- Monday
- July 27th, 2026
ಜಾಲ್ಸೂರು ಗ್ರಾಮದ ಸೋಣಂಗೇರಿಗೆ ಭೇಟಿ ನೀಡಿದ ಶಾಸಕಿ ಭಾಗೀರಥಿ ಮುರುಳ್ಯರವರು ಸ್ಥಳೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸನ್ಮಾನ: ಮಾ.14ರಂ ದು ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ ಸ್ಥಳೀಯ ಸ್ತ್ರೀಶಕ್ತಿ ಸಂಘಗಳಾದ ಬೆಳಕು ಮತ್ತು ಸ್ವರ್ಣಶ್ರೀ ಗುಂಪು ಹಾಗೂ ಸ್ಥಳೀಯ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ...
ಅರಂತೋಡು ಗ್ರಾ. ಪಂ. ವ್ಯಾಪ್ತಿಯ ಕೊಡೆಂಕಿರಿ – ಉದಯನಗರ – ಬಂಡಡ್ಕ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಾ.13ರಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ನೆರವೇರಿಸಿದರು.ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಆಡ್ತಲೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್, ಪುಷ್ಪರಾಜ್ ಕೊಡೆಂಕಿರಿ, ವೆಂಕಟ್ರಮಣ ಪೆತ್ತಾಜೆ, ಆರಂತೋಡು -ತೊಡಿಕಾನ ಸಹಕಾರಿ...
ಸುಳ್ಯದ ಮಂಡೆಕೋಲಿನಲ್ಲಿ ತಡರಾತ್ರಿ ಯುವಕನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕುರಿತು ದೂರು ದಾಖಲಾದ ಘಟನೆ ವರದಿಯಾಗಿದೆ. ಮಾ13ರ ತಡರಾತ್ರಿ ಸುಮಾರು ಒಂದು ಗಂಟೆಯ ಆಸುಪಾಸಿನಲ್ಲಿ ಈ ಘಟನೆ ನಡೆದಿದೆ. ಯುವಕನು ಅಪ್ರಾಪ್ತೆ ಯುವತಿಯ ಮನೆಯೊಳಗೆ ಪ್ರವೇಶಿಸಿ ದೌರ್ಜನ್ಯ ಕೃತ್ಯ ಎಸಗಲು ಯತ್ನಿಸಿದಾಗ ಯುವತಿ ಬೊಬ್ಬೆ ಹೊಡೆದುದರಿಂದ ಮನೆಯವರೆಲ್ಲ ಎಚ್ಚರಿಕೆಯಾಗಿ ಯುವತಿಯ ಕೊಠಡಿಗೆ ಬಂದಾಗ...
ಸುಳ್ಯದ ಅಂಬಟೆಡ್ಕ ಬಳಿಯಿಂದ ಮೆಸ್ಕಾಂ ನ ಸುಳ್ಯ ಶಾಖಾ ( sullia section office) ಕಛೇರಿಯನ್ನು ಕೇರ್ಪಳದಲ್ಲಿರುವ ಮೆಸ್ಕಾಂ ಕಾಟ್ರಾಸ್ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. 110 ಕೆವಿ ಕಾಮಗಾರಿ ಆರಂಭಗೊಂಡಿರುವುದರಿಂದ ಹಳೆಯ ಕಾಟ್ರಾಸ್ ಕಟ್ಟಡ, ಸುಳ್ಯ ಸೆಕ್ಷನ್ ಆಫೀಸ್ ಕಟ್ಟಡ ತೆರವುಗೊಳಿಸುವ ಉದ್ದೇಶದಿಂದ ಕೇರ್ಪಳಕ್ಕೆ ಸ್ಥಳಾಂತರಗೊಳಿಸಲಾಗಿದೆ.
ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕ ವತಿಯಿಂದ ಅಜ್ಜಾವರ ಮೇನಾಲದಲ್ಲಿರು ಸ್ಮಶಾನ ಜಾಗವನ್ನು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ಸಮೂದಾಯದವರಿಗೆ ಉಳಿಸಿಕೊಡಬೇಕೆಂದು ಸುಳ್ಯ ತಾಲೂಕು ಸಮಾಜಕಲ್ಯಾಣ ಇಲಾಖೆಗೆ ದೂರು ಅರ್ಜಿಯನ್ನು ಅಂಬೇಡ್ಕ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲರವರು ಅಧಿಕಾರಿಯ ವರಿಗೆ ನೀಡಿದರು.ಈ ಸಂದರ್ಭದಲ್ಲಿ ಅಂಬೇಡ್ಕರ್...
ಸರಕಾರವು ತಮ್ಮ ಆಡಳಿತದ ಅವಧಿಯಲ್ಲಿ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರು ನಾಯಕರುಗಳನ್ನು ನಾಮ ನಿರ್ದೇಶನ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ. ಅದರಂತೆ ಇದೀಗ ಸುಳ್ಯ ನಗರ ಪಂಚಾಯತ್ ಗೆ ಸರಕಾರವು ನಾಮನಿರ್ದೇಶನ ಮಾಡಲು ಮೂವರ ಹೆಸರನ್ನು ಅಂತಿಮಗೊಳಿಸಿದೆ ಎನ್ನಲಾಗಿದೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇದೀಗ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಸಿದ್ದಿಕ್ ಕೊಕ್ಕೊ , ಶಾರದಾಂಬ...
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದಲ್ಲಿ ಪೂಜಾ ಕಾರ್ಯಕ್ರಮಗಳು ಮಾ.12 ಮತ್ತು13 ರಂದು ನಡೆಯಿತು.ಮಾ.12 ರಂದು ರಾತ್ರಿ ವಾಸ್ತು ಪೂಜೆ ಹಾಗೂ ಮಾ13 ರಂದು ಗಣಹೋಮವು ಪುರೋಹಿತ ನಟರಾಜ ಶರ್ಮರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ, ಉಪಾಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ, ನಿರ್ದೇಶಕರುಗಳಾದ...
ಅರಂತೋಡು ಗ್ರಾಮದ ಪಿಂಡಿಮನೆ ರೇಣುಕಾಪ್ರಸಾದ್ ಎಂಬವರ ಮನೆಯಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಮಾ.14ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.ಅಂದಾಜು ಸುಮಾರು 180 ಕೆಜಿಯಷ್ಟು ರಬ್ಬರ್ ಶೀಟ್ ಗಳು ಬೆಂಕಿಗಾಹುತಿಯಾಗಿರುವುದಾಗಿ ತಿಳಿದುಬಂದಿದೆ. ರಾತ್ರಿ ವೇಳೆ ನಾಯಿ ಬೊಗಳುವ ಶಬ್ದ ಕೇಳಿ ಮನೆಯವರು ಹೊರಗೆ ಬಂದು ನೋಡಿದಾಗ ಬೆಂಕಿ ಹೊತ್ತಿ ಉರಿಯುತ್ತಿತ್ತು. ಮನೆಯವರೆಲ್ಲಾ ಸೇರಿ...
ಲೋಕಸಭಾ ಚುನಾವಣೆಯ ಅಂಗವಾಗಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳ ಸಭೆ ಮಾರ್ಚ್ ೧೩ರಂದು ನಡೆಯಿತು.ದ ಕ ಜಿಲ್ಲಾ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ. ಜಗದೀಶ್ ಕೆ. ನಾಯರ್ರವರು ಮಾಹಿತಿ ನೀಡಿದರು.ಮುಂಬರುವ ಲೋಕಸಭಾ ಚುನಾವಣೆ ೨೦೨೪ ರ ಚುನಾವಣೆಗೆ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಯಾವ ರೀತಿ ಸನ್ನದ್ಧರಾಗ ಬೇಕೆಂಬುದರ...
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ ಸ್ಪರ್ಧೆಯ ಟಿಕೆಟ್ ನೀಡಿದೆ. ಮಂಗಳೂರಿನ ರಥಬೀದಿಯಲ್ಲಿ...
Loading posts...
All posts loaded
No more posts
