ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಮಂಡೆಕೋಲು ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮತ್ತು ರಾಮ ಮಂದಿರ ಲೋಕಾರ್ಪಣೆ ದಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸಿ ಅರ್ಚನೆ, ವಿಶೇಷಪೂಜೆ ಹಾಗೂ ಬಲಿವಾಡುಕೂಟ ನಡೆಯುವುದು. ಸಂಜೆ ಮಂಡೆಕೋಲು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಹಸ್ರ ದೀಪ ಪ್ರಜ್ವಲನೆ, ರಾಮನಾಮ ಸಂಕೀರ್ತಣಾ ಕಾರ್ಯಕ್ರಮ ನಡೆಯಲಿದೆ.
Ad Widget

ಸಂಪಾಜೆ ಧಾನ್ಯದ ಸಹಕಾರಿ ಸಂಘದ ಚುನಾವಣೆ – ಅವಿರೋಧ ಆಯ್ಕೆ

ಸಂಪಾಜೆ ಧಾನ್ಯದ ಸಹಕಾರಿ ಸಂಘ ನಿಯಮಿತ , ಸುಳ್ಯ ದ.ಕ. ಇದರ ಮುಂದಿನ ಐದು ವರ್ಷಗಳಿಗೆ ನಡೆದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ 17 ಜನ ಅರ್ಹ ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಜ.15 ರಂದು ನಡೆದು ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ನಾಲ್ಕು ಜನ ನಾಮಪತ್ರ ಹಿಂಪಡೆದಿದ್ದುದರಿಂದ ಎಲ್ಲಾ ನಿರ್ದೇಶಕರು ಅವಿರೋಧವಾಗಿ...

ಪೆರುವಾಜೆ : ದರ್ಶನ ಬಲಿ – ಬಟ್ಟಲು ಕಾಣಿಕೆ : ಹರಿದು ಬಂದ ಭಕ್ತ ಸಾಗರ

*ಪೆರುವಾಜೆ*: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಶ್ರೀ ದೇವರ ಪೇಟೆ ಸವಾರಿ ನಡೆಯಿತು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...

ಅರಂತೋಡು ಅಡ್ತಲೆ ರಸ್ತೆ ಡಾಮರೀಕರಣ ಮತ್ತೆ ಆರಂಭ

ಅರಂತೋಡು - ಅಡ್ತಲೆ ಲೋಕೋಪಯೋಗಿ ರಸ್ತೆ ಅಗಲೀಕರಣ ಹಾಗೂ ಡಾಮರೀಕರಣ ಸಂಪೂರ್ಣಗೊಳ್ಳದೆ ಬಾಕಿ ಉಳಿದಿತ್ತು. ಈ ಬಗ್ಗೆ ನಾಗರಿಕ ಹಿತರಕ್ಷಣ ವೇದಿಕೆಯು ಜನಪ್ರತಿನಿಧಿಗಳಿಗೆ ಮತ್ತೊಮ್ಮೆ ಮನವಿ ಮಾಡಿತ್ತು. ಇದೀಗ ಅರಂತೋಡು - ಅಡ್ತಲೆ ರಸ್ತೆಯಲ್ಲಿ ಬಾಕಿ ಇರುವ ಎರಡನೇ ಕೋಟ್ ಡಾಮಾರಿಕರಣ ಪ್ರಾರಂಭವಾಗಿದೆ. ಮನವಿಗೆ ಸ್ಪಂದಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ...

ಪೆರುವಾಜೆ : ಜಲದುರ್ಗಾದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ‌. ಈ ಪ್ರಯುಕ್ತ ಸುಮಾರು...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...

ಗ್ರಾಮೀಣ ಭಾಗದಲ್ಲಿ ಸ್ವ ಉದ್ಯೋಗಿಗಳಿಗೆ ಸಲಕರಣೆ ಜೋಡಣೆಗೆ ಸೆಲ್ಕೋದಿಂದ ಶೇ.25 ಅನುದಾನ.

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಯೋಜನೆಗೆ ಸೆಲ್ಕೋ ಸೋಲಾರ್ ಸಂಸ್ಥೆಯು ಬ್ಯಾಂಕುಗಳ ಆರ್ಥಿಕ ಸಹಕಾರದೊಂದಿಗೆ ಸ್ವ ಉದ್ಯೋಗ ಉಪಕರಣ ಅಳವಡಿಕೆ ಮಾಡುವವರಿಗೆ ಶೇ 25 ರಷ್ಟು ಅನುದಾನ ನೀಡಲಾಗುವುದು ಸೆಲ್ಕೋ ಸಂಸ್ಥೆಯ ಜೀವನೋಪಾಯ ಇಲಾಖೆ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಸಾದ್ ಬಿ ಅವರು ತಿಳಿಸಿದ್ದಾರೆ . ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ...

ದಾರುಲ್ ಹಿಕ್ಮಾ ಶಾಲೆಯಲ್ಲಿ ಮೆಟ್ರಿಕ್ ಮೇಳ – ಸಂಭ್ರಮಿಸಿದ ವಿದ್ಯಾರ್ಥಿಗಳು

ಬೆಳ್ಳಾರೆ: ಇಲ್ಲಿನ‌ ದಾರುಲ್ ಹಿಕ್ಮಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮೆಟ್ರಿಕ್ ಮೇಳ( ಮಕ್ಕಳ ಸಂತೆ) ಬಹಳ ವಿಜ್ರಂಭಣೆಯಿಂದ ನಡೆಯಿತು..ಮೇಳವನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಮಹಮೂದ್ ಬಿ.ಎ ಅವರು ಉದ್ಘಾಟಿಸಿದರು. ಹಿಫಲ್ ವಿದ್ಯಾರ್ಥಿ ಖಾದ್ರಿಲ್ ಔಫ್ ರವರು ಖುರಾನ್ ಪಠಿಸುವುದರ ಮೂಲಕ ಕಾರ್ಯಕ್ರಮಗಳನ್ನು ಚಾಲನೆ ನೀಡಿದರು..ಮುಖ್ಯ ಅಥಿತಿಗಳಾಗಿ ಆಗಮಿಸಿದ ಸುಳ್ಯ ಅಲ್ಪ ಸಂಖ್ಯಾತ ದೊಡ್ಡ ಪ್ರಮಾಣದ...

ಕ್ಯಾಂಪ್ಕೋ ಸಂಸ್ಥೆಯ ವತಿಯಿಂದ ಸದಸ್ಯರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಕ್ಯಾಂಪ್ಕೊ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ ರಝಾಕ್ ಯಂ.ಎ. ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ. ಹತ್ತು ಸಾವಿರದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಜ. 17 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಶಾಖೆಯ ಪ್ರಬಂಧಕರಾದ ಕುಂಞoಬು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!