ಮದ್ಯದ ಅಮಲಿನಲ್ಲಿ ರಸ್ತೆ ಬದಿ ರಿಕ್ಷಾ ನಿಲ್ಲಿಸಿ ಮಲಗಿದ ಚಾಲಕ

ಮದ್ಯಪಾನ ಸೇವಿಸಿ ವಾಹನ ಚಲಾಯಿಸಲು ಸಾಧ್ಯವಾಗದೆ ಮಾಣಿ ಮೈಸೂರ್ ರಾಜ್ಯ ಹೆದ್ದಾರಿಯ ಸುಳ್ಯ ಹಳೆಗೇಟು ನಲ್ಲಿ ಚಾಲಕ ( KA21A 9591) ಮಲಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಆಪೆ ರಿಕ್ಷಾ ಚಾಲಕ ಗುಜಿರಿ ವ್ಯಾಪಾರ ಮಾಡುತ್ತಿದ್ದು ಆರಂಬೂರು ಸಮೀಪದ ಪಾಲಡ್ಕದ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಗಾಂಜ ಸೇವಿಸಿದ್ದಾನೆಂದು ಜನ ಶಂಕೆ ವ್ಯಕ್ತಪಡಿಸಿದ್ದಾರೆ....

ಸಂಸದ ಕ್ಯಾಪ್ಟನ್ ರಿಂದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕಾರ

ಸುಳ್ಯ ನಿರೀಕ್ಷಿಣ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ಸ್ವೀಕರಿಸಿದರು. ಸಾರ್ವಜನಿಕ ಅಹವಾಲುಗಳಲ್ಲಿ ಪ್ರಮುಖವಾಗಿ ರಸ್ತೆ , ನೀರು, ವಿದ್ಯುತ್, ನೆಟ್ವರ್ಕ್  ಸೇರಿದಂತೆ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಮುಖ್ಯವಾಗಿ ಬೆಳ್ಳಾರೆ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಹೊತ್ತು ವೈದ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಅಲ್ಲಿಗೆ ಕಾಯಂ ವೈದ್ಯರ ನೇಮಕವಾಗಬೇಕೆಂದು ಸಾರ್ವಜನಿಕರು ಅಹವಾಲು ನೀಡಿದ್ದು...
Ad Widget

ವರದಿ ಪ್ರಕಟಿಸುವಾಗ ಪತ್ರಿಕಾ ಧರ್ಮ ಅನಾವರಣಗೊಳ್ಳಲಿ – ಸಂಸದ ಬೃಜೇಶ್ ಚೌಟ

ಪತ್ರಿಕೆಯಲ್ಲಿ ಸತ್ಯಾಸತ್ಯತೆ ಬರಬೇಕು - ಶಾಸಕಿ ಭಾಗೀರಥಿ ಮುರುಳ್ಯಗ್ರಹಿಕೆಯ ಕೊರತೆಯಿಂದ ತಪ್ಪು ಸುದ್ದಿ ಪ್ರಕಟವಾಗದಂತೆ ಎಚ್ಚರಿಕೆ ವಹಿಸಿ - ಅಜ್ಜಮಾಡ ರಮೇಶ್ ಕುಟ್ಟಪ್ಪಪ್ರಜಾಪ್ರಭುತ್ವದ ಎಲ್ಲ‌ ಅಂಗಗಳಿಗೆ ಕನ್ನಡಿ ಹಿಡಿದು ಸರಿತಪ್ಪುಗಳನ್ನು ಎತ್ತಿ ತೋರಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿಕೊಂಡಿರುವ ಪತ್ರಿಕೆಗಳು ವರದಿ ಪ್ರಕಟಿಸುವ ವೇಳೆ ಸತ್ಯ, ಧರ್ಮ, ನ್ಯಾಯ, ಪತ್ರಿಕಾಧರ್ಮ  ಅನಾವರಣವಾಗುವಂತಾಗಬೇಕು ಎಂದು ಸಂಸದ ಕ್ಯಾ....

ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಓಡಾಟಕ್ಕಾಗಿ ಸಂಸದರಿಗೆ ಮನವಿ 

ಹಲವು ವರ್ಷಗಳ ರೈಲ್ವೆ ಬೇಡಿಕೆಯಾದ ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ಸಂಜೆ ಮತ್ತು ಬೆಳಿಗ್ಗೆ ಪ್ಯಾಸೆಂಜರ್ ರೈಲು  ಓಡಿಸಬೇಕೆಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ದ.ಕ. ಸಂಸದ ಬ್ರಿಜೇಶ್ ಚೌಟ ಇವರಿಗೆ ಮನವಿ ಸಲ್ಲಿಸಿದ್ದಾರೆ. 2023 ಡಿಸೆಂಬರ್ ನಲ್ಲಿ ಮೈಸೂರು ಡಿ ಆರ್ ಎಂ ಮತ್ತು ಪಾಲಘಡ್ ಡಿ ಆರ್ ಎಂ...

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ  ಪತ್ರಕರ್ತ ಜೆ ಕೆ ರೈಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ಸುಳ್ಯ : ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಜೆ ಕೆ ರೈ ರವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕಾರ್ , ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ...

ಜು.11ರಂದು ಸುಬ್ರಹ್ಮಣ್ಯದ ವಿವಿಧ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಸುಬ್ರಹ್ಮಣ್ಯ 33/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಜು.11 ಗುರುವಾರದಂದು ತುರ್ತು ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಪ್ರಕಟಣೆಯಲ್ಲಿ...

ಪತ್ರಿಕಾ ದಿನಾಚರಣೆ, ಸುದ್ದಿ ಪ್ರಕಟದ ಸಂದರ್ಭ ಸತ್ಯ, ಧರ್ಮ, ನ್ಯಾಯದ ಅನಾವರಣವಾಗಲಿ – ಸಂಸದ ಬೃಜೇಶ್ ಚೌಟ

ಸುಳ್ಯ: ಪ್ರಜಾಪ್ರಭುತ್ವದ ಎಲ್ಲಾ ಅಂಗಗಳಿಗೆ ಕನ್ನಡಿ ಹಿಡಿದು ಸರಿತಪ್ಪುಗಳನ್ನು ಎತ್ತಿ ತೋರಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿಕೊಂಡಿರುವ ಪತ್ರಿಕೆಗಳು ವರದಿ ಪ್ರಕಟಿಸುವ ವೇಳೆ ಸತ್ಯ, ಧರ್ಮ, ನ್ಯಾಯದ ಅನಾವರಣವಾಗುವಂತಾಗಬೇಕು ಎಂದು ಸಂಸದ ಕ್ಯಾ. ಬೃಜೇಶ್ ಚೌಟ ಹೇಳಿದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕನ್ನಡ ಭವನದಲ್ಲಿ ಬುಧವಾರ ಆಯೋಜಿಸಲಾದ ಪತ್ರಿಕಾ ದಿನಾಚರಣೆ,...

ಪಂಜ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪಂಜ ಲಯನ್ಸ್ ಕ್ಲಬ್ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.9 ರಂದು ಪಡ್ಪಿನಂಗಡಿ ನಡ್ಕ ಶಿವ ಗೌರಿ ಕಲಾಮಂದಿರದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಪಂಜ ಲಯನ್ಸ್ ಕ್ಲಬ್ ನ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು  ವಹಿಸಿದ್ದರು.ಪದಗ್ರಹಣ ಅಧಿಕಾರಿ ಲಯನ್ಸ್ ಜಿಲ್ಲೆ ಪ್ರಥಮ ಉಪರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದಗ್ರಹಣ ಸ್ವೀಕರಿಸಿದ...

ರಕ್ಷಕ ಶಿಕ್ಷಕ ಸಂಘದ ಮಕ್ಕಳ ಸುರಕ್ಷಾ ಸಮಿತಿಯ ಉಪಾಧ್ಯಕ್ಷರಾಗಿ ಪುಷ್ಪರಾಜ ಗಾಂಭೀರ ದೇಶಕೋಡಿಗುತ್ತು

ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ರಕ್ಷಕ -ಶಿಕ್ಷಕ ಸಂಘದ ಮಹಾಸಭೆಯು ಜು. 06 ರಂದು ಪುತ್ತೂರು ಬೆಥನಿ ಶಿಕ್ಷಣ ಸಂಸ್ಥೆಗಳ ಸಂಚಾಲಕಿ ಸಿಸ್ಟರ್ ಪ್ರಶಾಂತಿರವರ ನೇತೃತ್ವದಲ್ಲಿ ನಡೆಯಿತು. ಸಭೆಯ ಮುಖ್ಯ ಅತಿಥಿಯಾಗಿ, ಶ್ರೀ ರಾಮಚಂದ್ರ ಪದವಿ ಪೂರ್ವ ಕಾಲೇಜು ಪೆರ್ನೆಯ ಪ್ರಾಂಶುಪಾಲರಾದ ಶ್ರೀಯುತ ಶೇಖರ್ ರೈ. ಕೆ., ಇವರು ಮಾತನಾಡಿ ಮಕ್ಕಳ...

ಸುಳ್ಯ : ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಜೆ.ಕೆ.ರೈ ಅವರಿಗೆ ಸನ್ಮಾನ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜು.10ರಂದು ಅಂಬಟೆಡ್ಕದ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಿದ್ದರು.  ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಜೆ.ಕೆ.ರೈಯವರನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಸನ್ಮಾನಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ...
Loading posts...

All posts loaded

No more posts

error: Content is protected !!