- Tuesday
- July 28th, 2026
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಂದು ಕಳಂಜ ವಿಷ್ಣುನಗರದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಭ್ರಾಮರಿ ಭಜನಾ ತಂಡ ತಂಟೆಪ್ಪಾಡಿ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಎಲ್.ಇ.ಡಿ. ಪರದೆಯ ಮೂಲಕ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದರು.
ರಾಮಜನ್ಮಭೂಮಿಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಟಾಪನೆ ಹಿನ್ನಲೆಯಲ್ಲಿ ಸುಳ್ಯದ ಹಿಂದು ಕಾರ್ಯಕರ್ತ ಪದ್ಮನಾಭ ಹರ್ಲಡ್ಕರವರು ಮುಂಜಾನೆ 7 ರಿಂದ ಸಂಜೆ 6 ಗಂಟೆಗಳ ತನಕ ಅವರ ಆಟೋ ರಿಕ್ಷಾದಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿದ್ದು ಯಾವುದೇ ಯಾರೆ ಹತ್ತಿದರು ಈ ದಿನ ಉಚಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.
ದೇಶದಾದ್ಯAತ ಅಯೋಧ್ಯೆ ಬಾಲರಾಮ ಪ್ರಾಣಪ್ರತಿಷ್ಟೆ ಹಿನ್ನಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ರಾಮನಾಮ ಜಪ, ಭಜನಾ ಕಾರ್ಯಕ್ರಮಗಳು ನಡೆಯುತ್ತಿವೆ. ಹಿರಿಯ ನಾಯಕ ಲಾಲ್ ಕೃಷ್ಣ ಅದ್ವಾನಿಯವರ ನೇತ್ರತ್ವದಲ್ಲಿ ಹಲವಾರು ಹೋರಾಟಗಳನ್ನು ನಡೆದು ಇದೀಗ ದೇಶದ ಮಂದಿರವಾಗಿ ಮಾರ್ಪಾಡಾಗಿ ಸೌಹಾರ್ದತೆಗೆ ಇದೀಗ ಸಾಕ್ಷಿಯಾಗಿರುವ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಮುಜರಾಯಿ ದೇವಾಲಯಗಳಲ್ಲಿ ಸರಕಾರದ ಆದೇಶದ ಪ್ರಕಾರ ವಿಶೇಷ ಪೂಜೆ ನಡೆಯಲಿದ್ದು...
ಶುಭ ದಿನವಾದ ಜ.೨೨ರಂದು ಅಯೋಧ್ಯೆಯಲ್ಲಿ ಬಾಲರಾಮನ ಪಾಣಪ್ರತಿಷ್ಟ ಮಹೋತ್ಸವದ ಶುಭ ಘಳಿಗೆಯಲ್ಲಿ ಮಂಡೆಕೋಲಿನ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಅಶಕ್ತ ಮಹಿಳೆಗೆ ಸಹಾಯಧನವನ್ನು ವಿತರಿಸಿದರು.ಕನ್ಯಾನದ ಕೇಳು ಮಣಿಯಾಣಿ ಅವರ ಪತ್ನಿ ಲಕ್ಷ್ಮಿಯವರು ಎರಡೂ ಕಿಡ್ನಿಗಳು ವೈಫಲ್ಯಗೊಂಡ ಪರಿಣಾಮ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಅವರಿಗೆ ಚಿಕಿತ್ಸಾ ವೆಚ್ಚ ಭರಿಸಲು ರೂ. ೧,೦೦,೧೦೦ (...
ಗುತ್ತಿಗಾರಿನ ಶ್ರೀ ಕೃಷ್ಣಾ ಭಜನಾ ಮಂದಿರದಲ್ಲಿ ಫೆ.23 ರಂದು ಜರಗುವ ವಾರ್ಷಿಕ ಭಜನಾ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ದೇವರ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜ. 20 ರಂದು ಭಜನಾ ಮಂದಿರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಕಿಶೋರ್ ಕುಮಾರ್ ಪೈಕ, ಅಧ್ಯಕ್ಷ ರವಿಪ್ರಕಾಶ್ ಬಳ್ಳಡ್ಕ, ಕಾರ್ಯದರ್ಶಿ ಪೂರ್ಣಚಂದ್ರ ಪೈಕ, ಸದಸ್ಯರಾದ...
ದಿನಾಂಕ 20 ಮತ್ತು 21ನೇ ಶನಿವಾರ ಮತ್ತು ಆದಿತ್ಯವಾರದಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳವು ಕಡಬ ತಾಲೂಕಿನ ಸವಣೂರಿನಲ್ಲಿ ಜರಗಿತು.ಈ ಸಂದರ್ಭದಲ್ಲಿ ನಡೆದ ಗುಂಪು ಸ್ಪರ್ಧೆಗಳಾದ ಗೀಗಿ ಪದ, ಜನಪದ ಗೀತೆ, ವೀರಗಾಸೆ, ಡೊಳ್ಳು ಕುಣಿತ, ದೊಡ್ಡಾಟ ಮತ್ತು ಸಣ್ಣಾಟ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ, ತುಳುಪಾಡ್ದನ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಹಾಗೂ ಕೋಲಾಟ...
(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.24 ಬುಧವಾರದಂದು ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮರಾಕ್ಷಸ ಪೂಜೆ ಹಾಗೂ ಕಲಶಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00...
ಸುಳ್ಯ ತಾಲೂಕಿನಲ್ಲಿ ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದಸಿ ಆರ್ ಪಿ ಸಿ 1973 ಕಲಂ 144 ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್ ಆದೇಶ ಹೊರಡಿಸಿದ್ದರು. ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಗೊಂಡ ಕೂಡಲೇ ಪುನಃ ತಹಶೀಲ್ದಾರ್ ರವರು ಆದೇಶ ಹಿಂಪಡೆದ ಮರು...
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ರವಿವಾರ ದೈವಗಳ ನೇಮ ನಡೆಯಿತು. ಜ.21 ರಂದು ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮ, ಪ್ರಸಾದ ವಿತರಣೆ ನಡೆಯಿತು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ,...
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...
Loading posts...
All posts loaded
No more posts
