ಪಂಜ; ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಕಳ್ಳರು ಪರಾರಿ!

ಮನೆಗೆ ನುಗ್ಗಿದ ಕಳ್ಳ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಪರಾರಿಯಾದ ಘಟನೆ ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆಯಲ್ಲಿ ನಡೆದಿದೆ. ಸೀತಮ್ಮ ಎಂಬವರು ಪಕ್ಕದ ಮನೆಗೆ ಬಾಗಿಲು ಹಾಕಿ ಹೋಗಿದ್ದರು. ಈ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಹೋದಾಗ ಇಬ್ಬರು ಕಳ್ಳರು  ಮನೆಯ ಹಿಂಬಾಗಿಲಿನಿಂದ ನುಗ್ಗಿದ್ದು ಕಂಡು ಬಂದಿದೆ. ಇದೇ ವೇಳೆ...

ಸುಳ್ಯದ ಪ್ರತಿಷ್ಠಿತ ಖಾಸಗಿ ಹೋಟೆಲ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

ಸುಳ್ಯದ ಜೂನಿಯರ್ ಕಾಲೇಜು ಬಳಿಯ ಸದರ್ನ್ ರೆಸಿಡೆನ್ಸಿಯಲ್ಲಿ ಲಾರಿ ಚಾಲಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿರುವುದಾಗಿ ತಿಳಿದುಬಂದಿದೆ . ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಇಸಾಕ್ ಬೆಟ್ಟಂಪ್ಪಾಡಿ ಎಂದು ಹೇಳಲಾಗುತ್ತಿದ್ದು ಇದೀಗ ಹೋಟೆಲ್ ಬಳಿಯಲ್ಲಿ ಜನ ಸೇರ ತೊಡಗಿದ್ದು  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Ad Widget

ಕಡಬ; ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ! ಆರೋಪಿ ಸೆರೆ

ಮಾ. 04. ರಂದು ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿರುತ್ತದೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು...

ಸುಬ್ರಹ್ಮಣ್ಯ : ರಿಕ್ಷಾ ಪಲ್ಟಿ – ಚಾಲಕ ವಿವೇಕಾನಂದ ದೇವರಗದ್ದೆ ಮೃತ್ಯು

ಸುಬ್ರಹ್ಮಣ್ಯದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.ಸುಬ್ರಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಿವೇಕಾನಂದ ದೇವರಗದ್ದೆ ಮೃತ ದುರ್ದೈವಿ.

ಪಂಜ ಲಯನ್ಸ್ ಕ್ಲಬ್ ವತಿಯಿಂದ ವನವಾಸಿ ವಿದ್ಯಾರ್ಥಿ ನಿಲಯಕ್ಕೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ಕೊಡುಗೆ

ಲಯನ್ಸ್ ಕ್ಲಬ್ ಇದರ ವತಿಯಿಂದ, ಅಡ್ಕಾರ್ ವನವಾಸಿ ವಿದ್ಯಾರ್ಥಿ ನಿಲಯಕ್ಕೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷರು ಲ.ದಿಲೀಪ್ ಬಾಬ್ಲು ಬೆಟ್ಟು, ವಲಯ ಅಧ್ಯಕ್ಷರಾದ ಲ.ಸಂತೋಷ್ ಜಾಕೆ, ಕಾರ್ಯದರ್ಶಿ ಲ ವಾಸುದೇವ ಮೇಲ್ಪಾಡಿ, ಲ.ಆನಂದ ಗೌಡ ಹಾಗೂ ವನವಾಸಿ ವಿದ್ಯಾನಿಲಯದ ನಿರ್ದೇಶಕಿ ಶ್ರೀದೇವಿ ನಾಗರಾಜ್ ಭಟ್...

ಎಲಿಮಲೆ : ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಅಮರ ಸಂಘಟನಾ ಸಮಿತಿ ಸುಳ್ಯ , ಮಿತ್ರ ಬಳಗ ಎಲಿಮಲೆ, ಎಜೆ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ ನಡೆಯಿತು ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ...

ಕುಕ್ಕೆ ಸುಬ್ರಹ್ಮಣ್ಯ : ನಿರಂತರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ರವಿ ಕಕ್ಕೆಪದವು ಸಮಾಜ ಸೇವಾ ತಂಡ

ಕುಕ್ಕೆ ಸುಬ್ರಹ್ಮಣ್ಯ ನಾಗರಾದನೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮಣ್ಯದಲ್ಲಿ ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರೋದು ಸಾಮಾನ್ಯ. ಅಂತೆಯೇ ಇದೀಗ ನಿರಂತರವಾಗಿ ಪುಣ್ಯಕ್ಷೇತ್ರದ ತೀರ್ಥ ಸ್ಥಾನದ ನೀರಿನಲ್ಲಿ ಭಕ್ತಾದಿಗಳು ಬಟ್ಟೆ, ಪ್ಲಾಸ್ಟಿಕ್ ಹಾಗೂ ಕಚ್ಚಾ ವಸ್ತುಗಳನ್ನು ತೀರ್ಥ ಸ್ಥಾನದ ನೀರಿನಲ್ಲಿ ಎಸೆದು ಸ್ಥಾನದ ಕೊಳವೆಯನ್ನು ಮಾಲಿನ್ಯ ಮಾಡತಕ್ಕದ್ದು ಕಂಡು ಬರುತ್ತಿದೆ ಇದರಿಂದ ಮೀನುಗಳ ಆರೋಗ್ಯದ...

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಎನ್. ಮನ್ಮಥ ಅವಿರೋಧ ಆಯ್ಕೆ !

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕ ಸ್ಥಾನಕ್ಕೆ ಬಿಜೆಪಿಯಿಂದ ಎಸ್.ಎನ್.ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬೆಂಬಲಿತರಾಗಿ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎಸ್.ಎನ್.ಮನ್ಮಥ ರವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಅಧಿಕೃತ ಘೋಷಣೆ ಬಾಕಿಯುಳಿದಿದೆ. ಎಸ್ ಎನ್. ಮನ್ಮಥರವರು ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಜಿ.ಪಂ. ಮಾಜಿ...

ಸುಳ್ಯ : ಸ್ವರ್ಣಶ್ರೀ ಸೊಸೈಟಿಯ ಕಛೇರಿ ಸಹಾಯಕಿಯವರಿಗೆ ಬೀಳ್ಕೊಡುಗೆ

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ಕಛೇರಿ ಸಹಾಯಕಿಯಾಗಿ ಕಾಯ೯ನಿವ೯ಹಿಸುತ್ತಿದ್ದ ಶ್ರೀಮತಿ ಲಿಖಿತಾ ಎನ್ ಇವರಿಗೆ ಮಾ 02ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದಭ೯ದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾಯ೯ನಿರ್ವಹಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಡಾ. ಪುರು‌ಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ,...

ಸುಳ್ಯದಿಂದ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರಕ್ಕೆ ಟ್ಯಾಬ್ಲೋ ಸಹಿತ ಭವ್ಯವಾದ ಹಸಿರುವಾಣಿ ಮೆರವಣಿಗೆ

ಪ್ರಸಿದ್ಧ ಕ್ಷೇತ್ರವಾಗಿರುವ ಕಾಸರಗೋಡು ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ1 ರಿಂದ ಕಳಿಯಾಟ ಮಹೋತ್ಸವ ಆರಂಭಗೊಂಡಿದ್ದು ಮಾ.7 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಸುಳ್ಯದಿಂದ ಇಂದು ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆ ನಡೆಯಲಿದ್ದು ಮೆರವಣಿಗೆ ಮುಖಾಂತರ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ , ಕಿರಣ್ ಬಿಳಿಯಾರು , ಬಾಲಚಂದ್ರ ಅಡ್ಕಾರ್ ,...
Loading posts...

All posts loaded

No more posts

error: Content is protected !!