ಸುಳ್ಯ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಶನ್ (ರಿ.)ಯವರ ಸಹಭಾಗಿತ್ವದಲ್ಲಿ ಪುರುಷರ ೬೨ ಕೆ.ಜಿ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ ಮತ್ತು ಸನ್ಮಾನ

ಸುಳ್ಯ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಶನ್ (ರಿ.)ಯವರ ಸಹಭಾಗಿತ್ವದಲ್ಲಿ ಪುರುಷರ ೬೨ ಕೆ.ಜಿ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.೩೧ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣ ಮೂವಪ್ಪೆಯಲ್ಲಿ ನಡೆಯಲಿದೆ ಎಂದು ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ.)ಯ ಅಧ್ಯಕ್ಷರಾದ...

ಎಲ್ಲವು ಪಡೆದುಕೊಂಡ ಬಳಿಕ ನಮ್ಮಿಂದ ದೂರವಾಗಿದ್ದಾರೆ ನಮ್ಮದು ಕಾರ್ಯಕರ್ತರ ಪಕ್ಷವೇ ಹೊರತು ನಾಯಕರ ಪಕ್ಷವಲ್ಲ- ಕಂಜಿಪಿಲಿ

ಸುಳ್ಯದಲ್ಲಿ ಧೀಢೀರ್ ರಾಜಕೀಯ ಬೆಳವಣಿಗೆಯಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳುರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತನಾಡುತ್ತಾ https://youtu.be/fwBEnvmzRqc?si=FDggDuJSJzNujBvK ನಾವು ಎಲ್ಲಾ ಸ್ಥಾನಮಾನವನ್ನು ನೀಡಿದ್ದು ಅವರು ಇದೀಗ ಕೇವಲ ಎರಡು ಗ್ರಾಮಕ್ಕೆ ನಾಯಕರಾಗಿದ್ದವರನ್ನು ಜಿಲ್ಲಾ ಹಾಗೂ ರಾಜ್ಯ ನಾಯಕರ ಕಾಲು ಹಿಡಿದು ಜಿಲ್ಲಾ ಅಧ್ಯಕ್ಷರಾಗಿ ಮಾಡಿದ್ದೆವು ಎಂದು ಹೇಳಿದರು. ಅವರು ಅಧಿಕಾರ...
Ad Widget

ಸುಳ್ಯ ಸಿ ಎ ಬ್ಯಾಂಕ್ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಹೆಸರು ಪ್ರಕಟ.

ಸುಳ್ಯ ತಾಲೂಕಿನ ಸುಳ್ಯ ನಗರ ಮತ್ತು ಅಜ್ಜಾವರ ಗ್ರಾಮಕ್ಕೆ ಸಂಭದಿಸಿದಂತೆ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕೃತ ಅಭ್ಯರ್ಥಿಗಳನ್ನು ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಪ್ರಕಟಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಸುಳ್ಯದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು ಇಲ್ಲಿ ಕೃಷಿಕರಿಗೆ ತಾಲೂಕಿನಲ್ಲಿ ಪ್ರಥಮಭಾರಿಗೆ ಡಿವಿಡೆಂಟ್ ಶೇ 15 ನೀಡಲಾಗಿದೆ...

ಅಮರ ಸುದ್ದಿ ವರದಿ ಬಳಿಕ ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ವರ್ಗಾವಣೆ _ ಆ್ಯಂಬುಲೆನ್ಸ್ ಆಗಮನ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಎಂಬಲ್ಲಿ ನಿನ್ನೆ ತಡರಾತ್ರಿ ಕತ್ತಿಯಲ್ಲಿ ಕಡಿದು ಓರ್ವ ವ್ಯಕ್ತಿಯು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇತ್ತ ರಾಮಣ್ಣ ನಾಯ್ಕ ಮತ್ತು ಅವರ ಪತ್ನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲೆ ಕುಸಿದು ಬಿದ್ದಿದ್ದರು ಎಂದು ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತು ಸ್ಥಳೀಯ ಜನತೆ ಸರಕಾರಿ ಆಸ್ಪತ್ರೆಗೆ ಮಾಹಿತಿ ರವಾನಿಸಿದ ಹಿನ್ನಲೆಯಲ್ಲಿ...

ಪರಸ್ಪರ ಕತ್ತಿಯಲ್ಲಿ ಕಡಿದು ಆಸ್ಪತ್ರೆಗೆ ದಾಖಲು

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಎಂಬಲ್ಲಿ ನೆರೆಹೊರೆಯ ಮನೆಯವರಾದ ರಾಮಣ್ಣ ನಾಯ್ಕ ಮತ್ತು ಕಮಲಾಕ್ಷ ನಾಯ್ಕ ಎಂಬುವವರ ಮಧ್ಯೆ ನಿನ್ನೆ ರಾತ್ರಿ ಮಾತಿಗೆ ಮಾತು ಬೆಳೆದು ಕಡಿದು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ . ಸದ್ಯ ಕಮಲಾಕ್ಷ ನಾಯ್ಕ್ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರಿಗೆ ರಾಮಣ್ಣ ನಾಯ್ಕರು ಹಲ್ಲೆಗೈದು ಕಡಿದಿದ್ದಾರೆ ಎಂದು ಹೇಳಲಾಗುತ್ತಿದ್ದು...

ಸರಕಾರಿ ಪ್ರೌಢ ಶಾಲೆ ಎಣ್ಮೂರು:ಉಚಿತ ಮರುಬಳಕೆಯ ಪ್ಯಾಡ್ ವಿತರಣೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಮುಟ್ಟು ಗುಟ್ಟಲ್ಲ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ Karnataka seaferers trust ವತಿಯಿಂದ ನೀಡಲಾದ ಉಚಿತ ಮರುಬಳಕೆಯ ಪ್ಯಾಡ್ ನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತ ಸುವರ್ಣರವರು ವಹಿಸಿದ್ದರು. ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾl ವೀಣಾ ಅವರು ಹೆಣ್ಣುಮಕ್ಕಳ ಹದಿಹರೆಯದ ಸಮಸ್ಯೆಗಳು...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿಂಧೂ ಬಿ ರೂಪೇಶ್ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಶಿಕ್ಷಣ ವಿಭಾಗದ ನಿರ್ದೇಶಕಿ ಸಿಂಧೂ.ಬಿ.ರೂಪೇಶ್ ಭೇಟಿ ನೀಡಿದರು. ಶ್ರೀ ದೇವರ ದರುಶನ ಮಾಡಿದ ಅವರಿಗೆ ದೇವಳದ ಅರ್ಚಕರು ಶಾಲು ಹೊದಿಸಿ ಪ್ರಸಾದ ನೀಡಿದರು.ಬಳಿಕ ಅವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭ ಎಸ್‌ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ...

ಮರಳಿ ಕಾಂಗ್ರೆಸ್‌ ಗೆ ಸೇರ್ಪಡೆಗೊಂಡ ಬೊಳ್ಳೂರು

ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಬಿಜೆಪಿ ತೊರೆದು ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಸಚಿವರು ಹಾರ ಹಾಕಿ, ಕಾಂಗ್ರೆಸ್‌ ಶಾಲು ತೊಡಿಸಿ ಬೊಳ್ಳೂರು ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಬಿ.ಜೆ.ಪಿ. ಪ್ರಾಥಮಿಕ ಸದಸ್ಯತ್ವಕ್ಕೆ...

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು.ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪುತ್ತೂರು ಫಿಲೋಮಿನ ಕಾಲೇಜು ಕ್ಯಾಂಪಸ್ ನಿರ್ದೇಶಕ ರೆ.ಪಾ ಸ್ಟಾನಿಪಿಂಟೋ ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮಕ್ಕಳ ಅರೋಗ್ಯ ಮತ್ತು ಮಕ್ಕಳ ಸುರಕ್ಷತೆ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಪಾ...

ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಝಖರಿಯ ಜುಮಾ ಮಸೀದಿ ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಅನ್ನು ಮಸೀದಿಯ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಉರೂಸ್ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕಾದರ್ ಹಾಜಿ ಬಯಂಬಾಡಿ ಹಾಗೂ ಕಮಿಟಿಯ ಸದಸ್ಯರುಗಳು ಬೆಳ್ಳಾರೆ ಜಮಾಅತಿನ ಸದಸ್ಯರುಗಳು ಮತ್ತು ಉಸ್ತಾದರುಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!