- Friday
- July 24th, 2026
ಪ್ರತಾಪ ಯುವಕ ಮಂಡಲ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಇವುಗಳ ಜಂಟಿ ಆಶ್ರಯದಲ್ಲಿ ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಾಟಿ ಉತ್ಸವ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನೇಜಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ...
ಸುಳ್ಯ ಕೃಷಿ ಇಲಾಖೆಯ ಕಟ್ಟಡವನ್ನು ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತ್ ಬಾಡಿಗೆಗೆ ನೀಡಿದ್ದು ಇದರ ಕುರಿತಾಗಿ ಕೃಷಿ ನಿರ್ದೇಶಕರು ಅಜ್ಜಾವರಕ್ಕೆ ತೆರಳಿದ ಸಂದರ್ಭದಲ್ಲಿ ಗಮನಕ್ಕೆ ಬಂದು ಪರಿಶೀಲನೆ ನಡೆಸಿದಾಗ ಅಕ್ರಮ ಬಯಲಾಗಿದೆ. ಅಜ್ಜಾವರದ ಸ.ಹಿ.ಪ್ರಾ.ಶಾಲಾ ಆಟದ ಮೈದಾನದ ಬದಿಯಲ್ಲಿ ಕೃಷಿ ಇಲಾಖೆಗೆ ಸಂಬಂದಿಸಿದ ಸುಮಾರು 10 ಸೆಂಟ್ಸ್ ಸ್ಥಳದಲ್ಲಿ ಕೃಷಿ ಇಲಾಖೆಯ ಕಟ್ಟಡವಿದ್ದು ಇದನ್ನು ಕೃಷಿ...
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಳ್ಯ ಪಯಸ್ವಿನಿ ಘಟಕ ಮತ್ತು ಜೆ.ಸಿ.ಐ ವತಿಯಿಂದ ಇತ್ತೀಚಿಗೆ ನಿವೃತ್ತರಾದ ಸಾಹಿತ್ಯ, ಸಾಂಸ್ಕೃತಿಕ, ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಅನರ್ಘ್ಯ ಸೇವೆ ಸಲ್ಲಿಸಿದ ರಾಮಕೃಷ್ಣ ಭಟ್ ಚೊಕ್ಕಾಡಿಯವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷರಾದ ಚಂದ್ರಶೇಖರ ನಂಜೆ, ಸೀನಿಯರ್ ಕೆ.ಆರ್.ಗಂಗಾಧರ್, ಜೆ.ಸಿ.ಐ ಅಧ್ಯಕ್ಷ ಗುರುಪ್ರಸಾದ್, ಸೀನಿಯರ್ ಲೊಕೇಶ್ ಪೆರ್ಲಂಪಾಡಿ,ಸೀನಿಯರ್ ದೇವಿಪ್ರಸಾದ್ ಕುದ್ಪಾಜೆ,...
ಸುಳ್ಯದ ಸಂತ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಆಗಸ್ಟ್ 3 ರಂದು ನಡೆಯಿತು.ಸಮಾರಂಭದ ಸಭಾಧ್ಯಕ್ಷತೆಯನ್ನು ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ ವಹಿಸಿ ಮಾತನಾಡುತ್ತಾ, ಮಕ್ಕಳನ್ನು ಈಗಿನಿಂದಲೇ ಪರೀಕ್ಷೆಗಳಿಗೆ ಯಾವ ರೀತಿ ತಯಾರಿ ಗೊಳಿಸಬೇಕು, ದೈನಂದಿನ ಚಟುವಟಿಕೆ, ಶಿಸ್ತು, ಗೌರವ ತಾಳ್ಮೆ ಈ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವಂತೆ ಹೆತ್ತವರು ತಮ್ಮ...
ಅಜ್ಜಾವರ : ಅಜ್ಜಾವರ ಗ್ರಾಮದ ಕೊರುಂಗು ಬೈಲು ಗದ್ದೆಯಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಭತ್ತದ ನಾಟಿ ಕಾರ್ಯಕ್ರಮವು ನಡೆಯಿತು. ಭತ್ತದ ನಾಟಿ ಕಾರ್ಯಕ್ರಮದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಊರಿನ ನಾಗರಿಕರು ಮಹಿಳೆಯರು ಭಾಗವಹಿಸಿದ್ದು ಭತ್ತದ ನಾಟಿ ಕಾರ್ಯಕ್ರಮಕ್ಕೆ ಸುಳ್ಯ ಕೃಷಿ ನಿರ್ದೇಶಕರಾದ ಗುರುಪ್ರಸಾದ್ ಎಂ ಎಸ್ ರವರು ಆಗಮಿಸಿ ಕೃಷಿಯ...
ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಯೋಗಮುದ್ರಾಸನ ದಲ್ಲಿ 41 ನಿಮಿಷ 02 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ. ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಮತ್ತು 04 ಅಗಸ್ಟ್ 2024 ಆದಿತ್ಯವಾರ ದಂದು ಮೈಸೂರು ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ...
ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರ ಆಡಳಿತ ಅವಧಿ ಮುಗಿದು ಸುಮಾರು ಒಂದೂವರೆ ವರ್ಷಗಳ ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ.20 ಸದಸ್ಯರ ನಗರ ಪಂಚಾಯತ್ನಲ್ಲಿ 14 ಮಂದಿ...
ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33)ಎಂಬವರು ಆ.5 ರಂದು ಬೆಳಿಗ್ಗೆಯಿಂದ ಕಾಣೆಯಾಗಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿದ್ದು, ತಾಯಿ ಮಗಳ ಮನೆಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಹೋದರ ಹರೀಶ ರವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಗುತ್ತಿಗಾರು ಪಂಜ ರಸ್ತೆಯಲ್ಲಿ ಸಿಗುವ ಬಳ್ಳಕ ಸೇತುವೆ ಸಮೀಪ ಹೊಳೆ ಬದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ. ಸದಾಶಿವ ಕುದ್ವ ಅವರು ಈ ರಸ್ತೆಯಲ್ಲಿ ಹೋಗುವಾಗ ಮೊಸಳೆ ಇರುವುದು ಕಂಡುಬಂದಿದೆ. ಮೊಸಳೆ ಹೊಳೆಯ ದಡದಲ್ಲಿ ಮಲಗಿರುವ ಫೋಟೋ ತೆಗೆದು ಹಂಚಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.
ಅಮರ ಮುಡ್ನೂರು ಗ್ರಾಮದ ಕುಕ್ಕುಜಡ್ಕ ನಿವಾಸಿಯಾದ ಆನಂದ ಕುಕ್ಕಜಡ್ಕ ಇವರು ತಲೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಹಣದ ಅವಶ್ಯಕತೆ ಇರುವುದರಿಂದ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಅಮರ ಸಂಘಟನಾ ವತಿಯಿಂದ ಸಾತ್ವಿಕ್ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಸಹಾಯ ನಿಧಿಯನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಹರ್ಷಿತ್ ದಾತಡ್ಕ, ಜಯಪ್ರಸಾದ್ ಸಂಕೇಶ, ಮಿಥುನ್ ಕೆರೆಗದ್ದೆ, ಪ್ರವೀಣ್ ಕುಲಾಲ್,...
Loading posts...
All posts loaded
No more posts
