- Saturday
- July 25th, 2026
ದ. ಕ ಸಂಪಾಜೆ ವ್ಯಾಪ್ತಿಯಲ್ಲಿನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಗೂನಡ್ಕದ ದರ್ಕಾಸ್ ಮನೆಯ ತಡೆಗೋಡೆ ಕುಸಿದ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಭಾರತಿಯವರ ಮನೆಯ ತಡೆಗೋಡೆ ಜರಿದಿದೆ.
ಗುತ್ತಿಗಾರು ಗ್ರಾಮದ ಪೈಕ ದಿ. ರಾಮಕೃಷ್ಣ ಇವರ ಪತ್ನಿ ಮಾಲತಿ ಜೂ. 29ರಂದು ಹೃದಯಘಾತ ದಿಂದ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ಭುವನೇಶ್ವರ, ಧನಂಜಯ, ಸೊಸೆ ಗೀತಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸುಳ್ಯ: ಸುಳ್ಯ ನಗರದಲ್ಲಿ ವಾಹನ ದಟ್ಟನೆ ಹೆಚ್ಚಿದ್ದು ಪದೇ ಪದೇ ಟ್ರಾಫಿಕ್ ಸಮಸ್ಯೆಗಳು ಉಲ್ಬಣಿಸಿ ರಸ್ತೆ ಸಂಚಾರದಲ್ಲಿ ಗೊಂದಲ ಮತ್ತು ಟ್ರಾಫಿಕ್ ಜಾಮ್ ತಪ್ಪಿಸುವ ಮತ್ತು ಮುಂಜಾಗ್ರತೆ ಕುರಿತ ಸಭೆಯು ಸುಳ್ಯ ಠಾಣಾಧಿಕಾರಿ ಸರಸ್ವತಿ ಯವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಅಟೋ ಚಾಲಕರಿಗೆ ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರಲ್ಲದೆ ರಾತ್ರಿಯಲ್ಲಿ ಸಂಚಾರ ವೇಳೆಗೆ ಪ್ರಯಾಣಿಕರ ಕುರಿತು...
ಮಡಪ್ಪಾಡಿಯ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜು.3 ) ವರದಿಯಾಗಿದೆ.ಮೃತರನ್ನು ಸೀತಾರಾಮ 55 ವರ್ಷ ಎಂದು ಗುರುತಿಸಲಾಗಿದೆ. ಆರ್ಥಿಕ ಸಂಕಷ್ಟದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಅಡಿಕೆ ತೋಟಕ್ಕೆ ಹಳದಿ ರೋಗ ಬಾಧಿಸಿದ್ದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು.
ಸುಳ್ಯ: ಸುಳ್ಯ ನಗರದಲ್ಲಿ ಅತ್ಯಂತ ಸುಂದರವಾಗಿ ನಿರ್ಮಿಸಿದ್ದ ಕುರುಂಜಿಗುಡ್ಡೆ ಪಾರ್ಕ್ ಇದೀಗ ನಿರ್ವಾಹಣೆ ಮಾಡದೇ ಇದ್ದು ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿ ಇಡೀ ಸುಳ್ಯದ ನಾಗರೀಕರು ಆಕ್ರೋಶ ವ್ಯಕ್ತಪಡಿಸುವಂತಾಗಿದೆ. ಪ್ರಕೃತಿಯ ರಮಣೀಯತೆ, ತೋಟಗಳ ಸೌಂದರ್ಯ ರಾಶಿ ಜತೆಗೆ ನಗರದ ವಿಹಂಗಮ ನೋಟ ಹೊಂದಿರುವ ಸುಳ್ಯ ನಗರದ ಅತೀ ಎತ್ತರದ ಪ್ರದೇಶದಲ್ಲಿ ಕುರುಂಜಿಗುಡ್ಡೆ ಎಂಬಲ್ಲಿ ನಗರ ಪಂಚಾಯತ್ ಕೆಲ...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕುರುಂಜಿಗುಡ್ಡೆ ಪಾರ್ಕ್ ಗೆ ಸಮಯ ನಿಗದಿ ಪಡಿಸಿ ನಾಮಫಲಕ ಅಳವಡಿಸುವಂತೆ ಕೇರ್ಪಳ ಪಯಸ್ವಿನಿ ಯುವಕ ಮಂಡಲದ ವತಿಯಿಂದ ನ.ಪಂ. ಆಡಳಿತಾಧಿಕಾರಿ ಗಳಿಗೆ ಮನವಿ ಜು.1 ರಂದು ಸಲ್ಲಿಸಲಾಯಿತು.ನ.ಪಂ. ವತಿಯಿಂದ ಕೆಲವು ವರ್ಷಗಳ ಹಿಂದೆ ಪಾರ್ಕ್ ನಿರ್ಮಾಣ ಮಾಡಲಾಗಿದ್ದು, ಅಲ್ಲಿ ಆಕರ್ಷಕ ಗಿಡಗಳನ್ನು ನೆಡಲಾಗಿದೆ. ಕುಳಿತುಕೊಳ್ಳಲು ಸಿಮೆಂಟ್ ಬೆಂಚುಗಳನ್ನು ಅಳವಡಿಸಲಾಗಿದೆ. ಮಕ್ಕಳಿಗೆ...
ಇಳೆಯು ಮಳೆಯನ್ನು ಮನತುಂಬಿ ಕರೆದಿದೆ, ಇಳೆಯ ಕರೆಗೆ ಮಳೆಯು ಧರೆ ತುಂಬಾ ಸುರಿದಿದೆ...ರಾತ್ರಿ-ಹಗಲೆನ್ನದೇ ಸುರಿಯುತ್ತಿರುವ ಈ ಮಳೆಗೆ ತುಂಬಿ ಹರಿಯುತ್ತಿವೆ ನದಿ-ಹಳ್ಳಗಳೆಲ್ಲಾ, ನದಿಯ ಬಳಿ ತೆರಳುವಾಗ ಎಚ್ಚರವಹಿಸಬೇಕು ನಾವೆಲ್ಲಾ...ರಸ್ತೆಯಲ್ಲಿ ಸಾಗುವಾಗಲೂ, ಮನೆಯ ಹೊರಗಡೆ ನಡೆಯುವಾಗಲೂ ಜಾಗ್ರತೆ ವಹಿಸಲೇಬೇಕಿದೆ ಈ ಮಳೆಗಾಲದಲ್ಲಿ, ಕೆಸರು ತುಂಬಿದ ರಸ್ತೆಯಲ್ಲಿ, ಪಾಚಿ ತುಂಬಿದ ಮನೆಯಂಗಳದಲ್ಲಿ...ಮಳೆಗಾಲದಲ್ಲಿ ಆದಷ್ಟು ಹೋಗದಿರಿ ಪ್ರವಾಸವನ್ನ, ತುಂಬಿ ಹರಿಯುತ್ತಿರುವ...
ಪೈಕ ಶ್ರೀ ಶಿರಾಡಿ ದೈವಸ್ಥಾನದ ಎದುರುಗಡೆ ಬೃಹತ್ ಕಿನ್ನಿಗೋಳಿ ಮರ ಬಿದ್ದು ಸಾರ್ವಜನಿಕ ದಾರಿಗೆ ತೊಂದರೆಯಾಗಿತ್ತು. ದಾರಿಗೆ ಬಿದ್ದ ಮರದ ಗೆಲ್ಲು ಬಿದ್ದ ಗೆಲ್ಲುಗಳನ್ನು ಗುತ್ತಿಗಾರು ಶೌರ್ಯ ವಿಪತ್ತು ಘಟಕದ ಸದಸ್ಯರು ತೆರವುಗೊಳಿಸಿದರು. ಈ ಶ್ರಮದಾನದಲ್ಲಿ ಶೌರ್ಯ ವಿಪತ್ತು ಘಟಕದ ಸಂಯೋಜಕರಾದ ಲೋಕೇಶ್ವರ ಡಿ ಆರ್, ಸದಸ್ಯರುಗಳಾದ ಪಿ ಜಯರಾಮ, ಅಚ್ಯುತ ಗುತ್ತಿಗಾರು, ಸತೀಶ್ ಮೂಕಮಲೆ,...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ 2024 --25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭವು ಜು.02ರಂದು ನಡೆಯಿತು. ವಿದ್ಯಾರ್ಥಿ ಸರಕಾರದ ರಾಜ್ಯಪಾಲರು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಯಶೋಧರ ಎನ್ ಸಮಾರಂಭದಲ್ಲಿ ಭಾಗವಹಿಸಿ ಸಭಾಪತಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಪುಟ ದರ್ಜೆಯ ಸಚಿವರು ಮತ್ತು ಸಹಾಯಕ ಸಚಿವರುಗಳಿಗೆ ಶಾಲಾ ಸಂವಿಧಾನದಂತೆ ಪಂಚ ಭಾಷೆಗಳಾದ ಸಂಸ್ಕೃತ, ಕನ್ನಡ, ಇಂಗ್ಲಿಷ್,...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಪದಗ್ರಹಣ ಸಮಾರಂಭ ಹಾಗೂ ಚಾರ್ಟರ್ ನೈಟ್ ಸಮಾರಂಭವು ಜು.01 ರಂದು ಏನೆಕಲ್ ನ ಸಂತೃಪ್ತಿ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317 ಡಿ ದ್ವಿತೀಯ ಉಪ ರಾಜ್ಯಪಾಲ ಹೆಚ್. ಎಂ. ತಾರಾನಾಥ್ ಪದಗ್ರಹಣ ನೆರವೇರಿಸಿಕೊಟ್ಟರು. ಚಾರ್ಟರ್ ನೈಟ್ ಕಾರ್ಯಕ್ರಮವನ್ನು ಪೂರ್ವ ರಾಜ್ಯಪಾಲ...
Loading posts...
All posts loaded
No more posts
