- Monday
- July 27th, 2026
ಯಮಹ ಏರೋಕ್ಸ್ ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ ನಡೆದ ಘಟನೆ ಅರಂತೋಡು ನಯರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಸ್ಕೂಟರ್ ಸವಾರ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಣಾಮ ಮಾರುತಿ 800 ಕಾರು ಹಾಗೂ ಯಮಹ ಏರೋಕ್ಸ್ ದ್ವಿಚಕ್ರ ವಾಹನ ಜಖಂ ಗೊಂಡಿದೆ.
ರೋಟರಿ ಕ್ಲಬ್ ಸುಳ್ಯ ಸಿಟಿ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿ – 2024ಕ್ಕೆ ಶಿಕ್ಷಣ ತಜ್ಞ, ಸಾಹಿತಿ, ಸಂಶೋಧಕ, ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವ ಡಾ.ಚಂದ್ರಶೇಖರ ದಾಮ್ಲೆಯವರನ್ನು ಆಯ್ಕೆ ಮಾಡಲಾಗಿದೆ. ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಗಿರೀಶ್ ನಾರ್ಕೋಡು ಮಾ.14ರಂದು ರೋಟರಿ ಕ್ಲಬ್ ಸುಳ್ಯ ಸಿಟಿಯ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181ರ ಗವರ್ನರ್...
ಮಾ.8ರಂದು ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಉತ್ಸವವವು ಜರುಗಿತು. ಬೆಳಿಗ್ಗೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ದೇವರಗುಂಡಿಯಿಂದ ತೀರ್ಥ ತಂದು ಏಕದಶ ರುದ್ರಾಭಿಷೇಕ, ತಂತ್ರಿವರ್ಯರಿಂದ ಪಂಚವಿಂಶತಿ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ರಾತ್ರಿ ದೇವರಿಗೆ ರಂಗಪೂಜೆ, ಉತ್ಸವ ಬಲಿ ಜರುಗಿತು.ಈ ಸಂದರ್ಭದಲ್ಲಿ ದೇವಳದ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ರಾಧಾಕೃಷ್ಣ ಬೊಳ್ಳೂರು ರವರು ಆಯ್ಕೆ ಗೊಂಡಿರುತ್ತಾರೆ.
ಅರಂತೋಡಿನಿಂದ ಅಂಗಡಿಮಜಲು ಬಾಜಿನಡ್ಕ ಮೂಲಕ ಮರ್ಕಂಜ ಗ್ರಾಮದ ರೆಂಜಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾ.8ರಂದು ಸಂಜೆ ಗುದ್ದಲಿಪೂಜೆ ನೆರವೇರಿಸಿದರು.ಅರಂತೋಡು ಗ್ರಾಮದ ಅಂಗಡಿಮಜಲು ಬಾಜಿನಡ್ಕ ಮೂಲಕ ಮರ್ಕಂಜ ಗ್ರಾಮದ ರೆಂಜಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ದ್ವಿಚಕ್ರ ಸೇರಿದಂತೆ ಇತರೆ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಈ ಭಾಗದ ನಾಗರಿಕರು ಸೇರಿ...
ಬೆಳ್ಳಾರೆ : ದ.ಕ.ಸಂಸದ ಹಾಗೂ ಸುಳ್ಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನದಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ರಸ್ತೆ ಅಗಲೀಕರಣ, ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ಮಾ.8 ರಂದು ನಡೆಯಿತು.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಲಾನ್ಯಾಸ ನೆರವೇರಿಸಿದರು. ಪ್ರಾರಂಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ...
ಬೆಳ್ಳಾರೆ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ದ.ಕ.ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಕಳೆದ ಹದಿನೈದು ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ನಿರ್ಮಿಸಿದ ಅಟೋರಿಕ್ಷಾ ತಂಗುದಾಣವನ್ನು ಮಾ.8 ರಂದು...
ಮರ್ಕಂಜ ಗ್ರಾಮದ ಬೊಮ್ಮಾರು ಶಂಕರ ಗಿರಿ ಎಸ್.ನಾರಾಯಣ ಭಟ್ ರವರ ಪತ್ನಿ ಸುಶೀಲೆ (80) ಸ್ವಗೃಹದಲ್ಲಿ ಮಾ.06 ರಂದು ನಿಧನರಾದರು. ಮೃತರು ಪತಿ, ಪುತ್ರರಾದ ಉದಯಶಂಕರ, ಕೇಶವಪ್ರಕಾಶ್ , ಪುತ್ರಿಯರಾದ ಜಯಲಕ್ಷ್ಮಿ, ಸುಮನ, ಶೋಭ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುದೀರ್ಘ 31 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಮಾ.12 ರಂದು ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.08 ರಂದು ದೇವಸ್ಥಾನದಲ್ಲಿ ನಡೆಯಿತು.ಪದ್ಮನಾಭ ಭಟ್ ಮತ್ತು ಶ್ರೀಮತಿ ಚಂದ್ರಾವತಿ ಪಿ. ದಂಪತಿಗಳನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.ಸನ್ಮಾನ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ವಾಲ್ತಾಜೆಯ ಶಿರಾಡಿ ನದಿ ಬಳಿ ಹಾಗೂ ಬಲ್ಕಜೆ ಎಂಬಲ್ಲಿ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ರವರ ರೂ. 7.50 ಲಕ್ಷ ಅನುದಾನದಿಂದ ನಿರ್ಮಿಸುವ ಕಾಂಕ್ರೀಟ್ ರಸ್ತೆಯ ಗುದ್ದಲಿ ಪೂಜೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಗ್ರಾ.ಪಂ.ಸದಸ್ಯ ಭವಾನಿಶಂಕರ ಮುಂಡೋಡಿ,...
Loading posts...
All posts loaded
No more posts
