- Sunday
- July 26th, 2026
ಹಾಸನ: ಹಾಸನ ಲೋಕಸಭಾ ಅಭ್ಯರ್ಥಿಗಳಲ್ಲಿ ಹಾವು ಏಣಿ ಆಟ ಮುಂದುವರೆದಿದ್ದು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇದೀಗ ಎಸ್ ಐ ಟಿ ವಶದಲ್ಲಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಫೈಟ್ ನಡೆಯುತ್ತಿದ್ದು ಇಲ್ಲಿ ಭಾರಿ ಕುತೂಹಲ ಮೂಡಿಸಿದ್ದು ಹಾವು ಏಣಿ ಆಟ ಮುಂದುವರೆದಿದೆ.
ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾರಿ ಕುತೂಹಲ ಮೂಡಿಸಿ ಈಶ್ವರಪ್ಪ ಸ್ಪರ್ಧೆ ಯಾವುದೇ ಪರಿಣಾಮ ಬೀರಿದಂತಿಲ್ಲ. ಇದೀಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸುತ್ತಿದ್ದು ಇಲ್ಲಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದು ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು ಮತ ಎಣಿಕೆ ನಡೆಯುತ್ತಿದ್ದು ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೈಸೂರಿನ ಮಹಾರಾಜ ಯದುವೀರ್ ಒಡೆಯರ್ 85 ಸಾವಿರ ಮತಗಳ ಮುನ್ನಡೆಯಲ್ಲಿದ್ದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹೋದರ ಡಿ ಕೆ ಸುರೇಶ್ ರವರ ಆಡಳಿದ ವಿರುದ್ದವಾದ ಅಲೆ ಕಾಣಿಸುತ್ತಿದ್ದು ಕನಕಪುರ ಬಂಡೆಯನ್ನು ಒಡೆಯುವಲ್ಲಿ ಇದೀಗ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಯಶಸ್ವಿಯಾಗಿದ್ದು, ಸುಮಾರು ಒಂದು ಲಕ್ಷದ ಅಧಿಕ ಮತಗಳನ್ನು ಪಡೆದಿದ್ದು ಗೆಲುವಿನ ಸಮೀಪಕ್ಕೆ ದಾಪುಗಾಲು ಇಡುತ್ತಿದ್ದಾರೆ.
ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಭಾರಿ ನಿರೀಕ್ಷೆ ಹೊಂದಿದ್ದು ಇದೀಗ ಬರುತ್ತಿರುವ ಚಿತ್ರಣಗಳ ಪ್ರಕಾರ ಭಾರಿ ಹೊರೆತ ನೀಡಿದಂದತಿದ್ದು ಕೇಂದ್ರದಲ್ಲಿ ಬಿಜೆಪಿ 232, ಕಾಂಗ್ರೆಸ್ 97 ಎರಡಂಕಿಯಲ್ಲಿದ್ದು , ಎಸ್ ಪಿ 34, ಇತರೆ 69 ಇದ್ದು ಒಟ್ಟಾರೆಯಾಗಿ ಈಗಿನ ಸ್ಥಿತಿಯಲ್ಲಿ ಬಿಜೆಪಿ ಏಕ ಪಕ್ಷವಾಗಿ ಅಧಿಕಾರಕ್ಕೆ ಏರಲು ಇನ್ನು ಹಲವು ಸ್ಥಾನಗಳು ಬೇಕಾಗಿದ್ದು...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಮೊದಲ ಸುತ್ತಿನಿಂದಲೇ ಅಂತರ ಕಾಯ್ದುಕೊಂಡು ಬಂದಿದ್ದು ಇದೀಗ ತಮ್ಮ ಅಂತರವನ್ನು ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಐವತ್ತು ಸಾವಿರ ಹೆಚ್ಚಿಸಿಕೊಂಡಿದ್ದು ಗೆಲುವಿನ ನಗೆ ಬೀರುವುದು ನಿಚ್ಚಳವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತ ಎಕ್ಸಿಟ್ ಪೋಲ್ ಗಳಿಗೆ ಒಂದು ರೀತಿಯಲ್ಲಿ ವ್ಯತಿರಿಕ್ತ ಫಲಿತಾಂಶ ಬರುತ್ತಿದ್ದು ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಸುತ್ತಿನಿಂದಲೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಕೇರಳದಲ್ಲಿ ಒಂದು ಖಾತೆಯನ್ನು ಬಿಜೆಪಿ ತೆರೆಯುವ...
ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದ ಘಟನೆ ಬಿಳಿನೆಲೆ ಗ್ರಾಮದ ಕೈಕಂಬ ಬಾಲಡ್ಕದಲ್ಲಿ ನಿನ್ನೆ ಸಂಜೆ ಜೂನ್ (3ರಂದು) ಸಂಭವಿಸಿದೆ. ಬಿಳಿನೆಲೆ ಗ್ರಾಮದ ಕೈಕಂಬ ಬಾಲಡ್ಕ ಯಶೋಧರರವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಮನೆಯ ಕಿಟಕಿ, ಸ್ವಿಚ್ ಬೋರ್ಡ್, ಹಾಗೂ ಮನೆಯ ಗೋಡೆಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.
ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಪಂಬೆತ್ತಾಡಿ ಗ್ರಾಮ ನೆಕ್ರಕಜೆ ರವಿ ಪ್ರಸಾದ್ ಅವರ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದ ಘಟನೆ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಡಾ.ಸಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಗೀತಾ ಜಿ. ಗುಡ್ಡೆಮನೆ ಅವರು ಮಂಡಿಸಿದ "Performance of Female Kabaddi Players in Relation to Selected Psychological and Psychomotor Variables" ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು. ದೈಹಿಕ ಶಿಕ್ಷಣ ವಿಷಯದಲ್ಲಿ ಇವರು ಮಂಡಿಸಿದ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯ ಪಿಹೆಚ್.ಡಿ ಪದವಿ ನೀಡಿದೆ. ಇವರು...
Loading posts...
All posts loaded
No more posts
