ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ” ಸಂಪನ್ನ ; ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ಭಕ್ತಿ ಸಡಗರದಿಂದ ನಡೆದ ಜಾತ್ರೋತ್ಸವ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಜಾತ್ರೋತ್ಸವದ ಮೊದಲನೇ ದಿನವಾದ ಫೆ.20 ಶುಕ್ರವಾರದಂದು ಬೆಳಿಗ್ಗೆ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ತಂತ್ರಿಗಳ ಆಗಮನ, ರಾತ್ರಿ ಮಹಾಪೂಜೆ...

ಮರ್ಕಂಜ : ವಿಜೃಂಭಣೆಯಿಂದ ನಡೆದ ದೋಳ ಆದಿಮನೆಯ ಪ್ರತಿಷ್ಠಾ ಕಲಶೋತ್ಸವ

ಮರ್ಕಂಜ ಗ್ರಾಮದ ದೋಳ ಆದಿಮನೆಯಲ್ಲಿ ಶ್ರೀ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಸಪರಿವಾರ ದೈವಗಳಿಗೆ ನೂತನವಾಗಿ ನಿರ್ಮಿಸಿದ ಆದಿಮನೆಯ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಪ್ರಮುಖರಾದ ವೀರಪ್ಪ ಗೌಡ ದೋಳ ಗೂನಡ್ಕ, ಬಾಲಕೃಷ್ಣ ಗೌಡ ದೋಳ, ಡಾ|...
Ad Widget

ಸುಳ್ಯದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ಕಲಾ ಪ್ರತಿಭೋತ್ಸವ 2025-26ರ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡ ಪ್ರಥಮ ಸ್ಥಾನ ಗಳಿಸಿದೆ. 'ಸೈರನ್' ಎಂಬ ನಾಟಕ ಇದಾಗಿದ್ದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ 15 ವಿದ್ಯಾರ್ಥಿಗಳ ತಂಡವು ಪದವಿಪೂರ್ವ,...

ಸುಳ್ಯ : ಮನ್ ಕಿ ಬಾತ್ ವೀಕ್ಷಣೆ – ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಸುಳ್ಯ : ಪುರೋಹಿತ ನಾಗರಾಜ್ ಭಟ್ ರವರ ಮನೆಯಲ್ಲಿ ಇಂದು ಸುಳ್ಯ ನಗರದ ಎಲ್ಲಾ ಕಾರ್ಯಕರ್ತರು ಸೇರಿ ಮನ್ ಕಿ ಬಾತ್ ವೀಕ್ಷಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಪ್ರಭಾರಿ ಪ್ರಸನ್ನ ಕುಮಾರ್ ಮಾರ್ತ, ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ,...

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ “ಸುಳ್ಯದ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ”ಯಲ್ಲಿ ದಾಖಲಾತಿ ಪ್ರಾರಂಭ

ಸುಳ್ಯ ತಾಲೂಕಿನ ಪ್ರತಿಷ್ಠಿತ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆಯಲ್ಲಿ ದಾಖಾಲಾತಿ ಪ್ರಾರಂಭಗೊಂಡಿದ್ದು, ಇದು ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಅಂಗೀಕೃತವಾದ ಸುಳ್ಯ ತಾಲೂಕಿನ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಾಗಿದ್ದು, ಇಲ್ಲಿ ಯಾವುದೇ ಸರಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ...

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಫೆ.24ರಂದು “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ; ಭಾಷಾ ವಿಚಾರ ಸಂಕಿರಣ, ಅರೆಭಾಷಾ ವಿಚಾರ ಸಂಕಿರಣ ಹಾಗೂ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇವರ ಸಹಯೋಗದಲ್ಲಿ ‘ಸುವರ್ಣ ಮಹೋತ್ಸವ’ ಸಂಭ್ರಮಾಚರಣೆಯ ಪ್ರಯುಕ್ತ ಫೆ.24 ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕೆ.ವಿ.ಜಿ ಷಷ್ಟ್ಯಬ್ಧ ರಂಗಮಂದಿರದಲ್ಲಿ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9:30ಕ್ಕೆ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭ ನೆರವೇರಲಿದ್ದು,...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:22-02-2026 ಭಾನುವಾರ *01,🐏ಮೇಷರಾಶಿ🐏*⚜️,ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ,ಗಮನಿಸಿ:-ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ,ಪರಿಹಾರ:-ಬಡವರಿಗೆ ಹಾಗು ಅನಾಥರಿಗೆ ಅನ್ನದಾನ ಮಾಡಿ,*02,🐂ವೃಷಭರಾಶಿ🐂*⚜️,ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಕೆಲಸದ ಸ್ಥಳದಲ್ಲಿ...

ಹರಿಹರ ಪಳ್ಳತ್ತಡ್ಕ : ಫೆ.28ರಂದು ನಡೆಯಲಿರುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಅಟಲ್ ಅಭಿಮಾನಿ ಬಳಗ ಹರಿಹರ ಪಳ್ಳತ್ತಡ್ಕ-ಬಾಳುಗೋಡು ಇದರ ಆಶ್ರಯದಲ್ಲಿ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಫೆ.28ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಮೈದಾನದಲ್ಲಿ ನಡೆಯಲಿರುವ ಲೀಗ್ ಮಾದರಿಯ 8 ತಂಡಗಳ ಸೂರ್ಯ ಬೆಳಕಿನ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.19ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ...

ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರವಿಪ್ರಕಾಶ್ ಅಮ್ಮಾಜಿಮೂಲೆ

ಅಡ್ಕಾರು ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನ ಬಳಿಯಲ್ಲಿ ಬಿದ್ದಿದ್ದ 3 ಪವನ್ ಚಿನ್ನದ ಸರ ರವಿಪ್ರಕಾಶ್ ಬೆಳ್ಳಿಪ್ಪಾಡಿ, ಅಮ್ಮಾಜಿಮೂಲೆ ಎಂಬುವವರಿಗೆ ಸಿಕ್ಕಿದ್ದು, ಅವರು ಅದನ್ನು ವಾರಸುದಾರರಾದ ಬಾಲಕೃಷ್ಣ ಮಡ್ತಿಲ ರವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಲೇಖನ : “ಬಂಗಾರ” ಜನಸಾಮಾನ್ಯರ ಪಾಲಿಗೆ “ಬಲುಭಾರ”

ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...
Loading posts...

All posts loaded

No more posts

error: Content is protected !!