- Monday
- July 27th, 2026
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ “ಬಿ” ಇದರ ಆಡಳಿತದಲ್ಲಿ ನಡೆಯುತ್ತಿರುವ ಕೆ.ವಿ.ಜಿ ಪಾಲಿಟೆಕ್ನಿಕ್ (ಸರಕಾರಿ ಅನುದಾನಿತ) ಸುಳ್ಯ ಇದರ ಉಪ ಪ್ರಾಂಶುಪಾಲರನ್ನಾಗಿ ಅಟೊಮೋಬೈಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕರಾದ ಅಣ್ಣಯ್ಯ.ಕೆ ಇವರನ್ನುಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ “ಬಿ” ಇದರ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು ಪದೋನ್ನತಿ ನೀಡಿ...
ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದ ಕರಿಕ್ಕಳ - ಇರಿಂಜಿ ಕಾಲೋನಿಗೆ ಹೋಗುವ ರಸ್ತೆಯ ಕರಿಕ್ಕಳ ಎಂಬಲ್ಲಿ ರಸ್ತೆ ಕಾಂಕ್ರೀಟಿ ಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಸದಸ್ಯರಾದ ಶ್ರೀಮತಿ ಪವಿತ್ರ ಕುದ್ವ, ಶ್ರೀಮತಿ ಜಯಲತ ಕೆ. ಡಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸುಳ್ಯ ಸಹಾಯಕ ವ್ಯವಸ್ಥಾಪಕರಾದ ಮಂಜು ಕುಮಾರ್ ಅವರಿಗೆ ಕಲ್ಲಡ್ಕ ಶಾಖೆಗೆ ವ್ಯವಸ್ಥಾಪಕರಾಗಿ ಪದೋನ್ನತಿ ಅಭಿನಂದನಾ ಕಾರ್ಯಕ್ರಮ ಸುಳ್ಯ ಶಾಖೆಯಲ್ಲಿ ನಡೆಯಿತು. ಸುಳ್ಯ ಬ್ಯಾಂಕ್ ವ್ಯವಸ್ಥಾಪಕರಾದ ಅರುಣ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭಾಶಯ ಕೋರಿದರು. ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದ ಸೆಲ್ಕೋ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಆಶಿಕ್ ಅವರು ನೆರವೇರಿಸಿದರು....
ವಿಧಾನಸಭಾ ಕ್ಷೇತ್ರದ ಸಂಚಾಲಕ ವೆಂಕಟ್ ವಳಲಂಬೆಯವರ ನೇತೃತ್ವದಲ್ಲಿ ಬಿ.ಜೆ.ಪಿ. ಗ್ರಾಮ ಚಲೋ ಪೂರ್ವಭಾವಿ ಸಭೆಯು ಸುಳ್ಯದ ಬಿಜೆಪಿ ಕಚೇರಿಯಲ್ಲಿ ಫೆ.9 ರಂದು ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಮಾಹಿತಿ ನೀಡಿದರು.ನ.ಪಂ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಸಂತೋಷ್ ಕುಮಾರ್ ಶೆಟ್ಟಿ ಬೋಳ್ಯಾರ್ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಮುಗುಪ್ಪು ಕೂಸಪ್ಪ ಗೌಡ,ಲೋಹಿತ್ ಕೊಡಿಯಾಲ, ಶೀನಪ್ಪ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 32 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾಗುತ್ತಿರುವ ಪದ್ಮನಾಭ ಭಟ್ ರನ್ನು ಗುರುದೇವ ಭಜನಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಿಡಿಓ ಶ್ಯಾಂ ಪ್ರಸಾದ್ , ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾದ ಶ್ರೀನಿವಾಸ ಮಡ್ತಿಲ, ಶಿವಪ್ಪ ಗೌಡ ನೆಕ್ಕರೆಕಜೆ, ಮಾಜಿ ಸದಸ್ಯ ರಾದ ವಾಮನ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆವರಣದಲ್ಲಿ ಕಡಬ ತಾಲೂಕಿನ ಪ್ರಪ್ರಥಮ ಡಿಜಿಟಲ್ ಹಾಗೂ ಬಿಕನ್ ಲೈಬ್ರರಿ ಯನ್ನು ಇಂದು ಗುರುವಾರ ಏನೆಕಲ್ ಪೂಜಾರಿ ಮನೆ ವಿಶೇಷ ಚೇತನ ಶಮನ್ ಕುಮಾರ್ ಅವರು ಉದ್ಘಾಟನೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜಮೂ ಲೆ ಅವರು ಮಾತನಾಡಿ ಕರ್ನಾಟಕ ರಾಜ್ಯದ 5623...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಪ್ರಾರಂಭಗೊಂಡಿದ್ದು ಫೆ.10 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ.08 ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಉಗ್ರಾಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ,...
ತಾಲೂಕು ಕಚೇರಿಯಲ್ಲಿ ಸುಳ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಕೆ: ಚುನಾವಣೆಯಲ್ಲಿ ಇ.ವಿ.ಎಂ. ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ನೀಡಬೇಕೆಂಬ ಬೇಡಿಕೆಯೊಂದಿಗೆ, ಸಾಮಾಜಿಕ ಕಳಕಳಿಯಿಂದ ರೈತ ಮುಖಂಡ ದಿವಾಕರ ಪೈ ಅವರು ಫೆ.8ರಂದು ಬೆಳಿಗ್ಗೆ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಯಿಂದ ಸುಳ್ಯದವರೆಗೆ ಪಾದಯಾತ್ರೆ ಮೂಲಕ ಸಂಜೆ 4 ಗಂಟೆಗೆ ಗಾಂಧಿನಗರಕ್ಕೆ ಬರುತ್ತಿದ್ದಂತೆ ಸುಳ್ಯ...
ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನದ ನೇಮೋತ್ಸವದ ಆಮಂತ್ರಣ ಪತ್ರವು ಫೆ.8 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಮಾ.9 ಮತ್ತು 10 ರಂದು ಸುಳ್ಯ ಕಸಬಾದ ಶಾಂತಿನಗರ ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ (ಮಡಪ್ಪುರ) ದ ನೇಮೋತ್ಸವವು ನಡೆಯಲಿದೆ. ದೈವಸ್ಥಾನದ ಮೊಕ್ತೇಸರ ರಾಮಕೃಷ್ಣ ಎಸ್.ಎನ್,ಮುತ್ತಪ್ಪ ದೈವರಾಧನಾ ಸಮಿತಿ ಅಧ್ಯಕ್ಷಪಿ.ಎಂ. ಮಧುಸೂದನ ಹಾಗೂ ಸದಸ್ಯರು,...
ಸುಳ್ಯ ಪೊಲೀಸ್ ವೃತ್ತದ ನೂತನ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಂಡು ಕೆ . ಸತ್ಯನಾರಾಯಣ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಚುನಾವಣಾ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರುವಿನಿಂದ ಸುಳ್ಯಕ್ಕೆ ವರ್ಗಾವಣೆಗೊಂಡು ಬಂದ ಅವರನ್ನು ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ಮೋಹನ್ ಕೊಠಾರಿ ಹಾಗೂ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ನೂತನ ವೃತ್ತ ನಿರೀಕ್ಷಕರನ್ನು ಸ್ವಾಗತಿಸಿದರು. ಕೆ. ಸತ್ಯನಾರಾಯಣರವರು ಶೃಂಗೇರಿ...
Loading posts...
All posts loaded
No more posts
