- Thursday
- July 16th, 2026
ನವೆಂಬರ್ 15ರಂದು ಗುಂಡ್ಯದಲ್ಲಿ ನಡೆಯುವ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಇದರ ನೇತೃತ್ವ ದಲ್ಲಿ ನಡೆಯುವ ಬೃಹತ್ ಹೋರಾಟಕ್ಕೆ ಸುಬ್ರಮಣ್ಯ ಐನಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ ಮತ್ತು ಉಡುಪಿ ಜಿಲ್ಲಾ HOPCOMS ಮಂಗಳೂರು ಮತ್ತು ಸುಭಿಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ...
ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನ. 15 ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಗುಂಡ್ಯದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಪ್ರತಿಭಟನೆ ಪರಿಣಾಮಕಾರಿಯಾಗಲು ದಕ್ಷಿಣ ಕನ್ನಡ ಜಿಲ್ಲೆಯ ಭಾದಿತ ಗ್ರಾಮದ ಅಂಗಡಿ ಹಾಗೂ ಹೋಟೆಲ್ ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ರೈತ ಪರ ಹೋರಾಟದಲ್ಲಿ ಕೈಜೋಡಿಸಬೇಕೆಂದು ಮಲೆನಾಡು ಜನ ಹಿತ ರಕ್ಷಣವೇದಿಕೆಯ ಸಂಚಾಲಕ ಕಿಶೋರ್...
ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ ಮೈಸೂರು ನಲ್ಲಿ ಇಂದು ನಡೆದ ಭಾರತ್ ಸ್ಕೌಟ್ ಗೈಡ್ಸ್ ಕರ್ನಾಟಕ ಮೈಸೂರು ವಿಭಾಗೀಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ತಂಡ ಭಾಗವಹಿಸಿ ಕಬ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಶಾಲಾ ವಿದ್ಯಾರ್ಥಿಗಳಾದ ಆಶಯ್.ಜಿ.ಸಿ, ಲಕ್ಷಯ್.ಬಿ ಜಿ, ಕೃತಿಕ್.ಕೆ ,...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯುತ್ತಿರುವ ಹೋರಾಟಗಳಿಗೆ ಕೊಲ್ಲಮೊಗ್ರ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಸಮಿತಿಯ ತರುಣ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸಿದೆ ಎಂದು ತರುಣ ಘಟಕದ ಅಧ್ಯಕ್ಷರಾದ ಸತೀಶ್ ದೋಲನಮನೆ ಹಾಗೂ ತರುಣ ಘಟಕದ ಕಾರ್ಯದರ್ಶಿ ಕೀರ್ತಿಶ್ ಬಾಳೆಬೈಲು ಹೇಳಿಕೆಯಲ್ಲಿ ತಿಳಿಸಿದ್ದಾರೆ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನವೆಂಬರ್ 15 ಕ್ಕೆ ...
ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಶನ್ ಇದರ ಮಹಾಸಭೆಯು ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 9 ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. 2023-2024 ನೇ ವಾರ್ಷಿಕ ವರದಿಯನ್ನು ಹಾಗೂ ವಾರ್ಷಿಕ ಲೆಕ್ಕಪತ್ರವನ್ನು ಕಾರ್ಯದರ್ಶಿ ಕೆ ಟಿ.ವಿಶ್ವನಾಥ ಸಭೆಗೆ ಮಂಡಿಸಿದರು. ಸದ್ರಿ ಸಭೆಯು ವರದಿ ಮತ್ತು ಲೆಕ್ಕಪತ್ರವನ್ನು ಅಂಗೀಕರಿಸಿತು. ಬಳಿಕ, ಗತ ವರ್ಷದ...
ಕಸ್ತೂರಿ ರಂಗನ್ ವರದಿ ವಿರುದ್ಧ ಹಾಗೂ ಜಂಟಿ ಸರ್ವೆ ಸೇರಿಂತೆ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಬಲ ಘೋಷಿಸಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಹಾಗೂ ಪ್ರ.ಕಾರ್ಯದರ್ಶಿ...
ಸುಳ್ಯ: ಸುಳ್ಯ ಗಾಂಧಿನಗರದಲ್ಲಿ ಕಾರ್ಯಚರಣೆ ನಡೆಸುತ್ತಿದ್ದ ಅಡಿಕೆ ಅಂಗಡಿಯ ವ್ಯವಸ್ಥಾಪಕ ತನ್ನ ಮನೆಗೆ ತೆರಳಿ ವಾಪಸ್ಸ್ ಬಂದು ಅಲೆಟ್ಟಿಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಲ್ಚಾರಿನ ಅಭಿಲಾಷ್ ಕೊಲ್ಲೆರಮೂಲೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಅಭಿಲಾಷ್ ಆಲೆಟ್ಟಿ ಗ್ರಾಮದಲ್ಲಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಇವರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ...
ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲದ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ಯವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು/ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಶ್ರೀ ಸದಾನಂದ ಮಾವಜಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಧನುಶ್...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಸತೀಶ್ ಟಿ.ಎನ್. ಹಾಗೂ...
Loading posts...
All posts loaded
No more posts
