ಗಿದ ಕಳ್ಳ

ಸುಳ್ಯದ ನಗರ ವ್ಯಾಪ್ತಿಯ ಅಂಗಡಿಗಳಲ್ಲಿ ಪ್ರತಿನಿತ್ಯ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿದ್ದು ಅದೇ ರೀತಿಯಲ್ಲಿ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ತರಕಾರಿ ಅಂಗಡಿಗೆ ಕಳ್ಳ ನುಗಿದ್ದು, ಚಿಲ್ಲರೆ ಹಣವನ್ನು ಎಗರಿಸಿ, ತಾನು ತಂದಿದ್ದ ಮದ್ಯದ ಪ್ಯಾಕೆಟ್ ಅಲ್ಲಿಯೇ ಬಿಟ್ಟು ಹಿಂತಿರುಗಿದ ಘಟನೆ ವರದಿಯಾಗಿದೆ. ಕಳೆದ ಒಂದು ವಾರದಲ್ಲಿ ಸುಳ್ಯ, ಪೈಚಾರು, ಅಡ್ಕಾರ್, ಬೆಳ್ಳಾರೆ ಮುಂತಾದ...
Loading posts...

All posts loaded

No more posts

error: Content is protected !!