ಕನಕಮಜಲು : ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆಗಳ ತೆರವು – ಗ್ರಾಮಸ್ಥರ ಸಹಕಾರ

ಕನಕಮಜಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆ ಕೊಂಬೆ ಗಳನ್ನು ತೆರವುಗೊಳಿಸಲಾಯಿತು. ಮೆಸ್ಕಾಂ ಸಿಬ್ಬಂದಿಗಳ ಜತೆ ಕನಕಮಜಲು ಯುವಕ ಮಂಡಲದ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸಿದರು.

ಬೆಳ್ಳಾರೆ : ಅಮರ ಸಂಘಟನಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಅಮರ ಸಂಘಟನಾ ಸಮಿತಿ ಸುಳ್ಯ ಮತ್ತು ಅರಕ್ಷಕ ಠಾಣೆ ಬೆಳ್ಳಾರೆ ಇದರ ಸಹಯೋಗದಲ್ಲಿ ಕಾಡು ಬೆಳಿಸಿ ನಾಡು ಉಳಿಸಿ ಎಂಬ ಧೈಯ ವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಜೂ.09 ರಂದು ಆರಕ್ಷಕ ಠಾಣೆ ಬೆಳ್ಳಾರೆಯಲ್ಲಿ ಆಚರಿಸಲಾಯಿತು.   ಈ ಸಂದರ್ಭದಲ್ಲಿ ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ  ಮುಕ್ಕೂರು, ಪ್ರಗತಿಪರ ಕೃಷಿಕ...
Ad Widget

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್ ಪಿ ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸ್ವರ ಮಾಂತ್ರಿಕ, ಗಾನಗಂಧರ್ವ,  ಪದ್ಮಭೂಷಣ ಡಾ. ಎಸ್ ಪಿ ಬಾಲಸುಬ್ರಮಣ್ಯಂ ಅವರ 78ನೇ ಜನ್ಮದಿನಾಚರಣೆಯ ಪ್ರಯುಕ್ತ ಎಸ್ ಪಿ ಬಿ ಸಂಗೀತ ಸಂಭ್ರಮ ಕಾರ್ಯಕ್ರಮವು ಸುಳ್ಯದ  ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದ ವೇದಿಕೆಯಲ್ಲಿ ಜೂನ್ 9ರಂದು ಜರುಗಿತು.ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು, ಗಾಯಕರು...

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆ ಚೆಂಬು ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಸತತವಾಗಿ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಗಳಾಗಿ ನರೇಂದ್ರ ದಾಮೋಧರ್ ದಾಸ್ ಮೋದಿ ಪದಗ್ರಹಣ ಹಿನ್ನಲೆಯಲ್ಲಿ  ಚೆಂಬು ಗ್ರಾಮದ ಬಾಲಂಬಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೂ.9ರಂದು ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಬಿಜೆಪಿ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀನಿವಾಸ ನಿಡಿಂಜಿ ಸೇರಿದಂತೆ ಹಲವಾರು ಮಂದಿ...

ಸುಳ್ಯ ಎನ್ನೆoಪಿಯುಸಿಯಲ್ಲಿ “ಪರಿಸರ ದಿನಾಚರಣೆ”ಯ ಅಂಗವಾಗಿ ಕಾರ್ಯಕ್ರಮ

ಪ್ರಕೃತಿ ಮತ್ತು ಮಾನವ ಸಂಬಂಧ ಚೆನ್ನಾಗಿರಬೇಕು. ಕಾಡಿನ ನಾಶದಿಂದ ಪ್ರಾಣಿ ಪಕ್ಷಿಗಳು ನಾಡಿಗೆ ಬರುತ್ತಿವೆ.ಅವುಗಳ ರಕ್ಷಣೆ ಮಾಡಬೇಕು.ಹಾವುಗಳನ್ನು ಅವುಗಳ ಮೊಟ್ಟೆಗಳನ್ನು ರಕ್ಷಿಸಬೇಕು.ಅವುಗಳ ಸಂತತಿ ಕ್ಷೀಣವಾಗಬಾರದು  ಎಂದು  ಉರಗ ತಜ್ಞ ತೇಜಸ್ ಪುತ್ತೂರು ಹೇಳಿದರು.ವಿಷಕಾರಿ,ವಿಷಕಾರಿಯಲ್ಲದ ಹಾವುಗಳ ಮಾಹಿತಿ,ಮುಂಜಾಗ್ರತೆ,ಹಾವು ಕಡಿದಾಗ ತತ್ ಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.ಅವರು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ...

ಸುಳ್ಯದ  ಚಂದನ ಸಾಹಿತ್ಯ ವೇದಿಕೆಯಿಂದ ಮುಂಗಾರು ಕವಿಗೋಷ್ಠಿ ಮತ್ತು ಕೃತಿ ಬಿಡುಗಡೆ

ಜೂ . 09 ರಂದು ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಮುಂಗಾರು ಕವಿಗೋಷ್ಠಿ ಮತ್ತು ಧಾರ್ಮಿಕ ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ಜ್ಯೋತಿಷ್ಯರು, ಗಾಯಕರು, ಚಿತ್ರ ನಿರ್ದೇಶಕರಾದ ಎಚ್ ಭೀಮರಾವ್ ವಾಷ್ಠರ್ ರವರು ವಹಿಸಿದ್ದರು. ಉದ್ಘಾಟನೆಯನ್ನು ಚೈತನ್ಯ ಸೇವಾಶ್ರಮ ಇದರ...

ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ – ರಾಜ್ಯದ ನಾಲ್ವರಿಗೆ ಸಚಿವ ಭಾಗ್ಯ

ಭವ್ಯ ಭಾರತದ ನೂತನ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜತೆಗೆ ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಷಿ, ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ ಮತ್ತು ಶೋಭ ಕರಂದ್ಲಾಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎನ್.ಡಿ.ಎ. ನೇತೃತ್ವದ ಮೋದಿ ಸರಕಾರದಲ್ಲಿ ಸಚಿವರಾಗಲಿರುವ ರಾಜನಾಥ್ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ, ಪ್ರಕಾಶ್ ನಡ್ಡಾ, ಶಿವರಾಜ್...

ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿ ಪದಗ್ರಹಣ ಹಿನ್ನಲೆ ಸುಳ್ಯ ತಾಲೂಕಿನಾಧ್ಯಂತ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ.‌

ಸುಳ್ಯ: ನವದೆಹಲಿಯಲ್ಲಿ ಸತತವಾಗಿ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಗಳಾಗಿ ನರೇಂದ್ರ ದಾಮೋಧರ್ ದಾಸ್ ಮೋದಿ ಪದಗ್ರಹಣ ಹಿನ್ನಲೆಯಲ್ಲಿ ತಾಲೂಕಿನಾಧ್ಯಂತ ಸಂಭ್ರಮಾಚರಣೆಯನ್ನು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ನಡೆಸಲಾಯಿತು.ಸುಳ್ಯ ನಗರ ಶಕ್ತಿ ಕೇಂದ್ರದ ವತಿಯಿಂದ ಫೈಚಾರ್ ಸರ್ಕಲ್ ನಲ್ಲಿ ಸಂಭ್ರಮಾಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ,ದಾಮೋದರ...

ಪೆರುವಾಜೆ: ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಗಳ ತೆರವು

ಪೆರುವಾಜೆ ಗ್ರಾಮದ ಪೆರುವಾಜೆ-ಮಠತ್ತಡ್ಕದಲ್ಲಿ ಹಾದು ಹೋಗುವ ವಿದ್ಯುತ್ ಲೈನಿಗೆ ತಾಗಿಕೊಂಡಿರುವ ಮರಗಳನ್ನು ಶೌರ್ಯ ವಿಪತ್ತು ತಂಡದಿಂದ ಜೂ.09ರಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರುಗಳಾದ ರಮೇಶ್ ಮಠತ್ತಡ್ಕ, ಶೇಷಪ್ಪ ಮಠತ್ತಡ್ಕ, ಸುಂದರ ನಾಯ್ಕ್, ನಾರಾಯಣ ಮಠತ್ತಡ್ಕ, ರಾಜೇಶ್ ಮಠತ್ತಡ್ಕ, ಪುರುಷೋತ್ತಮ್ ನಾಯ್ಕ್ , ವೆಂಕಪ್ಪ ನಾಯ್ಕ, ಸೀತಾರಾಮ ಆಚಾರ್ಯ,ಯಶವಂತ್, ರಾಜೇಶ್ ಸಾರಕರೆ, ಲೈನ್ ಮಾನ್ ವಸಂತ...

ಸುಬ್ರಹ್ಮಣ್ಯದಲ್ಲಿ ಸೀನಿಯರ್ ಚೇಂಬರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಸುಬ್ರಹ್ಮಣ್ಯ ,ಜೂನ್ 9: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ರವಿವಾರ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಟಾರದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲೀಜನ್ ಹಾಗೂ ರವಿಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ವತಿಯಿಂದ ಜಂಟಿಯಾಗಿ ಕಾರ್ಯಕ್ರಮ...
Loading posts...

All posts loaded

No more posts

error: Content is protected !!