ಪತ್ನಿಗೆ ಚೂರಿಯಿಂದ ಇರಿದ ಪತಿ –  ಪ್ರಕರಣ ದಾಖಲು

ತವರು ಮನೆಗೆ ಬಂದಿದ್ದ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪತಿ ಕೊನೆಗೆ ಚೂರಿಯಿಂದ ಇರಿದ ಘಟನೆ ನಡೆದಿದ್ದು, ಮಹಿಳೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಜಾಲ್ಸೂರು ನಿವಾಸಿ ಅಶ್ವಿನಿ  ಎಂಬವರು ಕಳೆದ 6 ವರ್ಷಗಳ ಹಿಂದೆ ನವೀನ್ ಕುಮಾರ್ ಎಂಬಾತನನ್ನು ವಿವಾಹವಾಗಿದ್ದರು. ಮದುವೆಯ ನಂತರ ಪತಿ ವಿನಃ ಕಾರಣ ಪತ್ನಿಗೆ ಕಿರುಕುಳ ನೀಡುತ್ತಾ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುವಿನ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗಾಂಧಿನಗರ ಕಾರ್ಯಕ್ಷೇತ್ರದ ಸದಸ್ಯರಿಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯ ವಲಯದ ಅಧ್ಯಕ್ಷರಾದ ಮನೋಹರರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಭವಾನಿ ಶಂಕರ ಅಡ್ತಲೆಯವರು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ,...
Ad Widget

ಕೆವಿಜಿ ಐಪಿಎಸ್ ನ ಮಕ್ಕಳ ಕೆಸರುಗದ್ದೆ ಹಬ್ಬ

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳಿಗೆ ಮರ್ಕಂಜದ ಜಗದೀಶ  ರೈ  ಪಟ್ಟೆ  ಇವರ ಗದ್ದೆಯಲ್ಲಿ ಜೂ .29 ರಂದು ಕೆಸರುಗದ್ದೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು.      ಕಾರ್ಯಕ್ರಮವನ್ನು ಪ್ರಾರ್ಥನೆಯ ಮೂಲಕ ಆರಂಭಿಸಲಾಯಿತು....

ಬದುಕಿಗೆ ಭರವಸೆ ನೀಡುವ ವೈದ್ಯ ನಾರಾಯಣನಿಗೆ ನಮನ

ಜುಲೈ 1, 1882ರಂದು ಭಾರತ ಕಂಡ ಮಹಾನ್ ವೈದ್ಯ, ಪ್ರಾಮಾಣಿಕ ರಾಜಕಾರಣಿ ಅಪ್ರತಿಮ ದೇಶಸೇವಕ ಮತ್ತು ಮಹಾನ್ ಸ್ವಾತಂತ್ರ ಹೋರಾಟಗಾರ, ಶಿಕ್ಷಣ ತಜ್ಞ ಡಾ| ಬಿದನ್ ಚಂದ್ರ ರಾಯ್ ಜನ್ಮವೆತ್ತ ದಿನ. ಈ ಮಹಾನ್ ಚೇತನದ ನೆನಪಿನ ಕುರುಹಾಗಿ ದೇಶದ್ಯಾಂತ ಜುಲೈ 1ರಂದು ವೈದ್ಯರ ದಿನ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಮಾರು 80 ವರ್ಷಗಳ ಕಾಲ...

ಶ್ರೀ ಭಗವತಿ ಯುವ ಸೇವಾ ಸಂಘ ಮಹಾಸಭೆ – ನೂತನ ಅಧ್ಯಕ್ಷರಾಗಿ ಸುನಿಲ್ ಕೇರ್ಪಳ – ಕಾರ್ಯದರ್ಶಿಯಾಗಿ ರಾಜೇಶ್ ಕುರುಂಜಿಗುಡ್ಡೆ ಆಯ್ಕೆ – ಗೌರವಾಧ್ಯಕ್ಷರಾಗಿ ಬೂಡು ರಾಧಾಕೃಷ್ಣ ರೈ

ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ, ಬೂಡು- ಕೇರ್ಪಳ- ಕುರುಂಜಿಗುಡ್ಡೆ ಇದರ ಮಹಾಸಭೆಯು ಇಂದು ಜರುಗಿತು. ಸಂಘದ ನಿರ್ಗಮಿತ ಕಾರ್ಯದರ್ಶಿ ವಾಸುದೇವ ನಾಯಕ್ ಸ್ವಾಗತಿಸಿದರು. ಸಂಘದ ನಿರ್ಗಮಿತ ಅಧ್ಯಕ್ಷರು ಕಳೆದ ಅವಧಿಯ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಖಜಾಂಜಿಗಳಾದ ಮಹಾಬಲ ರೈ ಬೂಡು ಇವರು ಲೆಕ್ಕಪತ್ರಗಳನ್ನು ಮಂಡಿಸಿದರು. ಬಳಿಕ...

ವಿಶ್ವ ಹಿಂದೂ ಪರಿಷತ್ ನ ಕೊಲ್ಲಮೊಗ್ರ ಗ್ರಾಮ ಸಮಿತಿ ಸಭೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಇದರ ಕೊಲ್ಲಮೊಗ್ರ ಗ್ರಾಮ ಸಮಿತಿಯ ನೂತನ ಸಮಿತಿಯ ಜವಾಬ್ದಾರಿ ಘೋಷಣೆಯ ಕುರಿತಾದ ಬೈಠಕ್ ಕೊಲ್ಲಮೊಗ್ರ ಭಜನಾಮಂದಿರ ಸಭಾಂಗಣದಲ್ಲಿ ಇಂದು ನಡೆಯಿತು.ಈ ಸಂದರ್ಭದಲ್ಲಿ, ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಸತ್ಸಂಗ ಪ್ರಮುಖ್...

ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಾರ್ಷಿಕ ಸಭೆ

ಸಾಂಸ್ಕೃತಿಕ ಸಂಘ (ರಿ )ಹಳೆಗೆಟು ಸುಳ್ಯ ಇದರ ವಾರ್ಷಿಕ ಸಭೆ ಇಂದು ಹಳೆಗೆಟಿನ ವಸಂತಕಟ್ಟೆಯಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀನಿವಾಸ್ ರಾವ್ ನೇತೃತ್ವದಲ್ಲಿ 41ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಮೂರು ದಿನದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಕಾರ್ಯಕ್ರಮದ ಕೊನೆಯ ದಿನ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ವೈಭವದ ಶೋಭಾಯಾತ್ರೆ ನಡೆಸುವುದೆಂದು ತೀರ್ಮಾನಿಸಲಾಯಿತು. ಸಂಘದ...

ಸುಳ್ಯ: ಗೌಡರ ಯುವ ಸೇವಾ ಸಂಘದ ಮಹಾಸಭೆ – ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಗೌಡರ ಯುವ ಸೇವಾ ಸಂಘ ಸುಳ್ಯ, ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಸುಳ್ಯ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು.ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯ ವೆಂಕಟರಮಣ ಕ್ರೆಡಿಟ್...

ಅಕ್ವಾ ಇಂಜಿನಿಯರ್‍ಸ್ ಪ್ರೈವೇಟ್ ಲಿಮಿಟೆಡ್ ಸುಳ್ಯದಲ್ಲಿ ಶುಭಾರಂಭ

ಬೆಂಗಳೂರು ಅಕ್ವಾ ಸಲ್ಯೂಶನ್ ಇಂಜಿನಿಯರ್‍ಸ್ ಪ್ರೈವೇಟ್ ಲಿಮಿಟೆಡ್ ಇದರ ಸುಳ್ಯದ ಶಾಖೆಯು ಜೆಪಿ ಬಿಲ್ಡಿಂಡ್ ಅಂಬೆಟೆಡ್ಕದಲ್ಲಿ ಜೂ.೩೦ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯದ ವರ್ತಕ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ರವರು ಉದ್ಘಾಟಿಸಿದರು. ದೀಪ ಪ್ರಜ್ವಲನೆಯನ್ನು ದಾಮೋದರ ಗೌಡ ಕುಯಿಂತೋಡು ಮತ್ತು ಕೆ.ಆರ್ ಗಂಗಾಧರ್ ನಿವೃತ್ತ ಪ್ರಾಂಶುಪಾಲರು, ಎನ್ ಎಮ್ ಪಿ ಯು ಅರಂತೋಡು ಇವರು...

ಸುಬ್ರಹ್ಮಣ್ಯ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುಬ್ರಹ್ಮಣ್ಯ ದೇವಸ್ಥಾನದ ಉತ್ತರಾಧಿಮಠದ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!