- Tuesday
- May 5th, 2026
ಬೆಳ್ಳಾರೆ ಗ್ರಾಮ ಪಂಚಾಯತಿನ ಅಧೀನಕ್ಕೆ ಒಳಪಟ್ಟ ಹಸಿಮೀನು ಮಾರುಕಟ್ಟೆಯ ಬಹಿರಂಗ ಹರಾಜು ಜ.29 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಈ ಬಾರಿ ಈ ಬಹಿರಂಗ ಹರಾಜಿನಲ್ಲಿ ಹಸಿಮೀನು ಮಾರುಕಟ್ಟೆಯನ್ನು ಒಂದು ವರ್ಷದ ಅವಧಿಗೆ 8.69 ಲಕ್ಷಕ್ಕೆ ಅಯ್ಯೂಬ್ ತಂಬಿನಮಕ್ಕಿ ಎಂಬವರು ಪಡೆದುಕೊಂಡರು.ಈ ಬಹಿರಂಗ ಹರಾಜಿನ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್.ರೈ, ಸದಸ್ಯರಾದ ಎನ್.ಎಸ್.ಡಿ ವಿಠಲ್ದಾಸ್,...
ದೇವಚಳ್ಳ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಆಶ್ರಯ ಕಾಲೋನಿ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಲಾಯಿತು.ಲೋಹಿತ್ ಶ್ರೀ ಕಟೀಲ್ ದೀಪ ಬೆಳಗಿಸಿದರು. ಅಂಗನವಾಡಿ ಸಹಾಯಕಿ ಪುಷ್ಪಾವತಿ ಪುರುಷೋತ್ತಮ ರಿಬ್ಬನ್ ತುಂಡರಿಸಿ, ಶಶಿಧರ್ ಮಾವಿನಕಟ್ಟೆ ತೆಂಗಿನಕಾಯಿ ಒಡೆದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸದಸ್ಯರಾದ ರಾಜೇಶ್ವರಿ ಮಾವಿನಕಟ್ಟೆ, ದುರ್ಗಾದಾಸ್ ಮೆತ್ತಡ್ಕ, ಅಲ್ಲದೇ ರಸ್ತೆಯ ಪಲಾನುಭವಿಗಳು ಉಪಸ್ಥಿತರಿದ್ದರು
ಕೊಡಗು ಸಂಪಾಜೆ ಪೆಟ್ರೋಲ್ ಬಂಕಿನ ಸಮೀಪದಲ್ಲಿ ರಿಕ್ಷಾದ ಹಿಂದಕ್ಕೆ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾಗಿದ್ದು, ಇದೇ ಸಂದರ್ಭದಲ್ಲಿ ಎದುರಿನಿಂದ ಬಂದ ಟಿಪ್ಪರ್ ಲಾರಿ ಹತ್ತಿ ರಿಕ್ಷಾ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ರಿಕ್ಷಾದಲ್ಲಿದ್ದ ಪ್ರಯಾಣಿಕ ಮಹಿಳೆ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರು ನಿಲ್ಲಿಸದೇ ಪರಾರಿಯಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ರಿಕ್ಷಾ ಚಾಲಕ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ವಾರ್ಷಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಜ 28 ರಂದು ರಾತ್ರಿ ನಡೆಯಿತು.ಆರಂಭದಲ್ಲಿ ಮಂಕೂಸ್ ಮೌಲೀದ್ ಪಾರಾಯಣ ನಡೆಯಿತು.ನಂತರ ದ್ಸಿಕ್ರ್ ಹಲ್ಕಾ ನಡೆಯಿತು.ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯ ಖತೀಬ್ ಮುಹಮ್ಮದ್ ರಫೀಖ್ ಬಾಹಸನಿ ಸಾಂದರ್ಭಿಕ ಭಾಷಣಗೈದರು.ಪಳ್ಳಿಮಜಲು ಮಸೀದಿಯ ಗೌರವಾಧ್ಯಕ್ಷರಾದ ಬಹು ಹಸನ್ ಸಖಾಫಿ ಬೆಳ್ಳಾರೆ ದು:ಆ ನೆರವೇರಿಸಿದರು.ಕರಿಂಬಿಲ ಮದರಸದ...
ಮಡಪ್ಪಾಡಿ ಗ್ರಾಮದ ಶೀರಡ್ಕ ಶ್ರೀ ಉಳ್ಳಾಕುಲು ಮತ್ತು ಮಲೆಭೂತಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಕುಲು ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ನೇಮೋತ್ಸವವು ಫೆ.01ನೇ ಆದಿತ್ಯವಾರದಿಂದ ಫೆ.04ನೇ ಬುಧವಾರದವರೆಗೆ ನಡೆಯಲಿದ್ದು, ಫೆ.01ರಂದು ಬೆಳಿಗ್ಗೆ 7:00 ಗಂಟೆಗೆ ಗಣಹೋಮ, 8:00 ಗಂಟೆಗೆ ನಾಗತಂಬಿಲ, 9:00 ಗಂಟೆಗೆ ವನದುರ್ಗಾಪೂಜೆ, 9:30ಗೆ ಉಪಹಾರ, 10:00 ಗಂಟೆಗೆ ಚಾವಡಿಯಲ್ಲಿ ಪ್ರತಿಷ್ಠಾ ಮಹೋತ್ಸವ...
ಸುಳ್ಯದ ಎಲ್.ಡಿ ಬ್ಯಾಂಕ್ನ ವಾಣಿಜ್ಯ ಕಟ್ಟಡಕ್ಕೆ ತಪ್ಪು ಮಾಹಿತಿ ನೀಡಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಅವರಿಗೆ ಮೆಸ್ಕಾಂ ದಂಡ ಪಾವತಿಸಿರುವ ವಿಚಾರ ಸಭೆಯಲ್ಲಿ ಪ್ರಸ್ತಾಪವಾಗಿ ಮೆಸ್ಕಾಂ ಇಂಜಿನಿಯರ್ ವರ್ತನೆಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ ಹಾಗೂ ಈ ಕುರಿತು ಸದಸ್ಯರಿಗೆ ಸ್ಪಷ್ಟ ಮಾಹಿತಿ ದೊರೆಯದೇ ಇದ್ದಾಗ ಮುಂದಿನ ಸಭೆಗೆ ದಾಖಲೆ ಸಹಿತ ವರದಿ ...
ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳನ್ನು ಬೆಂಕಿಯಿಂದ ರಕ್ಷಿಸುವ ಬಗ್ಗೆ ಸುಬ್ರಹ್ಮಣ್ಯ ಉಪ ವಿಭಾಗ ಮಟ್ಟದ ಒಂದು ದಿನದ ಜನಜಾಗೃತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರವು ಈ ದಿನ ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ ರವರು ವಹಿಸಿ...
ಮೌನವಾಗಿದ್ದೆ ನಾನು ಹಸಿರು ಚೆಲ್ಲುತ್ತಾ ಉಸಿರು ಪಸರಿಸುತ್ತಾ ಅಮೃತವಾಗಿ ಸಿರಿ ಸಮೃದ್ಧಿಯಾಗಿ ತಾಯ ಮಮತೆಯ ತೊಟ್ಟಿಲಾಗಿ ಹದವರಿತು ಕಾರ್ಯವೆಸಗುತಲಿದ್ದೆ ಕ್ಷಮೆಯಾಧರಿತ್ರಿಯಾಗಿ ಕಾಯುತಲಿದ್ದೆಬಡಿದೆಬ್ಬಿಸಿದೆ ನೀನು ವಿಕೃತಿಯ ಮೆರೆಯುತ್ತಾನಿನ್ನಾಸೆ ಆಮಿಷಗಳಿಗೆ ನನ್ನ ಬಲಿಕೊಟ್ಟೆ ನನ್ನೊಡಲ ನೀ ಬರಿದು ಮಾಡಿಬಿಟ್ಟೆ ನನ್ನುಸಿರಿನಲ್ಲೇ ನಿನ್ನುಸಿರು ಅದ ಮರೆತು ಬಗೆದೆ ನನ್ನ ಬಸಿರುನಿಗೂಢತೆಯ ಹೊತ್ತ ವಿಸ್ಮಯಗಳ ತಾಣದೊಳು ರಹಸ್ಯಗಳ ಒಡಲೊಳಿಟ್ಟು ಮೌನವಾಗಿದ್ದೆ ನಾನು...
ಜ.30ನೇ ಶುಕ್ರವಾರದಂದು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33 ಕೆ.ವಿ ಮಾರ್ಗ ಹಾಗೂ 33/11 ಕೆ.ವಿ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 4:00 ಗಂಟೆಯವರೆಗೆ ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ಉಪ ಕೇಂದ್ರಗಳಿಂದ ಹೊರಡುವ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ ಸುಬ್ರಹ್ಮಣ್ಯ ಉಪ ಕೇಂದ್ರದಿಂದ ಹೊರಡುವ ಹರಿಹರ...
ಕೊಡಗು-ಸಂಪಾಜೆ ಗ್ರಾಮದ ಕೊಯನಾಡು ಶ್ರೀ ಗಣೇಶ ಯುವ ಬಳಗ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಶ್ರಮದಾನ ಕಾರ್ಯ ನಡೆಯಿತು.ಸ್ವಚ್ಛ ಎಂದರೆ ನಿರ್ಮಲವಾದದ್ದು, ಪರಿಶುದ್ಧವಾದದ್ದು ಎಂದರ್ಥ ಸ್ವಚ್ಛ ಭಾರತ ಎಂದರೆ ಭಾರತ ದೇಶದ ಕಲುಷಿತ ಸ್ಥಳಗಳನ್ನು ನಿರ್ಮಲಗೊಳಿಸುವದು. ಸ್ವಚ್ಛ ಭಾರತ ಅಭಿಯಾನವು ಭಾರತ ದೇಶದ ಒಂದು ಅತ್ಯುತ್ತಮ ನೈರ್ಮಲ್ಯ ಯೋಜನೆಯಾಗಿದೆ ಈ ಉದ್ದೇಶದಿಂದ ಗಣರಾಜ್ಯೋತ್ಸವದಂದು ಕೊಯನಾಡಿನಿಂದ - ಚಿಟ್ಟೆಕಾನ...
Loading posts...
All posts loaded
No more posts
